ವಾಹನಗಳಿಗೆ ಧಕ್ಕೆ ಆಗುತ್ತಿದ್ದರೂ ರಸ್ತೆ ದುರಸ್ತಿಯಾಗ್ತಿಲ್ಲ!


Team Udayavani, Jan 21, 2019, 7:44 AM IST

dvg-5.jpg

ಹರಿಹರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಇನ್‌ ಮತ್ತು ಔಟ್‌ ರಸ್ತೆಗಳು ಸುಮಾರು 3 ಅಡಿ ಕೆಳಗೆ ಇರುವ ಹಳೆ ಪಿಬಿ ರಸ್ತೆಗೆ ಕೂಡುವ ಜಾಗದಲ್ಲಿ ಕಡಿದಾದ ಇಳಿಜಾರಾಗಿರುವ ಪರಿಣಾಮ ಬಸ್‌ಗಳು ಸೇರಿದಂತೆ ನಿತ್ಯ ಸಾವಿರಾರು ವಾಹನಗಳಿಗೆ ಧಕ್ಕೆ ಆಗುತ್ತಿದ್ದರೂ ಯಾರೂ ಕಾಳಜಿ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ನಿಲ್ದಾಣದ ಒಳ ಬರುವ ಮತ್ತು ಹೊರ ಹೋಗುವ ಬಸ್‌ಗಳ ಹಿಂಭಾಗದ ಬಂಪರ್‌ ರಸ್ತೆಯ ಅಂಚಿಗೆ ತಾಗಿ ಬೆಂಡಾಗುವುದು, ಆಟೋ, ಕಾರ್‌ಗಳು ಕಡಿದಾದ ರಸ್ತೆ ಏರಲು, ಇಳಿಯಲು ಹರಸಾಹಸ ಪಡುವುದು, ದ್ವಿಚಕ್ರ ವಾಹನಗಳು ಬೀಳುವ ಘಟನೆಗಳು ನಿತ್ಯ ನಡೆಯುತ್ತಿದ್ದರೂ ಸಂಬಂಧಪಟ್ಟವರು ಕ್ರಮಕ್ಕೆ ಮುಂದಾಗಿಲ್ಲ. ಎರಡೂ ರಸ್ತೆಗಳು ಕೂಡುವ ಈ ಜಾಗದಲ್ಲಿ ಡ್ರೈನೇಜ್‌ ನಿರ್ಮಿಸಲೆಂದು ಸುಮಾರು 15 ಅಡಿಯಷ್ಟು ಸಿಮೆಂಟ್‌ ರಸ್ತೆ ಮಾಡದ ಕಾರಣ ವಾಹನಗಳು ಸಂಚರಿಸುವಾಗ ಧೂಳು ಏಳುತ್ತಿದ್ದು, ಸುತ್ತಮತ್ತಲ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ.

ಸಮಸ್ಯೆ ಉಟಾಗಿದ್ದು ಹೇಗೆ: ಬಸ್‌ಸ್ಟ್ಯಾಂಡ್‌ ರಸ್ತೆಗಳನ್ನು ನಿರ್ಮಿಸುವಾಗ ಪಿ.ಬಿ. ರಸ್ತೆಯ ಮಟ್ಟವನ್ನು ಗಮನಿಸಿ ಸ್ವಲ್ಪ ದೂರದಿಂದ ಇಳಿಜಾರು ಮಾಡದೆ ತುದಿವರೆಗೆ ಒಂದೆ ಮಟ್ಟದಲ್ಲಿ ನಿರ್ಮಿಸಲಾಗಿದೆ. ನಂತರದಲ್ಲಿ ಹಳೆ ಪಿಬಿ ರಸ್ತೆ ನಿರ್ಮಿಸುವಾಗ ಮುಂಚೆ ಇದ್ದ ಡಾಂಬರು ಕಿತ್ತು, ಅದೆ ಮಟ್ಟದಲ್ಲಿ ಕಾಂಕ್ರೀಟೀಕರಣ ಮಾಡಿದ ಪರಿಣಾಮ ಎರಡೂ ರಸ್ತೆಗಳ ಎತ್ತರದಲ್ಲಿ ಅಂತರ ಉಂಟಾಗಿದೆ. ಸಾರಿಗೆ ಹಾಗೂ ಪಿಡಬ್ಲ್ಯೂಡಿ ಇಲಾಖೆಗಳ ನಡುವಿನ ಸಮನ್ವಯ ಕೊರತೆ ಸಮಸ್ಯೆಗೆ ಕಾರಣವಾಗಿದೆ.

