ಬದುಕು ರಣರಂಗವಾಗದಿರಲು ಚದುರಂಗ ಆಡಿ


Team Udayavani, Jan 21, 2019, 5:58 AM IST

dvg-2.jpg

ದಾವಣಗೆರೆ: ಬದುಕು ರಣರಂಗ ಆಗದಿರಲು ಚದುರಂಗ ಆಡಬೇಕು ಎಂದು ಚಿತ್ರದುರ್ಗ ಮುರುಘಾಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಜಿಲ್ಲಾ ಗುರುಭವನದಲ್ಲಿ ಭಾನುವಾರ ಶ್ರೀ ಶಿವಯೋಗಾಶ್ರಮ ಟ್ರಸ್ಟ್‌ (ರಿ), ಜೈನ್‌ ಸೋಶಿಯಲ್‌ ಗ್ರೂಪ್‌, ರೋಟರಿ ಕ್ಲಬ್‌, ಜಿಲ್ಲಾ ಚೆಸ್‌ ಕ್ಲಬ್‌ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಜಯದೇವ ಟ್ರೋಫಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೌದ್ಧಿಕ ಜ್ಞಾನದ ಆಟ ಚದುರಂಗವಾಗಿದೆ. ಶರೀರಕ್ಕಿಂತ ಮೆದುಳಿನ ಕೆಲಸ ಈ ಆಟದಲ್ಲಿ ಹೆಚ್ಚಿದೆ. ಈ ಆಟದಿಂದ ಬುದ್ಧಿ ಚುರುಕಾಗುತ್ತದೆ. ಈ ಕ್ರೀಡೆಯಲ್ಲಿ ಆಸಕ್ತ ಮಕ್ಕಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕಿದೆ. ಮಕ್ಕಳು ಕೂಡ ಹೆಚ್ಚೆಚ್ಚು ಚದುರಂಗ ಆಟದಲ್ಲಿ ನೈಪುಣ್ಯತೆ ತೋರಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿ ಎಂದು ಸಲಹೆ ನೀಡಿದರು.

ಮಾನವನ ಬದುಕು ದಿನದಿಂದ ದಿನಕ್ಕೆ ಯುದ್ಧರಂಗ, ರಣರಂಗವಾಗುತ್ತಿದೆ. ಜೀವನದಲ್ಲಿ ಯಕಶ್ಚಿತ್‌ ಕಾರಣಕ್ಕೆ ಮನುಷ್ಯರ ನಡುವೆ ಮಾರಾಮಾರಿ, ಜಗಳ, ಹಣದ ಆಸೆಗಾಗಿ ಹಪಾಹಪಿಯಾಗುವಂತ ಸ್ಥಿತಿ ನಿರ್ಮಾಣವಾಗುತ್ತಿದೆ. ಮನುಷ್ಯ ಹಣದ ಗಳಿಕೆಯ ದುರಾಸೆಯಲ್ಲಿ ನಿರಾಸೆ, ದುಃಖ ಅನುಭವಿಸುತ್ತಿದ್ದಾನೆ ಎಂದು ಬೇಸರ ವ್ಯಕ್ತಪಡಿಸಿದ ಶ್ರೀಗಳು, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಸಮಚಿತ್ತವಾಗಿ ಜೀವನ ನಡೆಸಬಹುದು ಎಂದು ಹೇಳಿದರು.

ಮಹಾನಗರಪಾಲಿಕೆ ಸದಸ್ಯ ದಿನೇಶ್‌ ಕೆ.ಶೆಟ್ಟಿ ಮಾತನಾಡಿ, ಜೀವನದಲ್ಲಿ ಕಷ್ಟ-ಸುಖ ಬರುತ್ತವೆ. ಅದಕ್ಕೆ ಖನ್ನತೆಗೆ ಒಳಗಾಗಬಾರದು. ಧೈರ್ಯದಿಂದ ಸಮಸ್ಯೆಗಳನ್ನು ಎದುರಿಸಬೇಕು. ಚದುರಂಗ ಆಟದಿಂದ ಏಕಾಗ್ರತೆ, ಸ್ಮರಣಶಕ್ತಿ ವೃದ್ಧಿಯಾಗುತ್ತದೆ. ಹಾಗಾಗಿ ಚದುರಂಗ ಸ್ಪರ್ಧಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದ ಚೆಸ್‌ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರಲು ಮುಂದಾಗಿ ಎಂದರು.

