ಒತ್ತಡ-ಸಿಬ್ಬಂದಿ ಕೊರತೆ ತನಿಖೆ ಲೋಪಕ್ಕೆ ಕಾರಣ


Team Udayavani, Feb 17, 2019, 7:34 AM IST

dvg-7.jpg

ಹರಿಹರ: ಬಹುತೇಕ ಆರೋಪಿಗಳು ನ್ಯಾಯಾಲಯದಲ್ಲಿ ಬಿಡುಗಡೆ ಹೊಂದಲು ತನಿಖಾಧಿಕಾರಿಗಳ ಲೋಪವೇ ಕಾರಣ ಎಂದು ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಎಸ್‌.ಶಂಕ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ವಕೀಲರ ಪರಿಷತ್‌, ತಾಲೂಕು ವಕೀಲರ ಸಂಘ ಹಾಗೂ ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆಯುತ್ತಿರುವ ಕಾನೂನು ಕಾರ್ಯಗಾರದಲ್ಲಿ ಶನಿವಾರ ಕ್ರಿಮಿನಲ್‌ ವಿಚಾರಣೆ ಕುರಿತು ಅವರು ಉಪನ್ಯಾಸ ನೀಡಿದರು.

ಪೊಲೀಸರ ತನಿಖಾ ವರದಿಯಲ್ಲಿನ ತಪ್ಪೊಪ್ಪಿಗೆಗಳು, ಸಾಕ್ಷಿದಾರರ ಹೇಳಿಕೆಗಳು ನ್ಯಾಯಾಲಯದಲ್ಲಿ ಮತ್ತೂಮ್ಮೆ ಋಜುವಾತಾಗಬೇಕಾಗುತ್ತದೆ. ಆಪರಾಧ ಕೃತ್ಯ ನಡೆದ ಸಮಯದಲ್ಲಿದ್ದ ಪ್ರತ್ಯಕ್ಷ ಸಾಕ್ಷೀದಾರರು, ಸಾಂದರ್ಭಿಕ ಸಾಕ್ಷ್ಯಾಗಳ ಆಧಾರದ ಮೇಲೆ ತನಿಖೆಯನ್ನು ನಿಖರಗೊಳಿಸಬೇಕಾಗುತ್ತದೆ.

ಅಪರಾಧ ಕೃತ್ಯಗಳ ಬಗ್ಗೆ ತನಿಖೆ ನಡೆಸುವ ಪೊಲೀಸರು ಕ್ರಿಮಿನಲ್‌ ಪ್ರೊಸೀಜರ್‌ ಕೋಡ್‌ ಬಗ್ಗೆ ಸೂಕ್ತ ಮಾಹಿತಿ ಹೊಂದಿರಬೇಕು. ಅಧಿಕ ಕಾರ್ಯಭಾರ, ಸಿಬ್ಬಂದಿ ಕೊರತೆಯಿಂದ ಬಹುತೇಕ ತನಿಖಾಧಿಕಾರಿಗಳು ಅವಸರವಸರದಲ್ಲಿ ಸಿದ್ಧಪಡಿಸುವ ಆರೋಪ ಪಟ್ಟಿ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ನಾಗರಾಜ್‌ ಹಲವಾಗಲು ಮಾತನಾಡಿ, ವಕೀಲ ವೃತ್ತಿ ದುಡಿಮೆಗೋಸ್ಕರ ಇದ್ದರೂ ದುಡಿಮೆಯೊಂದೇ ವಕೀಲರ ವೃತ್ತಿಯಲ್ಲ, ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಸದುದ್ದೇಶವೂ ಇದರ ಹಿಂದಿದೆ. ನ್ಯಾಯದಾನದ ಮೂಲಕ ಸಾಮಾಜಿಕ ನ್ಯಾಯ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು. 

ಮಧ್ಯಾಹ್ನ ನಡೆದ ವಿಚಾರಗೋಷ್ಠಿಗಳಲ್ಲಿ 2ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಅವಿನಾಶ್‌ ಚಿಂದು ಎಚ್‌., ನಿ ರ್ದಿಷ್ಟ ಪರಿಹಾರ ಅಧಿನಿಯಮ ವಿಷಯ ಕುರಿತು, ಹಿರಿಯ ವಕೀಲರಾದ ಎಚ್‌.ಎಂ. ಷಡಾಕ್ಷರಯ್ಯ ವಾದ-ಪ್ರತಿವಾದ ಪತ್ರಗಳ ಕುರಿತು ವಿಷಯ ಮಂಡಿಸಿದರು.

ವಕೀಲರಾದ ಮಲ್ಲಿಕಾರ್ಜುನ ಕಾಂಟ್ರ್ಯಾಕ್ಟರ್‌, ನಾಗರಾಜ್‌ ಬಿ., ಮಲ್ಲಿಕಾರ್ಜುನ ಕಲಾಲ್‌, ಎನ್‌.ಪಿ. ತಿಮ್ಮನಗೌಡ, ಕೆ.ಸಿ. ಬಸವರಾಜ್‌, ಜಿ.ಕೆ.ನಾಯ್ಕ, ಬಿ.ಮಂಜುನಾಥ್‌, ನಾಗರಾಜ್‌ ಕೆ.ವಿ., ಮಂಜುನಾಥ್‌ ಸಾಲಕಟ್ಟೆ, ಎನ್‌.ಸಾಕಮ್ಮ, ಸಾಹಿರಾ ಬಾನು, ಜಿ.ಎಚ್‌. ಭಾಗೀರಥಿ, ಸುಧಾ ಸಾಲಕಟ್ಟಿ, ಚೇತನಾ ಎ., ಸಿ.ಬಿ. ರಾಘವೇಂದ್ರ, ಸುರೇಶ್‌ ಕುಮಾರ್‌ ವೈ., ಕೆ.ಚಂದ್ರಾಚಾರಿ, ಬಾಲಾಜಿ ಸಿಂಗ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.