ನನ್ನ ಪರಿವಾರ-ಬಿಜೆಪಿ ಪರಿವಾರ ಅಭಿಯಾನ ಇಂದಿನಿಂದ
Team Udayavani, Feb 17, 2019, 7:18 AM IST
ದಾವಣಗೆರೆ: ಭಾರತೀಯ ಜನತಾ ಪಕ್ಷ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ ನನ್ನ ಪರಿವಾರ ಬಿಜೆಪಿ ಪರಿವಾರ ಎಂಬ ಘೋಷವಾಕ್ಯದಡಿ ಮುಖಂಡರ ಮನೆಯ ಮೇಲೆ ಪಕ್ಷದ ಬಾವುಟ ಹಾರಿಸುವ ಅಭಿಯಾನ ಜಿಲ್ಲೆಯಾದ್ಯಂತ ಫೆ. 17ರಿಂದ ಆರಂಭಗೊಳ್ಳಲಿದೆ.
ಶನಿವಾರ, ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ಭಾನುವಾರ ಬೆಳಗ್ಗೆ 8-30ಕ್ಕೆ ತಮ್ಮ ನಿವಾಸದ ಮೇಲೆ ಬಾವುಟ ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಅಭಿಯಾನ ಮಾ. 2ರವರೆಗೆ ನಡೆಯಲಿದೆ ಎಂದರು.
ಪಕ್ಷದ ಶಾಸಕರು, ಮಾಜಿ ಶಾಸಕರು, ಮಂಡಲ ಹಾಗೂ ಮಹಾಶಕ್ತಿ ಕೇಂದ್ರ, ಬೂತ್ ಮಟ್ಟದ ಅಧ್ಯಕ್ಷರ ನಿವಾಸದ ಮೇಲೆ ಬಾವುಟ ಹಾರಿಸಲಾಗುವುದು. ಜಿಲ್ಲೆಯಲ್ಲಿ 1956 ಬೂತ್ಮಟ್ಟದ ಹಾಗೂ 348 ಮಂಡಲ ಮಹಾಶಕ್ತಿ ಕೇಂದ್ರಗಳಿವೆ. ಒಟ್ಟಾರೆ 3000 ಮುಖಂಡರ ನಿವಾಸಗಳ ಮೇಲೆ ಪಕ್ಷದ ಬಾವುಟ ಹಾರಾಡಲಿದೆ ಎಂದು ಹೇಳಿದರು.
ಅದೇ ರೀತಿ ಫೆ. 26ರಿಂದ ಕಮಲ್ ಉಜ್ವಲ್ ಜ್ಯೋತಿ ಕಾರ್ಯಕ್ರಮ ಎಲ್ಲಾ ಮಂಡಲಗಳಲ್ಲಿ ಆರಂಭವಾಗಲಿದೆ. ಇನ್ನು ಕಮಲ್ ಸಂದೇಶ್ ಬೈಕ್ ರ್ಯಾಲಿ ಲೋಕಸಭಾ ಚುನಾವಣೆಯ ಮತದಾನದವರೆಗೂ ನಡೆಯಲಿದೆ. ಪ್ರತಿ ಮಂಡಲದಲ್ಲಿ ಮೂರು ಬೈಕ್ಗಳಲ್ಲಿ ಮತದಾನದವರೆಗೂ
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈವರೆಗೆ ಜಾರಿಗೊಳಿಸಿದ ಯೋಜನೆಗಳು ಫಲಾನುಭವಿಗಳಿಗೆ ತಲುಪದಿದ್ದಲ್ಲಿ ಅವುಗಳನ್ನು ತಲುಪಿಸಲು ಪ್ರತಿ ಬೂತ್ನ ಅಧ್ಯಕ್ಷರು ಕಾರ್ಯೋನ್ಮುಖರಾಗಲಿದ್ದಾರೆ ಎಂದು ಹೇಳಿದರು.
ಈವರೆಗೂ ಉಜ್ವಲ ಯೋಜನೆಯಡಿ 95 ಸಾವಿರ ಫಲಾನುಭವಿಗಳಿಗೆ ಗ್ಯಾಸ್ ಸಿಲೆಂಡರ್ ವಿತರಿಸಲಾಗಿದೆ. ಮುದ್ರಾ ಯೋಜನೆಯಡಿ 62 ಸಾವಿರ ಮಂದಿಗೆ ಸಾಲ ಸೌಲಭ್ಯ ಹಾಗೂ ಮಾತೃ ವಂದನಾ ಯೋಜನೆಯಡಿ 24 ಸಾವಿರ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲಾಗಿದೆ
ಎಂದು ಮಾಹಿತಿ ನೀಡಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೂಚನೆಯಂತೆ ಈಗಾಗಲೇ ಕಳೆದ 11ರಿಂದ ಸಮರ್ಪಣಾ ದಿವಸ್ ಆರಂಭವಾಗಿದ್ದು, ಆನ್ಲೈನ್ ಮೂಲಕ 5ರಿಂದ 1000 ರೂ. ವರೆಗೆ ದೇಣಿಗೆ ಪಾವತಿಸಬಹುದು ಎಂದು ಅವರು ಹೇಳಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್. ಎನ್.ಶಿವಕುಮಾರ್, ಎನ್.ರಾಜಶೇಖರ್, ಖಜಾಂಚಿ ಹೇಮಂತಕುಮಾರ್, ದಕ್ಷಿಣ ಮಂಡಲದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರರ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