ಇದೇ ವೇಳೆ 2015ರಲ್ಲಿ ನ್ಯಾಷನಲ್‌ ಅಮೆಚ್ಯೂರ್‌ ಚೆಸ್‌ನಲ್ಲಿ ಚಾಂಪಿಯನ್‌ ಹಾಗೂ 2016ರಲ್ಲಿ ಯೂರೋಪ್‌, ಗ್ರೀಸ್‌ ದೇಶಗಳಲ್ಲಿ ನಡೆದ ನ್ಯಾಷನಲ್‌ ಅಮೆಚ್ಯೂರ್‌ ಚೆಸ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ಮೈಸೂರಿನ ಚದುರಂಗ ತರಬೇತುದಾರ ಎಂ.ಪಿ. ಅಜಿತ್‌ ಅವರನ್ನು ಸನ್ಮಾನಿಸಲಾಯಿತು. ಜಿಲ್ಲೆಯ ವಿವಿಧ ಭಾಗಗಗಳಿಂದ 250ಕ್ಕೂ ಹೆಚ್ಚು ಚೆಸ್‌ ಸ್ಪರ್ಧಿಗಳು ಭಾಗವಹಿಸಿದ್ದರು. ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಚೆಸ್‌ ಕ್ಲಬ್‌ ಉಪಾಧ್ಯಕ್ಷ ಟಿ. ಯುವರಾಜ್‌, ಜಗದೀಶ್‌ ಬೇತೂರು, ಕರಿಬಸಪ್ಪ ಉಪಸ್ಥಿತರಿದ್ದರು.

ಮನೆಯತ್ತ ಮರಳಿದ ಚೆಸ್‌ ಸ್ಪರ್ಧಿಗಳು

ನಗರದ ನಿಟುವಳ್ಳಿ ಸರ್ಕಾರಿ ಪ್ರೌಢಶಾಲೆಯಿಂದ ಮೂವರು ವಿದ್ಯಾರ್ಥಿಗಳನ್ನು ಚೆಸ್‌ ಸ್ಪರ್ಧೆಗೆ ಕರೆದುಕೊಂಡು ಬಂದಿದ್ದೇನೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ್ದರಿಂದ ಸ್ಪರ್ಧೆಯ ಪ್ರವೇಶ ಉಚಿತವೆಂದು ಭಾವಿಸಿದ್ದೆವು. ಆದರಿಲ್ಲಿ ಉಚಿತವಾಗಿ ಆಡಿಸಲಾಗುತ್ತಿಲ್ಲ. ಜ.28 ರಿಂದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಕೂಡ ಮಾಡಲಾಗುತ್ತಿತ್ತು. ಆದರೂ, ಕ್ರೀಡೆಗೆ ಉತ್ತೇಜನ ನೀಡಲು ಹಾಗೂ ಅವರ ಹಿಂದಿನ ಸಾಧನೆ ಗುರುತಿಸಿ, ತರಗತಿ ಬಿಡಿಸಿ ಕರೆದುಕೊಂಡು ಬಂದಿದ್ದು ವ್ಯರ್ಥವಾಗಿದೆ. ಹಾಗಾಗಿ ವಾಪಸ್‌ ಮನೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದೇನೆ ಎಂದು ಶಾಲೆಯ ಶಿಕ್ಷಕರು ನೋವು ತೋಡಿಕೊಂಡರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.