ಆಪರೇಶನ್‌ ಕಮಲ ಖಂಡಿಸಿ ಪ್ರತಿಭಟನೆ


Team Udayavani, Feb 10, 2019, 5:42 AM IST

dvg-1.jpg

ದಾವಣಗೆರೆ: ಬಿಜೆಪಿಯ ಸಂವಿಧಾನ ವಿರೋಧಿ ನೀತಿ ಹಾಗೂ ಆಪರೇಷನ್‌ ಕಮಲ ಖಂಡಿಸಿ ನಗರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಇಲ್ಲಿನ ಜಯದೇವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಪಿ.ಬಿ. ರಸ್ತೆಯ ಮಾರ್ಗವಾಗಿ ಮಹಾನಗರಪಾಲಿಕೆಗೆ ತೆರಳಿ, ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ರಾಜ್ಯದಲ್ಲಿ ಸುಭದ್ರವಾಗಿರುವ ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಬಿ.ಎಸ್‌ ಯಡಿಯೂರಪ್ಪ ಕೂಡ ಅಧಿಕಾರ ಲಾಲಸೆಯಿಂದ ಕುದುರೆ ವ್ಯಾಪಾರ ಮಾಡಲು ಹೊರಟಿದ್ದಾರೆ. ಇದು ಖಂಡಿತ ಸಲ್ಲದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಎಸ್‌ವೈ ನೇರವಾಗಿ ಆಪರೇಷನ್‌ ಕಮಲಕ್ಕೆ ಕೈ ಹಾಕಿರುವ ಬಗ್ಗೆ ಈಗಾಲೇ ಮುಖ್ಯಮಂತ್ರಿಗಳು ಆಡಿಯೋ ಬಿಡುಗಡೆ ಮಾಡಿದ್ದಾರೆ. ಒಬ್ಬೊಬ್ಬ ಶಾಸಕರ ಖರೀದಿಗೆ ಬಿಎಸ್‌ವೈ 40 ರಿಂದ 50 ಕೋಟಿ ರೂ. ಆಮಿಷ ಒಡ್ಡಿದ್ದಾರೆ. ಇವರಿಗೆ ಇಷ್ಟೆಲ್ಲಾ ಹಣ ಎಲ್ಲಿಂದ ಬರುತ್ತೆ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕೋಟ್ಯಾಧಿಪತಿಗಳ ಮನೆ ಮೇಲೆ ದಾಳಿ ಮಾಡುವ ಇಡಿ, ಸಿಬಿಐಗಳು ಇಂತಹ ರಾಜಕೀಯ ಭ್ರಷ್ಟರ ಮನೆಗಳ ಮೇಲೆ ದಾಳಿ ನಡೆಸದೆ ಕೈಗೊಂಬೆಯಂತಾಗಿವೆ. ಇದು ನಿಜಕ್ಕೂ ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರೈತರು, ಮಹಿಳೆಯರು, ದಲಿತರ ಪರ ಕೆಲಸ ಮಾಡಿದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ವ್ಯರ್ಥ ಪ್ರಯತ್ನ ಬಿಜೆಪಿಯವರು ಮಾಡುತ್ತಿದ್ದಾರೆ. ಜೊತೆಗೆ ನಮ್ಮ ಸರ್ಕಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅವಿಶ್ವಾಸ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿಯಾಗಿ ರಾಹುಲ್‌ ಗಾಂಧಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯದರ್ಶಿ ಡಿ. ಬಸವರಾಜ್‌ ಮಾತನಾಡಿ, ಆಪರೇಷನ್‌ ಕಮಲ ಟೇಪ್‌ನಲ್ಲಿನ ಧ್ವನಿ ಬಿಎಸ್‌ವೈ ಅವರದ್ದು ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಬಿಎಸ್‌ವೈ ಅವರು ಸ್ಪೀಕರ್‌, ಕಾಂಗ್ರೆಸ್‌ ಶಾಸಕರು, ಪ್ರಧಾನಿಯವರು ಹಾಗೂ ನ್ಯಾಯಾಧೀಧಿಶರ ಉಲ್ಲೇಖ ಮಾಡಿದ್ದು, ಟೇಪ್‌ನಿಂದಾಗಿ ನೂರಾರು ಕೋಟಿ ರೂ.ಗಳ ಡೀಲ್‌ ಬಗ್ಗೆ ಮಾತನಾಡಿರುವುದು ಇದರಿಂದ ಹೊರಬಂದಿದೆ ಎಂದರು.

ಈ ಬಗ್ಗೆ ಐಟಿ, ಇಡಿ ತನಿಖೆ ನಡೆಸಬೇಕು. ನ್ಯಾಯಾಲಯ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ಬಿಎಸ್‌ವೈ ಅವರು ಟೇಪ್‌ನಲ್ಲಿರುವ ಧ್ವನಿ ನನ್ನದಲ್ಲ ಎಂದಿದ್ದಾರೆ. ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರಲಿದೆ. ತಪ್ಪಿತಸ್ಥ ಎಂಬುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದು, ನಿಜಕ್ಕೂ ಬಿಎಸ್‌ವೈ ಅವರಿಗೆ ಮಾನ, ಮರ್ಯಾದೆ ಇದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯಬೇಕು ಎಂದು ಒತ್ತಾಯಿಸಿದರು.

ಮೇಯರ್‌ ಶೋಭಾ ಪಲ್ಲಾಗಟ್ಟೆ, ಉಪಮೇಯರ್‌ ಚಮನ್‌ಸಾಬ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ, ಮಾಜಿ ನಗರಸಭಾಧ್ಯಕ್ಷ ಎ. ನಾಗರಾಜ್‌, ಕೆ.ಜಿ. ಶಿವಕುಮಾರ್‌, ಬಿ.ಎಚ್. ವೀರಭದ್ರಪ್ಪ, ಸೈಯದ್‌ ಖಾಲೀದ್‌, ನಂಜಾನಾಯ್ಕ, ಯತಿರಾಜ್‌, ರೇವಣಸಿದ್ದಪ್ಪ, ಮುದೇಗೌಡ್ರ ಗಿರೀಶ್‌, ಶ್ರೀಕಾಂತ್‌ ಬಗರೆ, ಆರೀಫ್‌, ಮುಜಾಹಿದ್‌ ಪಾಷಾ, ಕೇರಂ ಗಣೇಶ್‌, ಅಲ್ಲಾವಲ್ಲಿ ಘಾಜಿಖಾನ್‌, ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.