ಐ ಲವ್ ಯೂ.. ಚಿತ್ರದ ಆಡಿಯೋ ಬಿಡುಗಡೆ
Team Udayavani, Feb 4, 2019, 5:17 AM IST
ದಾವಣಗೆರೆ: ಬೆಣ್ಣೆಯಂತಹ ಮನಸ್ಸಿನ ದಾವಣಗೆರೆಯಲ್ಲಿ ಐ ಲವ್ ಯೂ.. ಚಿತ್ರದ ಆಡಿಯೋ ಬಿಡುಗಡೆ ಆಗುತ್ತಿರುವುದು ತುಂಬಾನೇ ಖುಷಿ ವಿಚಾರ. ದಾವಣಗೆರೆ ಅಲ್ಲದೇ ಇಡೀ ರಾಜ್ಯದ ಜನರು, ಅಭಿಮಾನಿಗಳು ಐ ಲವ್ ಯೂ… ಚಿತ್ರಕ್ಕೆ ಖಂಡಿತವಾಗಿಯೂ ಐ ಲವ್.. ಅನ್ನುತ್ತಾರೆ. ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂದು ನಾಯಕ ನಟ ಉಪೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಭಾನುವಾರ ರಾತ್ರಿ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಐ ಲವ್ ಯೂ.. ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದಾವಣಗೆರೆಯ ಜನರು ಕನ್ನಡ ಚಿತ್ರಗಳ ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಸಾಕಷ್ಟು ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಕೊಳ್ಳೆ ಹೊಡೆಯಲು ದಾವಣಗೆರೆಯಲ್ಲಿ ಚಿತ್ರ ಗೆದ್ದರೆ ಮುಗಿಯಿತು ಎಂದು ಸಂತಸ ವ್ಯಕ್ತಪಡಿಸಿದರು.
ನನ್ನ ಅಭಿನಯದ ಎ… ಚಿತ್ರದ ಶತದಿನೋತ್ಸವ ಸಮಾರಂಭ ದಾವಣಗೆರೆಯಲ್ಲೇ ಆಗಿದ್ದು ನನಗೆ ಈಗಲೂ ನೆನಪಿನಲ್ಲಿದೆ. ಐ ಲವ್ ಯೂ… ಚಿತ್ರವೂ ಅದೇ ರೀತಿ ಯಶಸ್ಸು ಕಾಣಲಿದೆ ಎಂದ ಅವರು, ಜನರ ಹಷೊìೕದ್ಘಾರ ಕೇಳಿ, ರಕ್ತ ಕಣ್ಣೀರು ಚಿತ್ರದ ಶೈಲಿಯಲ್ಲಿ ಐ ಲೈಕ್ ಇಟ್… ಎನ್ನುವ ಮೂಲಕ ಇನ್ನಷ್ಟು ಹರ್ಷೋದ್ಘಾರಕ್ಕೆ ಕಾರಣರಾದರು.
ಉತ್ತಮ ಪ್ರಜಾಕೀಯ ಪಕ್ಷದ ಮೂಲಕ ರಾಜಕಾರದಲ್ಲಿ ಹೊಸ ಬದಲಾವಣೆ ತರುವ ಉದ್ದೇಶ ಇದೆ. ಆದೇ ಕಾರಣಕ್ಕಾಗಿಯೇ ನಾನು ಚಿತ್ರರಂಗಕ್ಕೆ ಬಂದಿದ್ದೇನೆ. ಸಿನಿಮಾದ ರಾಜಕೀಯ ಆ ಮೂಲಕ ಹೊಸ ಕ್ರಾಂತಿ ಮಾಡುವ ವಿಶ್ವಾಸ ಇದೆ ಎಂದರು.
ಸಂಗೀತ ನಿರ್ದೇಶಕ ಡಾ| ಕಿರಣ್ ಮಾತನಾಡಿ, ಐ ಲವ್ ಯೂ.. ಚಿತ್ರದಲ್ಲಿ ಒಟ್ಟು ಆರು ಹಾಡುಗಳಿವೆ. ಒಂದು ಹಾಡನ್ನು ಕ್ರೇಜಿಸ್ಟಾರ್ ರವಿಚಂದ್ರನ್ರವರೇ ನೀಡಿದ್ದಾರೆ. ಉಪೇಂದ್ರ ಮತ್ತು ಆರ್. ಚಂದ್ರು ಅವರ ಮೇಲಿನ ಪ್ರೀತಿಗಾಗಿ ರವಿಚಂದ್ರನ್ ಅವರೇ ರೆಕಾರ್ಡಿಂಗ್ ಮಾಡಿದ್ದಾರೆ. ಎಲ್ಲಾ ಹಾಡುಗಳು ಚೆನ್ನಾಗಿವೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಈಗಲೂ ಡಾಕ್ಟರ್ ಆಗಿ ಕೆಲಸ ಮಾಡುತ್ತಿರುವ ನನ್ನನ್ನು ಗುರುತಿಸಿ, ಆರ್. ಚಂದ್ರುರವರು ಮೊದಲ ಬಾರಿಗೆ ಸಂಗೀತ ನಿರ್ದೇಶನದ ಅವಕಾಶ ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ನಿರ್ದೇಶಕ ಆರ್. ಚಂದ್ರು ಮಾತನಾಡಿ, ಉಪೇಂದ್ರ ಬ್ರೈನ್, ನನ್ನ ಮೈಂಡ್ ಕಾಂಬಿನೇಷನ್ನಲ್ಲಿ ಐ ಲವ್ ಯೂ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡ, ತೆಲುಗು ಎರಡೂ ಭಾಷೆಯಲ್ಲಿ ಆದಷ್ಟು ಬೇಗ ತೆರೆ ಕಾಣಲಿದೆ. ಉಪೇಂದ್ರ ಎರಡು ವರ್ಷಗಳ ನಂತರ ಮೇಲೆ ತೆರೆಯ ಮೇಲೆ ಕಾಣಿಸಿಕೊಳ್ಳುವ ಮೂಲಕ ಎಲ್ಲರನ್ನೂ ರಂಜಿಸಲಿದ್ದಾರೆ ಎಂದರು.
