ಬಸ್‌ ನಿಲ್ದಾಣದಲ್ಲಿ ನಿತ್ಯ ಕಸಕ್ಕೆ ಬೆಂಕಿ!


Team Udayavani, Feb 1, 2019, 5:54 AM IST

dvg-4.jpg

ಹರಿಹರ: ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಿತ್ಯ ಕಸದ ರಾಶಿಗೆ ಬೆಂಕಿ ಹಾಕಿ ಸುಡಲಾಗುತ್ತಿದ್ದು ಇದರಿಂದ ತೀವ್ರ ಕಿರಿಕಿರಿಯಾಗುವುದಲ್ಲದೆ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ ಎಂದು ಸುತ್ತಮುತ್ತಲಿನ ಅಂಗಡಿಕಾರರು, ಪ್ರಯಾಣಿಕರು ಆರೋಪಿಸಿದ್ದಾರೆ.

ದಿನಕ್ಕೆ 1500ಕ್ಕೂ ಅಧಿಕ ಬಸ್‌ಗಳು ಬಂದು ಹೋಗುವ ನಿಲ್ದಾಣದಲ್ಲಿ ಸಹಜವಾಗಿಯೇ ಸಾಕಷ್ಟು ಕಸ ಸೃಷ್ಟಿಯಾಗುತ್ತದೆ. ಹೀಗೆ ಸಂಗ್ರಹವಾದ ಕಸವನ್ನು ಪಶ್ಚಿಮ ದಿಕ್ಕಿನಲ್ಲಿರುವ ಕಸದ ತೊಟ್ಟಿಗೆ ಹಾಕಿ ಕತ್ತಲಾಗುತ್ತಿದ್ದಂತೆ ಬೆಂಕಿ ಹಚ್ಚಿ ಸುಡಲಾಗುತ್ತದೆ. ನಿಲ್ದಾಣ ಸೇರಿದಂತೆ ಸುತ್ತಮುತ್ತಲ ವಾತಾವರಣದಲ್ಲಿ ದಟ್ಟ ಹೊಗೆ ಕವಿದು ಪ್ರಯಾಣಿಕರು ಹಾಗೂ ಸುತ್ತಲಿನ ನಿವಾಸಿಗಳಿಗೆ ಉಪದ್ರವವಾಗುತ್ತಿದ್ದರೂ ತಡೆಯುವವರಿಲ್ಲದಾಗಿದೆ.

ಕಸದಲ್ಲಿನ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳು, ಗುಟ್ಕಾ ಪಾಕೆಟ್, ನೀರು, ಜ್ಯೂಸ್‌ನ ಖಾಲಿ ಬಾಟಲಿಗಳು ಗಂಟೆಗಟ್ಟಲೆ ಸುಡುತ್ತಾ ಹೊಗೆ ಬರುವುದರಿಂದ ಪ್ರಯಾಣಿಕರು, ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳು ಅನಿವಾರ್ಯವಾಗಿ ಕಲುಪಿತ, ರಾಸಾಯನಿಕಯುಕ್ತ ಗಾಳಿಯನ್ನು ಸೇವಿಸಬೇಕಿದೆ. ಮಕ್ಕಳು, ವಯಸ್ಸಾದವರು ಕೆಮ್ಮುತ್ತಾ ಬಸ್‌ಗೆ ಕಾಯುವಂತಾಗಿದೆ.

ನಿಲ್ದಾಣದ ಸ್ವಚ್ಛತೆ ಕಾಪಾಡಲು ನೇಮಕಗೊಂಡಿರುವ ಗುತ್ತಿಗೆದಾರರು ಕಸ ಸಂಗ್ರಹಿಸಿ ನಿಗದಿತ ಸ್ಥಳಕ್ಕೆ ಸಾಗಿಸಬೇಕು. ಸಾಗಣೆ ಕೆಲಸ, ಖರ್ಚು-ವೆಚ್ಚದಿಂದ ತಪ್ಪಿಸಿಕೊಳ್ಳಲು ಅವರು ಕಸಕ್ಕೆ ಬೆಂಕಿ ಹಾಕಿ ಕೈತೊಳೆದುಕೊಳ್ಳುತ್ತಿದ್ದಾರೆ. ಆದರೆ 24 ಗಂಟೆ ನಿಲ್ದಾಣದಲ್ಲೇ ಇರುವ ಸಂಸ್ಥೆಯ ಅಧಿಕಾರಿಗಳು ಇದನ್ನು ಕಂಡೂ ಕಾಣದಂತಿರುವುದು ಆಶ್ಚರ್ಯ ಮೂಡಿಸಿದೆ. ಪ್ರಯಾಣಿಕರೇನಾದರೂ ಈ ಬಗ್ಗೆ ದೂರಿದರೆ ಬೆಂಕಿ ಹಾಕುವವರಿಗೆ ಹೇಳಿ, ನಮಗೇನು ಕೇಳುತ್ತೀರಿ ಎಂದು ಉತ್ತರಿಸುತ್ತಾರೆ.

ಅವ್ಯವಸ್ಥೆಯ ಆಗರ: ಇದಲ್ಲದೇ ರಾತ್ರಿ ಸಮಯದಲ್ಲಿ ನಿಲ್ದಾಣದಲ್ಲಿ ಬಹುತೇಕ ಲೈಟ್‌ಗಳು ಬೆಳಗುವುದಿಲ್ಲ. ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರಿಲ್ಲ, ಮಹಿಳೆಯರ ವಿಶ್ರಾಂತಿ ಕೊಠಡಿಯಿಲ್ಲ. ಪ್ರಯಾಣಿಕರು ಏನಾದರೂ ಸಮಸ್ಯೆ ಹೇಳಿದರೆ ಸದ್ಯದಲ್ಲೇ ಹೈಟೆಕ್‌ ಬಸ್‌ ನಿಲ್ದಾಣವಾಗಲಿದೆ ಎಂದು ಕಳೆದ 5-6 ವರ್ಷಗಳಿಂದ ಹೇಳುತ್ತಲೇ ಬರುತ್ತಿದ್ದಾರೆ.

ಬೆಳಗ್ಗೆ ಬೆಂಕಿ ಹಚ್ಚಲು ಹೇಳಿದ್ದೆ!
ನಿಲ್ದಾಣದಲ್ಲಿ ಕಸಕ್ಕೆ ಬೆಂಕಿ ಹಚ್ಚಿ ಪರಿಸರ ಮಾಲಿನ್ಯ ಮಾಡುತ್ತಿರುವ ಬಗ್ಗೆ ಡಿಪೋ ಮ್ಯಾನೇಜರ್‌ ಮರುಳಸಿದ್ದಪ್ಪರಿಗೆ ಕೇಳಿದಾಗ ಅವರು ಕಸಕ್ಕೆ ಬೆಳಗ್ಗೆ ಹೊತ್ತಲ್ಲಿ ಬೆಂಕಿ ಹಾಕಿ ಎಂದರೆ ಕೆಲಸಗಾರರು ಸಂಜೆ ಹಾಕುತ್ತಿದ್ದಾರೆ ಎಂದು ಹೇಳಿದರು. ಕಸಕ್ಕೆ ಬೆಂಕಿ ಹಾಕುವುದು ತಪ್ಪು, ಸೂಕ್ತ ರೀತಿಯಲ್ಲೆ ವಿಲೆ ಮಾಡಬೇಕಲ್ಲವೆ ಎಂದು ಪ್ರಶ್ನಿಸಿದಾಗ ಅವರು, ಕಸವನ್ನು ಬೇರೆಡೆಗೆ ಸಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.