ಬದುಕು ಕಟ್ಟಿಕೊಳ್ಳುವ ಶಿಕ್ಷಣ ದೊರೆಯಲಿ


Team Udayavani, Feb 4, 2019, 6:13 AM IST

dvg-5.jpg

ದಾವಣಗೆರೆ: ಯುವ ಜನರಿಗೆ ಬದುಕು ಕಟ್ಟಿಕೊಳ್ಳುವ ಶಿಕ್ಷಣ ದೊರೆತಾಗ ಮಾತ್ರ ಬಹುತ್ವ ಭಾರತ ನಿರ್ಮಾಣ ಸಾಧ್ಯ ಎಂದು ಬೆಂಗಳೂರಿನ ವಿದ್ಯಾರ್ಥಿ ಬಂಧುತ್ವ ವೇದಿಕೆ ಸಂಚಾಲಕ ಅನಂತ್‌ನಾಯ್ಕ ಹೇಳಿದರು.ರೋಟರಿ ಬಾಲಭವನದಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆ ಬಹುತ್ವ ಭಾರತ ಮತ್ತು ಶಿಕ್ಷಣ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ದೇಶದೊಳಗೆ ಅಸಮಾನತೆಯ ಶಿಕ್ಷಣ ಕ್ರಮ ಇಂದಿಗೂ ಕೂಡ ಜೀವಂತವಾಗಿ ಬೇರೂರಿದೆ. ಶಿಕ್ಷಣವೆಂಬುದು ವ್ಯಾಪಾರದ ಸರಕಾಗಿದೆ. ಜನಸಾಮಾನ್ಯರ ಮಕ್ಕಳಿಗೆ ಶಿಕ್ಷಣ ಕೈಗೆಟುಕದಂತಾಗಿದೆ. ಈ ಧೋರಣೆ ಬದಲಾಗಬೇಕು. ಸರ್ಕಾರ ಸರ್ವರಿಗೂ ಸಮಾನ ಶಿಕ್ಷಣ ನೀಡುವ ಜೊತೆಗೆ ಇಂದಿನ ಯುವ ಪೀಳಿಗೆಗೆ ಬದುಕು ಕಟ್ಟಿಕೊಳ್ಳುವ ಮೌಲ್ಯಯುತ ಶಿಕ್ಷಣ ನೀಡುವಂತಾಗಬೇಕು ಎಂದರು.

ಸರ್ಕಾರ ಆರ್‌ಟಿಇ ಜಾರಿಗೆ ತಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಣ ತುಂಬಿ, ಅಲ್ಲಿಗೆ ಬರುವ ಬಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುತ್ತಾ ತಾರತಮ್ಯ ಉಂಟು ಮಾಡುತ್ತಿದೆ. ಅದರ ಬದಲು ಎಲ್ಲರಿಗೂ ಸಮಾನ ಶಿಕ್ಷಣ ದೊರಕುವಂತೆ ಮಾದರಿ ಸರ್ಕಾರಿ ಶಾಲೆಗಳನ್ನು ತೆರೆದು ಬಡವರ ಉದ್ಧಾರ ಮಾಡಬಹುದಾಗಿದೆ. ಆದರೆ, ಆಳುವ ಸರ್ಕಾರಗಳು ಈ ಕೆಲಸ ಮಾಡಲು ಸಿದ್ಧವಿಲ್ಲ. ಏಕೆಂದರೆ ಶಿಕ್ಷಣ ಸಂಸ್ಥೆಗಳೇ ಸರ್ಕಾರವನ್ನು ನಿಯಂತ್ರಿಸುವ ಶಕ್ತಿ ಹೊಂದುತ್ತಿವೆ. ಈ ವ್ಯವಸ್ಥೆ ನಿಜಕ್ಕೂ ದುರಂತ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದ ಸಾಕಷ್ಟು ಹಳ್ಳಿಗಳಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಕರು ಹೆಚ್ಚಾಗಿದ್ದಾರೆ. ಅವರನ್ನು ಸದ್ಬಳಕೆ ಮಾಡಿಕೊಂಡು ಉತ್ತಮವಾಗಿ ಈ ದೇಶ ಕಟ್ಟಬಹುದಾಗಿದೆ. ಹಳ್ಳಿಗಳ ಯುವಕರಿಗೆ ಸ್ವ ಉದ್ಯೋಗ, ಹೈನುಗಾರಿಕೆ, ಕೃಷಿ ಇತ್ಯಾದಿ ಕೆಲಸಕ್ಕೆ ಉತ್ತಮ ಯೋಜನೆಗಳನ್ನು ನೀಡಿದ್ದಾದರೆ, ಪ್ರಜ್ಞಾವಂತ ಯುವಕರು ಸ್ವಾವಲಂಬಿಗಳಾಗಬಹುದು. ಸಿಟಿಯತ್ತ ಕೆಲಸಕ್ಕಾಗಿ ಅಲೆಯುವುದನ್ನು ತಪ್ಪಿಸಬಹುದು ಎಂದರು.

