ಕೇಂದ್ರ-ರಾಜ್ಯ ಸರ್ಕಾರಗಳಿಂದ ಸುಳ್ಳು ಭರವಸೆ
Team Udayavani, Feb 18, 2019, 7:34 AM IST
ಜಗಳೂರು: ಸಂವಿಧಾನಬದ್ಧ ಹಕ್ಕುಗಳನ್ನು ಪಡೆಯಬೇಕಾದರೆ ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಎಐಟಿಯುಸಿ ರಾಜ್ಯಾಧ್ಯಕ್ಷ ಎಚ್. ಕೆ ರಾಮಚಂದ್ರ ಕರೆ ನೀಡಿದರು. ಪಟ್ಟಣದ ನಿರ್ಮಲ ನರ್ಸಿಂಗ್ ಹೋಂ ಸಭಾಂಗಣದಲ್ಲಿ ಭಾನುವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ 6ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಯಾವುದೇ ಯೋಜನೆಗಳು ಜಾರಿಗೆ ಬರಲಿಲ್ಲ. ನಿರುದ್ಯೋಗ ಸಮಸ್ಯೆ ಬಗೆಹರಿಸಲಿಲ್ಲ. ಕಪ್ಪು ಹಣ ತರಲಿಲ್ಲ. ರೈತ ಮತ್ತು ಕಾರ್ಮಿಕ ವರ್ಗಕ್ಕೆ ನ್ಯಾಯ ನೀಡಲಿಲ್ಲ ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದರು.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಚುನಾವಣೆಗೂ ಮುನ್ನ ಎಲ್ಲಾ ಕಾರ್ಯಕರ್ತರನ್ನು ಕಾಯಂ ಗೊಳಿಸಲಾಗುವುದು, ಪಿಂಚಣಿ ನೀಡಲಾಗುವುದು, ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿ ಈಗ ಮರೆತುಬಿಟ್ಟಿದ್ದಾರೆಂದು ರಾಜ್ಯ ಸರ್ಕಾರದ ವಿರುದ್ಧವೂ ಕಿಡಿಕಾರಿದ ಅವರು, ಬೇಡಿಕೆಗಳನ್ನು ಈಡೇರಿಸದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಫೆಡರೇಷನ್ ಕಾರ್ಯದರ್ಶಿ ಎನ್. ಶಿವಣ್ಣ ಮಾತನಾಡಿ, ಕಾರ್ಯಕರ್ತೆ ಮತ್ತು ಸಹಾಯಕಿಯರ ಬೇಡಿಕೆಗಳನ್ನು ಗಣನೆಗೆ ತೆಗೆದುಕೊಳ್ಳದ ಸರ್ಕಾರಗಳು ಅವರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಫೆಡರೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಮ್ಮ, ನಿರ್ಮಲ ನರ್ಸಿಂಗ್ ಹೋಂ ಆಡಳಿತಾಧಿಕಾರಿ ಎನ್. ನಿಂಗಪ್ಪ, ಪ್ರೇರಣಾ ಸಂಸ್ಥೆ ಉಪ ನಿರ್ದೇಶಕ ಫಾದರ್ ಅಂಥೋನ್ ಸೋಜ್, ಸಿಪಿಐ ಕಾರ್ಯದರ್ಶಿ ಮಹಮದ್ ಬಾಷಾ, ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ ಶಾರದಮ್ಮ,
ಪದಾಧಿಕಾರಿಗಳಾದ ಮಲ್ಲಮ್ಮ, ರಾಮಪ್ಪ, ಪುಷ್ಪಾಂಜಲಿ, ವೈ ಹಾಲಮ್ಮ, ಮಾದಿಹಳ್ಳಿ ಮಂಜುನಾಥ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೀರಣ್ಣ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