ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ


Team Udayavani, Feb 15, 2019, 7:03 AM IST

dvg-1.jpg

ದಾವಣಗೆರೆ: ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ಜೆಡಿಎಸ್‌ನವರ ದಾಳಿ, ಕಲ್ಲು ತೂರಾಟ, ದೌರ್ಜನ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುರುವಾರ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆ ನೀಡುವುದಾಗಿ ಹೇಳಿದ್ದರು. ಅದರ ಭಾಗವಾಗಿಯೇ ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ಜೆಡಿಎಸ್‌ನವರು ಏಕಾಏಕಿ ದಾಳಿ ಮಾಡಿ ಕಲ್ಲು ತೂರಾಟ ನಡೆಸಿದ ಪರಿಣಾಮ ಬಿಜೆಪಿಯ ಓರ್ವ ಕಾರ್ಯಕರ್ತನಿಗೆ ತೀವ್ರ ಗಾಯಗಳಾಗಿವೆ. ಮುಖ್ಯಮಂತ್ರಿಯವರ ಹೇಳಿಕೆಯ ಪ್ರೇರಣೆಯಿಂದಲೇ ನಡೆದಿರುವ ದಾಳಿ, ಹಲ್ಲೆ ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ದೂರಿದರು.

ಇಡೀ ರಾಜ್ಯದಲ್ಲಿ ಕಾನೂನು, ಶಾಂತಿ, ಸುವ್ಯವಸ್ಥೆ, ಜನರ ಕಾಪಾಡುವ ಗುರುತರ ಹೊಣೆಗಾರಿಕೆ, ಜವಾಬ್ದಾರಿ ಹೊಂದಿರುವ ಮುಖ್ಯಮಂತ್ರಿಯವರೇ
ದಂಗೆ ಏಳುವಂತೆ ಕರೆ ನೀಡುವುದಾಗಿ ಹೇಳಿದ್ದರ ಪರಿಣಾಮವೇ ದಾಳಿ, ಹಲ್ಲೆ ನಡೆದಿದೆ. ಹಾಸನದ ಶಾಸಕ ಪ್ರೀತಂಗೌಡ ನಿವಾಸದ ಮೇಲೆ ಜೆಡಿಎಸ್‌
ಗೂಂಡಾಗಳು ದಾಳಿ, ಕಲ್ಲು ತೂರಾಟ, ದೌರ್ಜನ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೈತಿಕ ಹೊಣೆ ಹೊರುವ ಜೊತೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಶಾಸಕ ಪ್ರೀತಂಗೌಡ ಅವರು ವಿಧಾನ ಸಭೆಯಲ್ಲಿ ಇರುವುದನ್ನು ತಿಳಿದೇ ಜೆಡಿಎಸ್‌ನವರು ನಿವಾಸಕ್ಕೆ ನುಗ್ಗಿದ್ದಾರೆ. ಅವರ ತಾಯಿ ಮತ್ತು ಬಿಜೆಪಿ
ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವ ಸಲುವಾಗಿಯೇ ದಾಳಿ ನಡೆಸಿದ್ದಾರೆ. ಜೆಡಿಎಸ್‌ ಕಾರ್ಯಕರ್ತರ ಅಟ್ಟಹಾಸ ನೋಡಿಯೂ ಪೊಲೀಸರು ಮೂಕ
ಪ್ರೇಕ್ಷಕರಾಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಪ್ರಬಲ ಸಾಕ್ಷಿ ಎಂದು ದೂರಿದರು.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಆಣತಿಯಂತೆ ಎಲ್ಲವೂ ನಡೆದಿದೆ. ಹಾಸನದಲ್ಲಿ ಜೆಡಿಎಸ್‌ನವರೇ ಇಡೀ ಆಡಳಿತವನ್ನು
ನಿಯಂತ್ರಿಸುವರು ಎಂಬುದಕ್ಕೆ ಬಿಜೆಪಿ ಶಾಸಕರ ಮನೆ ಮೇಲಿನ ದಾಳಿಯೇ ಸಾಕ್ಷಿ. ಇಡೀ ಘಟನೆಗೆ ರೇವಣ್ಣ ಅವರೇ ಜವಾಬ್ದಾರರು ಎಂದು ದೂರಿದರು.

ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಎಚ್‌.ಸಿ. ಜಯಮ್ಮ, ನಗರಪಾಲಿಕೆ ಸದಸ್ಯ ಡಿ.ಎನ್‌. ಕುಮಾರ್‌, ಮಾಜಿ ಉಪ ಮೇಯರ್‌ ಪುಷ್ಪಾ ದುರುಗೇಶ್‌, ಮುಕುಂದಪ್ಪ, ರಾಜನಹಳ್ಳಿ ಶಿವಕುಮಾರ್‌, ಶಂಕರಗೌಡ ಬಿರಾದಾರ್‌, ನಿಟುವಳ್ಳಿ
ಲಕ್ಷ್ಮಣ್‌, ಶಿವನಗೌಡ ಪಾಟೀಲ್‌, ಅಣಬೇರು ಶಿವಪ್ರಕಾಶ್‌, ಗುರು, ಟಿಂಕರ್‌ ಮಂಜಣ್ಣ, ಡಿ.ಎನ್‌. ಕಾಂತರಾಜ್‌, ಭಾಗ್ಯ ಪಿಸಾಳೆ, ದಾಕ್ಷಾಯಣಮ್ಮ
ಅಂದಾನಪ್ಪ, ಸವಿತಾ ರವಿಕುಮಾರ್‌, ದೇವಿರಮ್ಮ, ಶಾಂತಾ ದೊರೈ, ಜಿ.ಎಂ. ರುದ್ರಗೌಡ, ಎಂ. ಟಿಪ್ಪುಸುಲ್ತಾನ್‌, ಸೋಗಿ ಶಾಂತಕುಮಾರ್‌,
ರಾಮಚಂದ್ರನಾಯ್ಕ, ಫಣಿಯಾಪುರ ಲಿಂಗರಾಜ್‌ ಇತರರು ಇದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.