ಹೆದ್ದಾರಿ ನಿರ್ಮಿಸಿದ ನಂತರ ಇಲ್ಲಿ ಡ್ರೈನೇಜ್‌ ನಿರ್ಮಿಸಿಬೇಕಿದ್ದ ನಗರಸಭೆ ಹತ್ತಾರು ತಿಂಗಳಾದರೂ ಕಾಮಗಾರಿ ನಡೆಸಿಲ್ಲ. ಡ್ರೈನೇಜ್‌ ನಿರ್ಮಿಸಿದ ನಂತರ ಸುಮಾರು 15 ಅಡಿಗಳ ರಸ್ತೆಯನ್ನು ಇಳಿಜಾರು ಮಾಡಿದರೂ ಸಮಸ್ಯೆಯ ತೀವ್ರತೆ ಕಡಿಮೆಯಾಗಲಿದೆ. ಡ್ರೈನೇಜ್‌ ಕಾಮಗಾರಿ ಮಾಡುವಾಗ ಮತ್ತೆ ಸಿಮೆಂಟ್‌ ಕಿತ್ತುತ್ತಾರೆಂಬ ಕಾರಣಕ್ಕೆ ಲೋಕೋಪಯೋಗಿ ಇಲಾಖೆ ಅಲ್ಲಿ ಕಾಮಗಾರಿ ಮಾಡುತ್ತಿಲ್ಲ.

ಇಲ್ಲಿನ ನಿಲ್ದಾಣಕ್ಕೆ ನಿತ್ಯ 1500ಕ್ಕೂ ಅಧಿಕ ಬಸ್‌ಗಳು ಬಂದು ಹೋಗುತ್ತವೆ. ತಮ್ಮ ಬಸ್‌ಗಳಿಗೆ ಧಕ್ಕೆ ಆಗುವುದನ್ನು ತಡೆಯಲು ಸಾರಿಗೆ ಸಂಸ್ಥೆಯವರು ತಾತ್ಕಾಲಿಕವಾಗಿಯಾದರೂ ಡಾಂಬರೀಕರಣ ಮಾಡುವ ಬದಲು ಪಿಡಬ್ಲ್ಯೂಡಿ ಕಡೆಗೆ ಕೈ ಮಾಡಿ ತೋರಿಸುತ್ತಾರೆ. ಪಿಡಬ್ಲ್ಯೂಡಿಯವರು ನಗರಸಭೆಯತ್ತ ಬೆರಳು ತೋರಿಸುತಿದ್ದಾರೆ.

ನಗರಸಭೆಯವರು ಇನ್ನೂ ಅನುದಾನ ಬಂದಿಲ್ಲವೆಂದು ಗೊಣಗಾಡುತ್ತಿದ್ದಾರೆ. ಈ ಮೂರೂ ಇಲಾಖೆಯವರ ನಡುವೆ ಸಾರ್ವಜನಿಕರು ಬಸವಳಿದಿದ್ದಾರೆ. ಇನ್ನು ಜನಪ್ರತಿನಿಧಿಗಳಾದರೂ ಸಮಸ್ಯೆ ಪರಿಹರಿಸಲು ಮುಂದಾಗಲಿ ಎಂಬುದು ಜನರ ಆಗ್ರಹವಾಗಿದೆ. ನಿಗದಿತ ಮಟ್ಟದಲ್ಲಿ, ಅಳತೆಗೆ ತಕ್ಕಂತೆ ಹೆದ್ದಾರಿ ನಿರ್ಮಾಣ ಮಾಡಿದ್ದೇವೆ. ಆದರೆ ಡ್ರೈನೇಜ್‌ ಮಾಡಬೇಕಾದ ಜಾಗದಲ್ಲಿ ರಸ್ತೆಯನ್ನು ಮತ್ತೆ ಕೀತ್ತಲಾಗುತ್ತದೆ ಎಂದು ಇನ್‌, ಔಟ್‌ ಜಾಗದಲ್ಲಿ ಅಭಿವೃದ್ಧಿ ಕೈಗೊಂಡಿಲ್ಲ. ಕೆಎಸ್‌ ಆರ್‌ಟಿಸಿಯವರು ಅಳತೆಗೆ ತಕ್ಕಂತೆ ಚರಂಡಿಗೆ ಜಾಗ ಬಿಟ್ಟು ಡಕ್‌ ಸ್ಲ್ಯಾಬ್‌ ನಿರ್ಮಿಸಿಕೊಂಡರೆ ಸಮಸ್ಯೆ ಪರಿಹಾರವಾಗುತ್ತದೆ.
∙ಈಶ್ವರಪ್ಪ, ಎಇಇ, ಪಿಡಬ್ಲ್ಯೂಡಿ.

ಹೆದ್ದಾರಿ ಅಭಿವೃದ್ಧಿಪಡಿಸುವಾಗ ರಸ್ತೆ ಮಟ್ಟ ಎತ್ತರಿಸಲಾಗುತ್ತದೆ ಎಂದು ನಿರೀಕ್ಷಿಸಿ ನಾವು ದೂರದಿಂದ ಇಳಿಜಾರು ಮಾಡಿರಲಿಲ್ಲ. ಆದರೆ ಹೆದ್ದಾರಿ ನಿರ್ಮಿಸುವವರು ಹಳೆ ಡಾಂಬರು ಕಿತ್ತು ಮುಂಚಿನ ಮಟ್ಟದಲ್ಲೇ ರಸ್ತೆ ನಿರ್ಮಿಸಿದ್ದು ಸಮಸ್ಯೆಗೆ ಕಾರಣವಾಗಿದೆ.
 .ಡಿಪೋ ಮ್ಯಾನೇಜರ್‌  

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.