ಪರಿಸರ ನಾಶದಿಂದ ಅಪಾಯ ನಿಶ್ಚಿತ


Team Udayavani, Feb 8, 2019, 5:30 AM IST

dvg-2.jpg

ದಾವಣಗೆರೆ: ಪರಿಸರ ನಾಶ ನಿರಂತರವಾಗಿ ಮುಂದುವರೆದಿದ್ದೇ ಆದಲ್ಲಿ ನಾವು ಉಸಿರಾಡಲು ಆಕ್ಸಿಜನ್‌ ಸಿಲಿಂಡರ್‌ಗಳನ್ನು ಖರೀದಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಬೆಂಗಳೂರಿನ ಇಂಡಿಯನ್‌ ಇನ್‌ ಸ್ಟಿಟ್ಯೂಟ್‌ನ ಸೆಂಟರ್‌ ಫಾರ್‌ ಎಕಲಾಜಿಕಲ್‌ ಸೈನ್ಸಸ್‌ ವಿಭಾಗದ ಡಾ|ಟಿ.ವಿ ರಾಮಚಂದ್ರ ಎಚ್ಚರಿಸಿದ್ದಾರೆ.

ಗುರುವಾರ, ತೋಳಹುಣಸೆಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮೈಕ್ರೋ ಬಯೋಲಜಿ ವಿಭಾಗದ ಬೆಳ್ಳಿ ಹಬ್ಬ ವರ್ಷದ ಪ್ರಯುಕ್ತ ಏರ್ಪಡಿಸಲಾಗಿದ್ದ ಸಸ್ಟೈನೆಬಲ್‌ ಎನ್ವಿರಾನ್ಮೆಂಟಲ್‌ ಥ್ರೂ ಬಯಾಲಜಿಕಲ್‌ ಸೈನ್ಸಸ್‌ ಆ್ಯಂಡ್‌ ಟೆಕ್ನಾಲಜಿ ವಿಷಯ ಕುರಿತ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರು ಪರಿಸರಕ್ಕೆ ಹಾನಿಯಾಗದಂತೆ ಜೀವನ ಶೈಲಿ ಬದಲಾಯಿಸಿಕೊಂಡು, ಪರಿಸರ ಸಂರಕ್ಷಿಸಲು ಮುಂದಾಗಬೇಕು. ಇದರಿಂದ ನಮ್ಮ ಮುಂದಿನ ಪೀಳಿಗೆಗೆ ಪ್ರಯೋಜನವಾಗಲಿದೆ ಎಂದರು.

ಪರಿಸರ ನಾಶದಿಂದ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ವರ್ಷದ ಹನ್ನೆರಡು ತಿಂಗಳುಗಳ ಕಾಲ ತುಂಬಿ ಹರಿಯತ್ತಿದ್ದಂತಹ ನದಿಗಳು ಕೇವಲ ಮೂರು ನಾಲ್ಕು ತಿಂಗಳಿಗೆ ಬತ್ತಿಹೊಗುತ್ತಿವೆ. ನೀರು ಮತ್ತು ಹಸಿರು ಇದ್ದರೆ ಪ್ರತಿಯೊಬ್ಬರೂ ಖುಷಿಯಿಂದ ಜೀವಿಸಬಹುದು. ಆದ್ದರಿಂದ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯತ್ತ ಗಮನ ಹರಿಸಬೇಕಿದೆ ಎಂದು ಸಲಹೆ ನೀಡಿದರು.

ತಾಯ್ನಾಡಿಗೆ ಏನಾದರು ಕೊಡುಗೆ ನೀಡುವುದಿದ್ದರೆ ಪರಿಸರಕ್ಕೆ ನೀಡಿ. ಪ್ಲಾಸ್ಟಿಕ್‌ ಬದಲು ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ಬಳಸಿ ಎಂದ ಅವರು, ತಂತ್ರಜ್ಞಾನವು ಸಹ ಪರಿಸರಕ್ಕೆ ಪೂರಕವಾಗಿರುವಂತೆ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.
 
ವಿದ್ಯಾರ್ಥಿಗಳು ಕಷ್ಟಪಟ್ಟು ಓದಿ, ಉನ್ನತ ಹುದ್ದೆ ಸಂಪಾದಿಸಿ, ದುಬಾರಿ ಬೆಲೆಯ ಮೊಬೈಲ್‌ ಖರೀದಿಸಿದರೆ ಜೀವನ ಯಶಸ್ವಿ ಯಾಗುವುದಿಲ್ಲ. ಬದಲಿಗೆ ಪರಿಸರಕ್ಕೆ ವಿದ್ಯಾರ್ಥಿಗಳು ಉತ್ತಮ ಕೊಡುಗೆ ನೀಡಿದರೆ ಮಾತ್ರ ಅವರ ಜೀವನ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ವಿ. ಹಲಸೆ ಮಾತನಾಡಿ, ಇಂದು ತಂತ್ರಜ್ಞಾನವು ಪರಿಸರಕ್ಕೆ ವ್ಯತಿರಿಕ್ತವಾಗಿ ಬಳಕೆಯಾಗುತ್ತಿದ್ದು, ಅದು ಬದಲಾಗಬೇಕು. ಈ ಕಾರ್ಯಾಗಾರ ಎರಡು ದಿನಗಳ ಕಾಲ ನಡೆಯಲಿದ್ದು ಯುವಜನತೆಗೆ ಉಪಯುಕ್ತವಾಗಲಿದೆ ಎಂದರು.

ಕುಲಸಚಿವರಾದ ಪ್ರೊ| ಪಿ.ಕಣ್ಣನ್‌, ಪ್ರೊ| ಬಸವರಾಜ ಬಣಕಾರ, ಹಣಕಾಸು ಅಧಿಕಾರಿ ಪ್ರೊ| ಜೆ.ಕೆ. ರಾಜು, ಪ್ರೊ| ಗಾಯತ್ರಿ ದೇವರಾಜ್‌, ಪ್ರೊ| ಶಿಶುಪಾಲ, ವಿವಿಧ ವಿಭಾಗಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.