ಸಿದ್ಧಗಂಗಾ ಶ್ರೀ ಕಾಯಕತತ್ವದ ಕರ್ಮಯೋಗಿ


Team Udayavani, Jan 22, 2019, 6:22 AM IST

dvg-2.jpg

ದಾವಣಗೆರೆ: ತುಮಕೂರು ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಸಾಮಾಜಿಕ ನ್ಯಾಯದ ಹರಿಕಾರ, ಕಾಯಕತತ್ವದ ಕರ್ಮಯೋಗಿ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಾ| ಎಚ್.ಎಸ್‌. ಮಂಜುನಾಥ್‌ ಕುರ್ಕಿ ಸ್ಮರಿಸಿದರು. ಕುವೆಂಪು ಕನ್ನಡ ಭವನದಲ್ಲಿ ಸೋಮವಾರ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿದರು.

ಒಂದು ಮಠವನ್ನು ಹೇಗೆ ಸಮಾಜದಲ್ಲಿ ನಡೆಸಿಕೊಂಡು ಹೋಗಬಹುದು ಎಂಬುದರ ಬಗ್ಗೆ ತಿಳಿಸಿಕೊಟ್ಟ ದಾಸೋಹಿ, ಕರ್ಮಯೋಗಿ ಸಿದ್ದಗಂಗಾ ಶ್ರೀಗಳು. ಇಡೀ ಮನುಕುಲಕ್ಕೆ ಅವರು ಆದರ್ಶ. ಅವರ ಆದರ್ಶ, ಚಿಂತನೆ, ಸಂದೇಶಗಳು ಸಮಾಜದ ಓರೆಕೋರೆ ತಿದ್ದುವಲ್ಲಿ ಸಹಕಾರಿಯಾಗಿವೆ. ಅವರ ವಿಚಾರಧಾರೆಗಳು ಇಡೀ ಮನುಕುಲಕ್ಕೆ ದಾರಿದೀಪ ಎಂದರು.

ಸಾಹಿತಿ ಶಾಂತಗಂಗಾಧರ್‌ ಮಾತನಾಡಿ, ಬಡತನದಲ್ಲಿ ಬೆಳೆದು ಯಾರು ಉನ್ನತ ಮಟ್ಟಕ್ಕೆ ಬರುತ್ತಾರೋ ಅವರಿಗೆ ಮಾತ್ರ ಕಷ್ಟಗಳ ಅರಿವು ಇರಲು ಸಾಧ್ಯ. ಸಿದ್ದಗಾಂಗಾ ಶ್ರೀಗಳು ಕೂಡ ಅಂತಹ ಬಡತನದ ಕುಟುಂಬದಲ್ಲಿ ಬೆಳೆದು ಬಂದವರು. 1930ರಲ್ಲಿ ದೀಕ್ಷೆ ತೊಟ್ಟ ಶ್ರೀಗಳು, ನಂತರದಲ್ಲಿ ಸಾಕಷ್ಟು ಕುಗ್ರಾಮಗಳಲ್ಲಿ ಶಾಲೆಗಳನ್ನು ಪ್ರಾರಂಭ ಮಾಡಿದರು. ದಮನಿತರು, ಶೋಷಿತರು, ಅಕ್ಷರ ಸಂಸ್ಕೃತಿ ಕಂಡಿರದವರ ಏಳ್ಗೆಗೆ ಅನ್ನ, ಅಕ್ಷರ, ಆಶ್ರಯ ನೀಡಿ ಶ್ರಮಿಸಿದ ತ್ರಿವಿಧ ದಾಸೋಹಿಗಳು ಎಂದು ಸ್ಮರಿಸಿಕೊಂಡರು.

ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ವಾಮದೇವಪ್ಪ ಮಾತನಾಡಿ, ಬಸವತತ್ವ ಪ್ರಚಾರಕರು, ಅಕ್ಷರ ದಾಸೋಹಿಗಳಾದ ಸಿದ್ದಗಂಗಾ ಶ್ರೀಗಳು ಜಾತ್ಯತೀತವಾಗಿ ಎಲ್ಲಾ ವರ್ಗದವರಿಗೂ ಶಿಕ್ಷಣ ಹಾಗೂ ದಾಸೋಹ ಕಲ್ಪಿಸಿದ ಮಹಾನ್‌ಚೇತನರು ಎಂದು ಅಭಿಪ್ರಾಯಪಟ್ಟರು.

ನಿವೃತ್ತ ಶಿಕ್ಷಕಿ ಎಸ್‌.ಎಂ. ಮಲ್ಲಮ್ಮ ಮಾತನಾಡಿ, ಸಿದ್ದಗಂಗಾ ಶ್ರೀಗಳ ಶಿಷ್ಯ ವರ್ಗ ಅಪಾರ. ಅವರ ಶಿಷ್ಯ ಬಳಗದವರು ಇಂದು ದೇಶ, ವಿದೇಶಗಳಲ್ಲಿದ್ದರೂ ಕೂಡ ಸಮಾಜಮುಖೀ ಸೇವೆ ಸಲ್ಲಿಸುತ್ತಿದ್ದಾರೆ. ಅಂತಹ ನೈತಿಕ ಶಿಕ್ಷಣವನ್ನು ಶ್ರೀಗಳು ಶಿಷ್ಯ ವರ್ಗಕ್ಕೆ ಕಲಿಸಿದ್ದರು. ಅವರು ಅಪರೂಪದ ಜ್ಞಾನ, ತ್ಯಾಗಜೀವಿ ಎಂದು ಹೇಳಿದರು.

ಕಲಾಕುಂಚ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‌ ಶೆಣೈ ಮಾತನಾಡಿ, ಭಾರತರತ್ನ ಪ್ರಶಸ್ತಿಗೆ ಗೌರವ ದೊರಕುವ ನಿಟ್ಟಿನಲ್ಲಿ ಸಿದ್ದಗಂಗಾ ಶ್ರೀಗಳಿದ್ದರು. ಅವರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಭಾರತರತ್ನ ನೀಡಬೇಕು ಎಂದು ಒತ್ತಾಯಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ ನಿಕಟಪೂರ್ವ ಅಧ್ಯಕ್ಷ ಎ.ಆರ್‌. ಉಜ್ಜನಪ್ಪ, ಬುರುಡೆಕಟ್ಟೆ ಮಂಜಪ್ಪ, ಎನ್‌.ಎಸ್‌. ರಾಜು, ಸಿರಾಜ್‌ ಅಹಮದ್‌, ಜಿ.ಆರ್‌. ಷಣ್ಮುಖಪ್ಪ, ಬಿ. ದಿಳ್ಳೆಪ್ಪ, ಹನುಮಂತಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.