ನಟಿ ಸೋನುಗೌಡ ಮಾತನಾಡಿ, ಉಪೇಂದ್ರ ನಟನೆ, ಚಿಂತನೆ ಅದ್ಭುತ ಎಂದು ಸಂತಸ ವ್ಯಕ್ತಪಡಿಸಿದರು.
ನಟಿ ರಚಿತಾರಾಮ್ ಮಾತನಾಡಿ, ನಮಸ್ಕಾರ ದಾವಣಗೆರೆ. ಲವ್ ಯೂ ಆಲ್ ಎಂದು ಫ್ಲೈಯಿಂಗ್ ಕಿಸ್ ಮಾಡಿದರು. ದಾವಣಗೆರೆಗೆ ಬಂದ ತಕ್ಷಣ ಬೆಣ್ಣೆ ದೋಸೆ ತಿಂದೆ. ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಇಷ್ಟೊಂದು ಜನ ನೋಡಿ ಸಂತಸವಾಗಿದೆ. ಏನು ಮಾತನಾಡಬೇಕು ಎಂದು ಗೊತ್ತಾಗದಷ್ಟು ಜನರನ್ನು ನೋಡ್ತಾ ಇದೀನಿ. ಸ್ಪೀಚ್ ಮರೆತೇ ಹೋಗಿದಿನಿ. ಮೊದಲ ಬಾರಿ ಉಪೇಂದ್ರ ಜೊತೆಗೆ ಕೆಲಸ ಮಾಡಿದ್ದು ತುಂಬಾ ಖುಷಿ. ಚಿತ್ರ ಎಲ್ಲರಿಗೂ ಇಷ್ಟವಾಗುತ್ತೆ ಎಂದರು.
ಐ ಲವ್ ಯೂ.. ಚಿತ್ರದ ಆಡಿಯೋ ಬಿಡುಗಡೆಗೆ ಮೇಯರ್ ಶೋಭಾ ಪಲ್ಲಾಗಟ್ಟೆ, ನಾಯಕ ನಟ ಉಪೇಂದ್ರ, ನಟಿಯರಾದ ರಚಿತಾರಾಮ್, ಸೋನುಗೌಡ, ಮಯೂರಿ, ಸಂಗೀತ ನಿರ್ದೇಶಕ ಗುರುಕಿರಣ್, ಡಾ. ಕಿರಣ್ ತೋಟಂಬೈಲ್, ಚಿತ್ರದ ನಿರ್ದೇಶಕ ಆರ್. ಚಂದ್ರು, ಲಹರಿ ವೇಲು, ಮೋಹನ್, ನಗರ ಪ್ರಭಾರ ಉಪಾಧೀಕ್ಷಕ ಗೋಪಾಲಕೃಷ್ಣ ಗೌಡ, ಕೇಂದ್ರ ವೃತ್ತ ನಿರೀಕ್ಷಕ ಇ. ಆನಂದ್, ಬಡಾವಣಾ ಪೊಲೀಸ್ ಠಾಣಾ ಪಿಎಸ್ಐ ವೀರಬಸಪ್ಪ ಕುಸಲಾಪುರ್ ಹಾಗೂ ಚಿತ್ರದ ನಿರ್ದೇಶಕ ಆರ್. ಚಂದ್ರು ಪತ್ನಿ ಯಮುನಾ ಚಂದ್ರು ಸಾಕ್ಷಿಯಾದರು. ಐ ಲವ್ ಯೂ.. ಚಿತ್ರದ ಆಡಿಯೋ ಬಿಡುಗಡೆ ಹಿನ್ನೆಲೆಯಲ್ಲಿ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನ ಕಿಕ್ಕಿರಿದು ತುಂಬಿತ್ತು.
ಸೋನು ಗೌಡ, ಐ ಲವ್ ಯೂ ಚಿತ್ರದ ಕಾಣೆಯಾದ.. ನಿಂಗೆ ಕಾದೇನಾ.. ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ರಂಜಿಸಿದರು. ಮಯೂರಿ ಡ್ಯಾನ್ಸ್ ಮೂಲಕ ವೇದಿಕೆಗೆ ರಂಗು ನೀಡಿದರು. ಅನುಶ್ರೀ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