ತಾಪಮಾನ ಏರಿಕೆ ಅಪಾಯಕಾರಿ


Team Udayavani, Feb 4, 2019, 5:34 AM IST

dvg-3.jpg

ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆಯನ್ನು ತಡೆಯುವುದು ಪ್ರತಿ ವ್ಯಕ್ತಿ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ದೊಡ್ಡ ಸವಾಲಾಗಿದೆ ಎಂದು ದೊಡ್ಡಪೇಟೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.

ಜಯದೇವ ವೃತ್ತದ ಶಿವಯೋಗಾಶ್ರಮದಲ್ಲಿ ಭಾನುವಾರ ಶರಣ ಸಂಗಮದ ಅಂಗವಾಗಿ ಧರೆಹೊತ್ತಿ ಉರಿದಡೆ-ಜಾಗತಿಕ ತಾಪಮಾನ ಮತ್ತು ಜನಜೀವನ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.

ನಿತ್ಯದ ವಾತಾವರಣದ ಉಷ್ಣತೆ ಒಂದೊಂದು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾದರೂ ಕೂಡ ಅದರಿಂದಾಗುವ ಅಪಾಯ ಅಪಾರವಾದುದು. ಧ್ರುವಗಳಲ್ಲಿ ಹಿಮ, ನೀರ್ಗಲ್ಲು ಕರಗಿ ಸಮುದ್ರದ ಮಟ್ಟ ಏರಬಹುದು. ಕಡಲ ತಡಿಯ ಜನವಸತಿ ಪ್ರದೇಶಗಳು ಮುಳುಗಬಹುದು. ಆಹಾರ ಉತ್ಪಾದನೆ ಕೊರತೆ, ಮಳೆ ಬೀಳುವಲ್ಲಿ ಏರು-ಪೇರಾಗಬಹುದು. ಹಾಗಾಗಿ ಪರಿಸರದಲ್ಲಿ ಗಿಡ-ಮರಗಳನ್ನು ಹೆಚ್ಚೆಚ್ಚು ಬೆಳೆಸುವ ಮೂಲಕ ಇಡೀ ಜೀವ ಸಂಕುಲದ ಮೇಲಾಗುವ ತೊಂದರೆಯನ್ನು ತಪ್ಪಿಸಬೇಕಾಗಿದೆ ಎಂದರು.

ಆಧುನೀಕರಣ, ಯಾಂತ್ರೀಕರಣ, ಕೈಗಾರಿಕರಣದಲ್ಲಿ ಮಾನವ ಅನುಸರಿಸುತ್ತಿರುವ ನೀತಿಗಳು ಜಾಗತಿಕ ತಾಪಮಾನ ಹೆಚ್ಚಳಕ್ಕೆ ಕಾರಣವಾಗುತ್ತಿವೆ. ಇಂಗಾಲದ ಹೊರಸೂಸುವಿಕೆ, ಅರಣ್ಯ ಪ್ರದೇಶಗಳ ನಾಶ, ತಾಪಮಾನ ಏರಿಕೆಗೆ ಅತಿದೊಡ್ಡ ಕಾಣಿಕೆ ಕೊಡುತ್ತಿವೆ. ಈ ಧೋರಣೆ ಬದಲಾಗಬೇಕಿದೆ ಎಂದು ಹೇಳಿದರು.

ಓಲೆ ಹತ್ತಿ ಉರಿದಡೆ ನಿಲ್ಲಬಹುದಲ್ಲದೇ, ಧರೆ ಹೊತ್ತಿ ಉರಿದಡೆ ನಿಲ್ಲಬಹುದೇ ಅಯ್ನಾ ಎಂದು 12ನೇ ಶತಮಾನದಲ್ಲಿಯೇ ಬಸವಣ್ಣನವರು ಹೇಳುವ ಮೂಲಕ ಜನರನ್ನು ಎಚ್ಚರಿಸಿದ್ದಾರೆ. ಈ ವಾಕ್ಯವನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕಾಗಿದೆ ಎಂದರು. ಮಾನವ ಪರಿಸರಮುಖೀ ಜೀವನ ಸಾಗಿಸಿದಾಗ ಮಾತ್ರ ಪರಿಸರ ಉಳಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪರಿಸರಮುಖೀಯಾಗಿ ಜೀವನ ಸಾಗಿಸೋಣ. ಸಮಾಜದಲ್ಲಿ ಪರಿಸರ ನಾಶ ಆಗದಂತೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸೋಣ ಎಂದು ಹೇಳಿದರು.

ಪರಿಸರ ಅಧಿಕಾರಿ ಕೆ.ಬಿ. ಕೊಟ್ರೇಶ್‌ ಮಾತನಾಡಿ, ಜನರು ಸಮೃದ್ಧ ಗಾಳಿ, ಬೆಳಕು ಬರುವ ಪರಿಸರ ಸ್ನೇಹಿ ಮನೆಗಳ ನಿರ್ಮಾಣಕ್ಕೆ ಮುಂದಾಗಬೇಕು. ಇದಕ್ಕೆ ಇಂದಿನ ಇಂಜಿನಿಯರ್ ಕೂಡ ಕೈಜೋಡಿಸಬೇಕು. ನಶಿಸಲಾರದ ಇಂಧನ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿನ ಕಸವನ್ನು ವಿಂಗಡಣೆ ಮಾಡುವ ಮೂಲಕ ಭೂಮಿಯನ್ನು ಸಮೃದ್ಧವಾಗಿ, ಆರೋಗ್ಯಪೂರ್ಣವಾಗಿ ಇಡುವ ಕೆಲಸ ಮಾಡಬೇಕು. ಆಗ ಜಾಗತಿಕ ತಾಪಮಾನ ಕೂಡ ಕಡಿಮೆ ಆಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಕೃತಿ ಸಕಲ ಜೀವಿಗಳಿಗೂ ಉತ್ತಮ ಗಾಳಿ, ನೀರು, ಬೆಳಕು ಎಲ್ಲವನ್ನು ನೀಡುತ್ತಿದೆ. ಆದರೆ ನಮ್ಮ ದುರಾಸೆಗೆ ಪ್ರಕೃತಿ ನಾಶವಾಗುತ್ತಿದೆ. ಪ್ರಜ್ಞಾವಂತ ಜನರು ಗಿಡ-ಮರಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆ ಸಮೃದ್ಧ ಜೀವನ ನಡೆಸಲು ಅನುಕೂಲಕರ ವಾತಾವರಣ ನಿರ್ಮಿಸಿಕೊಡಬೇಕಿದೆ ಹೇಳಿದರು.

ರಾಜ್ಯ ಕಾಲೇಜು ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ಪ್ರೊ| ಸಿ.ಎಚ್. ಮುರಿಗೇಂದ್ರಪ್ಪ, ಹಿರಿಯ ಚಿತ್ರಕಲಾವಿದ ಮಹಾಲಿಂಗಪ್ಪ ಮಾಸ್ತರ್‌ ಉಪಸ್ಥಿತರಿದ್ದರು. ಗಿರೀಶ್‌ ದೇವರಮನಿ ಸ್ವಾಗತಿಸಿದರು. ಚನ್ನಪ್ಪ ಕುಂಟೋಜಿ ನಿರೂಪಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.