ದೇಶದಲ್ಲಿ ಶೇ. 50 ರಷ್ಟು ಯುವಕರಿದ್ದು, ಅವರಲ್ಲಿ ವೈಚಾರಿಕ ಚಿಂತನೆ ಮೂಡಿಸುವ ಕೆಲಸವನ್ನು ಇಂದಿನ ಶಿಕ್ಷಣ ವ್ಯವಸ್ಥೆ ಮಾಡಬೇಕು. ಆದರೆ, ದೇವರು, ಧರ್ಮದ ಗಲಭೆಗಳಲ್ಲಿ ತೊಡಗುವಂತೆ ಪ್ರೇರಣೆ ನೀಡಿ ಅವರನ್ನು ಅಪರಾಧಿಗಳನ್ನಾಗಿ ಮಾಡುವಂತಹ ಸ್ಥಿತಿ ಉಂಟಾಗಿದೆ. ಇದಕ್ಕೆಲ್ಲಾ ಮೂಲ ಶಿಕ್ಷಣದ ಕೊರತೆ. ಶಿಕ್ಷಣದ ಕ್ರಮ ಸರಿಯಿದ್ದರೆ ಸಮಾಜದಲ್ಲಿ ನಿತ್ಯ ನಡೆಯುವ ಬಹುತೇಕ ಶೋಷಣೆ, ದೌರ್ಜನ್ಯಗಳನ್ನು ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಮೊದಲು ಕಡ್ಡಾಯ ಉದ್ಯೋಗ ಕಾಯ್ದೆ ಜಾರಿಯಾಗಬೇಕು. ನಿರುದ್ಯೋಗ ಭತ್ಯೆ ನೀಡಬೇಕು. ಯುವಜನರ ಆಯೋಗ ಸ್ಥಾಪನೆ ಆಗಬೇಕು ಎಂದು ಆಗ್ರಹಿಸಿದರು. ಮಾನವ ಬಂಧುತ್ವ ವೇದಿಕೆ ಸಂಚಾಲಕ ರಾಘು ದೊಡ್ಮನಿ, ವಿದ್ಯಾರ್ಥಿ ವಿಭಾಗದ ಸಂಚಾಲಕ ಈಶ್ವರ್‌ ಅಭಿವ್ಯಕ್ತಿ, ಮಹಾಲಿಂಗಪ್ಪ ಅಲಬಾಳ, ಶಿವಕುಮಾರ್‌ ಮಾದಾಳ್‌, ರಾಮಕೃಷ್ಣ, ಭರಮಣ್ಣ ತೋಳಿ ಇತರರು ಇದ್ದರು.

ಹಳ್ಳಿ, ಪಟ್ಟಣಗಳಲ್ಲಿ ಪ್ರತಿಷ್ಠೆಗಾಗಿ ಆಡಂಬರದಿಂದ ಖರ್ಚು ಮಾಡಿ ಮಾಡುತ್ತಿರುವ ಮದುವೆ, ಬಾಡೂಟದ ಮಾರಿ ಹಬ್ಬಗಳು ಜನಸಾಮಾನ್ಯರನ್ನು ಮತ್ತಷ್ಟು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಮದುವೆ, ಜಾತ್ರೆಯ ಅಹಂ ಇನ್ನಷ್ಟು ಜನರ ಬದುಕನ್ನು ದಿವಾಳಿ ಮಾಡುತ್ತಿವೆ. ಜನರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕು. ಸರಳ ಬದುಕು, ಆಚರಣೆ ರೂಢಿಸಿಕೊಳ್ಳಬೇಕು. ಆಗ ಮಾತ್ರ ಪ್ರತಿಯೊಬ್ಬರ ಬದುಕಿನಲ್ಲಿ ಪರಿವರ್ತನೆಯ ನೆಮ್ಮದಿಯ ಗಾಳಿ ಬೀಸಲು ಸಾಧ್ಯ.
•ಅನಂತ್‌ನಾಯ್ಕ ವಿದ್ಯಾರ್ಥಿ ಬಂಧುತ್ವ ವೇದಿಕೆ ಸಂಚಾಲಕ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.