ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ


Team Udayavani, Jan 22, 2019, 6:51 AM IST

dvg-7.jpg

ಹೊನ್ನಾಳಿ: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗಾ ಮಠದ ಡಾ| ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಜಯಚಾಮರಾಜೇಂದ್ರ ವೃತ್ತದಲ್ಲಿ ಸಾರ್ವಜನಿಕರು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದವು ಶ್ರೀಗಳು ಲಿಂಗೈಕ್ಯರಾದ ಸುದ್ದಿ ಹಬ್ಬುತ್ತಿದ್ದಂತೆ ಇಡೀ ಪಟ್ಟಣದಲ್ಲಿ ನೀರವ ಮೌನ ಆವರಿಸಿತು.

ಸಾರ್ವಜನಿಕರು ಸ್ವಾಮಿಜಿಯವರ ಶಿಕ್ಷಣ, ವಸತಿ ಹಾಗೂ ಅನ್ನದಾಸೋಹದ ಕ್ರಾಂತಿಯನ್ನು ಸ್ಮರಿಸಿದರು. ಪ್ರತಿನಿತ್ಯ ಸಿದ್ದಗಂಗಾ ಮಠದಲ್ಲಿ 10 ಸಾವಿರ ವಿದ್ಯಾರ್ಥಿಗಳ ಅನ್ನ ದಾಸೋಹ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಅನ್ನಪೂರ್ಣೇಶ್ವರಿ ಖಾನಾವಳಿಯಲ್ಲಿ ಸೋಮವಾರ ಇಡೀ ದಿನ ಉಚಿತ ಊಟದ ವ್ಯವಸ್ಥೆಯನ್ನು ಖಾನಾವಳಿ ಮಾಲೀಕ ಕಾಶಿನಾಥ್‌ ಮಾಡಿದ್ದರು.
 
ಸಂತಾಪ: ಹಿರೇಕಲ್ಮಠದ ಡಾ| ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶಾಸಕ ಎಂ.ಪಿ. ರೇಣುಕಾಚಾರ್ಯ, ತಾ.ಪಂ ಅಧ್ಯಕ್ಷೆ ಚಂದ್ರಮ್ಮ, ಜಿ.ಪಂ ಸದಸ್ಯ ಎಂ.ಆರ್‌. ಮಹೇಶ್‌, ತಹಸೀಲ್ದಾರ್‌ ತುಷಾರ್‌ ಬಿ ಹೊಸೂರ, ತಾ.ಪಂ.ಇಒ ಕೆ.ಸಿ. ಮಲ್ಲಿಕಾರ್ಜುನ್‌, ಪತ್ರಕರ್ತರಾದ ಶ್ರೀನಿವಾಸ್‌, ವಿಜಯಾನಂದಸ್ವಾಮಿ, ಎನ್‌.ಕೆ.ಆಂಜನೇಯ, ಎಚ್‌.ಕೆ.ಮಲ್ಲೇಶ್‌, ಮಾಸಡಿ ಅರುಣ್‌ಕುಮಾರ್‌, ಮುಖಂಡರಾದ ಕಾಯಿ ಬಸವರಾಜು, ಪಲ್ಲವಿ ರಾಜು, ಪ್ರಶಾಂತ ಸಂತಾಪ ಸೂಚಿಸಿದ್ದಾರೆ.

ಕಾಯಕ ಯೋಗಿಗೆ ನುಡಿನಮನ 
ಬಸವಾದಿ ಶರಣರ ತತ್ವಗಳನ್ನು ವಾಸ್ತವದಲ್ಲಿ ಅನುಷ್ಠಾನಗೊಳಿಸಿದವರು, ತ್ರಿವಿಧ ದಾಸೋಹ ಮೂರ್ತಿ, ರಾಜ್ಯ ಕಂಡ ಅಪರೂಪದ ಸ್ವಾಮೀಜಿ. ಶ್ರೀಗಳ ಅಗಲಿಕೆಯಿಂದ ಧಾರ್ಮಿಕ ಕ್ಷೇತ್ರಕ್ಕಷ್ಟೇ ಅಲ್ಲ, ಒಟ್ಟಾರೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.
ಸಿದ್ಧರಾಮೇಶ್ವರ ಶಿವಾಚಾರ್ಯ ಶ್ರೀ, ವೃಷಭಪುರಿ ಸಂಸ್ಥಾನ, ನಂದಿಗುಡಿ.

ಜಾತಿ, ಮತ, ಪಂಥ, ಧರ್ಮ, ಪ್ರಾಂತ್ಯದ ಎಲ್ಲೆ ಮೀರಿ ತ್ರಿವಿಧ ದಾಸೋಹ ಮಾಡಿದವರು. ನಾಡಿನ ಲಕ್ಷಾಂತರ ಬಡ ಮಕ್ಕಳು ಅವರಿಂದ ಅಕ್ಷರ, ಅನ್ನ, ಆಶ್ರಯ ಪಡೆದು ಬದುಕನ್ನು ಕಟ್ಟಿಕೊಂಡರು. ಒಬ್ಬ ಧರ್ಮಾಧಿಕಾರಿ ಹೇಗಿರಬೇಕೆಂದು ಸಮಾಜಕ್ಕೆ ತೋರಿಸಿಕೊಟ್ಟ ಡಾ| ಶಿವಕುಮಾರ ಶ್ರೀಗಳು ನಿಜ ಅರ್ಥದಲ್ಲಿ ಬಸವಣ್ಣರ ತತ್ವ ಪಾಲಕರಾಗಿದ್ದರು. 
ಫಾ| ಅಂತೋನಿ ಪೀಟರ್‌, ಆರೋಗ್ಯ ಮಾತೆ ಚರ್ಚ್‌, ಹರಿಹರ.

ಶ್ರೀಗಳು ನಾಡನ್ನು ಬೆಳಗಿದ ಸರ್ವಶ್ರೇಷ್ಠ ಸಂತರಾಗಿದ್ದರು. ಬಸವಣ್ಣರ ತತ್ವ ಪಾಲಕರಾಗಿದ್ದರು. ತ್ರಿವಿಧ ದಾಸೋಹ ಅವರ ಮಹತ್ತರ ಕೊಡುಗೆ. ಅವರ ಅಗಲಿಕೆ ನಾಡಿನ ಧಾರ್ಮಿಕ, ಅಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ. 
ಪ್ರಸನ್ನಾನಂದ ಶ್ರೀ, ಮಹರ್ಷಿ ವಾಲ್ಮೀಕಿ ಗುರುಪೀಠ, ರಾಜನಹಳ್ಳಿ

ಕಾಯಕ ಮತ್ತು ದಾಸೋಹ ತತ್ವಗಳನ್ನು ಅನುಕ್ಷಣವೂ ಬಿಡದೆ ಮರಣದಲ್ಲೂ ಮಾನವೀಯತೆಯ, ಅಂತಃಕರಣದ ಸಂದೇಶ ನೀಡಿ ಭಕ್ತ ಸಮೂಹದಿಂದ ಲೌಕಿಕವಾಗಿ ಅಗಲಿ ಪರಮಾತ್ಮನಲ್ಲಿ ಐಕ್ಯವಾದ ನಡೆದಾಡುವ ದೇವರು ಕಾಯಕಯೋಗಿಗಳು, ತ್ರಿವಿಧ ದಾಸೋಹಿಗಳು. ಅವರ ದೈವ ಚೈತನ್ಯದ ವ್ಯಕ್ತಿತ್ವ ನಮ್ಮ ಜೊತೆ ಸದಾ ಹೆಜ್ಜೆ ಹಾಕುತ್ತಿರುತ್ತದೆ. ಶ್ರೀಗಳ ಜಾತ್ಯತೀತ, ಧರ್ಮಾತೀತ ಸೇವೆಯು, ಭಕ್ತ ಸಮೂಹಕ್ಕೆ ದಾರಿದೀಪವಾಗಿದೆ. ನಿರಂಜನಾನಂದಪುರಿ ಶ್ರೀ, ಕಾಗಿನೆಲೆ ಕನಕ ಗುರುಪೀಠ.

ಶ್ರೀಗಳು ಜನಪರ ಧೋರಣೆ, ಸಮಾಜಮುಖೀ ಚಿಂತನೆ ಉಳ್ಳವರಾಗಿದ್ದರು. ಉಳ್ಳವರಿಂದ ಪಡೆದು ಬಡವರ ಹಸಿವನ್ನು ನೀಗಿಸಿದರು. ಶ್ರೀಗಳು ಇತರೆಲ್ಲಾ ಮಠಗಳಿಗೂ ಆದರ್ಶಪ್ರಾಯವಾಗಿದ್ದರು. ಅವರ ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನ ಸರ್ವರಿಗೂ ಮಾದರಿಯಾಗಿದೆ. 
 ವೇಮನಾನಂದ ಶ್ರೀ, ವೇಮನಯೋಗಿ ಗುರುಪೀಠ, ಹೊಸಹಳ್ಳಿ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.