ಪ್ರಾದೇಶಿಕತೆಯಿಂದ ಹಕ್ಕುಗಳಿಗೆ ಧಕ್ಕೆ


Team Udayavani, Feb 18, 2019, 7:42 AM IST

dvg-3.jpg

ಹರಿಹರ: ದೇಶದಲ್ಲಿ ಇತ್ತೀಚಿಗೆ ಮಿತಿಮೀರುತ್ತಿರುವ ಪ್ರಾದೇಶಿಕತೆಯಿಂದ ಮಾನವ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ವಕೀಲ, ಮಾನವ ಹಕ್ಕುಗಳ ಹೋರಾಟಗಾರರಾದ ಮೋಸಸ್‌ ಮುರುಗವೇಲು ಅಭಿಪ್ರಾಯಪಟ್ಟರು.

ರಾಜ್ಯ ವಕೀಲರ ಪರಿಷತ್‌, ತಾಲೂಕು ವಕೀಲರ ಸಂಘ ಹಾಗೂ ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಆಯೋಜಿಸಿದ್ದ ಕಾನೂನು ಕಾರ್ಯಗಾರದಲ್ಲಿ ಮಾನವ ಹಕ್ಕುಗಳ ಕುರಿತು ಉಪನ್ಯಾಸ ನೀಡಿದ ಅವರು, ಭಾರತದ ನಾಗರಿಕರಿಗೆ ದೇಶದ ಯಾವುದೇ ಪ್ರದೇಶಕ್ಕೆ ಮುಕ್ತವಾಗಿ ಸಂಚರಿಸುವ, ವಾಸಿಸುವ, ಉದ್ಯೋಗ ಹಿಡಿಯುವ ಹಕ್ಕಿದೆ. ಆದರೆ ಮಹಾರಾಷ್ಟ್ರದ ಒಂದು ರಾಜಕೀಯ ಪಕ್ಷ ಮರಾಠಿಗರಲ್ಲದವರನ್ನು ಹೊರದೂಡಲು ನೋಡುತ್ತಿದೆ. ಕೆಲ ರಾಜ್ಯಗಳಲ್ಲಿ ಆಯಾ ಭಾಷಿಕರಿಗೆ ಮಾತ್ರ ಉದ್ಯೋಗ ದೊರೆಯಬೇಕು ಎನ್ನಲಾಗುತ್ತಿದೆ. ನೆಲ-ಜಲ, ಜಾತಿ-ಧರ್ಮ, ಭಾಷೆ ಆಧಾರದಲ್ಲಿ ತಾರತಮ್ಯ ಹೆಚ್ಚಾಗಲು ಕೆಲ ಪ್ರಾದೇಶಿಕ ಪಕ್ಷಗಳೂ ಕಾರಣವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ನಾಗರಾಜ್‌ ಹಲವಾಗಲು ಮಾತನಾಡಿ, ಮೂರು ದಿನಗಳ ಕಾರ್ಯಾಗಾರದಲ್ಲಿ ಪರಿಣಿತರು ವಕೀಲಿ ವೃತ್ತಿಯ ಕೌಶಲಗಳನ್ನು ತಿಳಿಸಿಕೊಟ್ಟಿದ್ದು, ಅವುಗಳ ಸದ್ಬಳಕೆ ಮಾಡಿಕೊಂಡು ಯುವ ವಕೀಲರು ಯಶಸ್ಸು ಸಾಧಿಸಬೇಕು ಎಂದರು. 

ಹಿರಿಯ ವಕೀಲರಾದ ಕೆ.ರಾಜು ಕಾರ್ಯಾಗಾರ ಕುರಿತು ಅನಿಸಿಕೆ ವ್ಯಕ್ತಪಡಿಸಿ, ಪರಿಣಿತರು ಬಹು ಮುಖ್ಯ ಕಾಯ್ದೆಗಳ ಮುಖ್ಯಾಂಶಗಳನ್ನು ಸಂಕ್ಷಿಪ್ತವಾಗಿ ತಿಳಿಸಿದ್ದಲ್ಲದೆ ತಮ್ಮ ವೃತ್ತಿ ಬದುಕಿನ ಅನುಭವ ಹಂಚಿಕೊಂಡಿದ್ದು ಉಪಯುಕ್ತವಾಗಿತ್ತು ಎಂದರು. ಮತ್ತೂಬ್ಬ ಹಿರಿಯ ವಕೀಲರಾದ ನಾಗರಾಜ್‌ ಬಿ. ಮಾತನಾಡಿ, ಆಗಾಗ್ಗೆ ಇಂತಹ ಕಾರ್ಯಗಾರಗಳನ್ನು ಆಯೋಜಿಸಬೇಕು ಎಂದರು. ವಕೀಲರಾದ ಶ್ರೀಧರ್‌ ಮೆಹರಾಡೆ ಮಾತನಾಡಿ, ಕಾನೂನು ವಿಷಯಗಳ ಚರ್ಚೆ, ಸಂವಾದ ನಮ್ಮ ಜ್ಞಾನವನ್ನು ಮತ್ತಷ್ಟು ಹರಿತಗೊಳಿಸುತ್ತದೆ ಎಂದರು.

ಸಂಘದ ಕಾರ್ಯದರ್ಶಿ ಎಚ್‌.ಎಚ್‌. ಲಿಂಗರಾಜು, ವಕೀಲರಾದ ಸೈಯದ್‌ ಯೂನಸ್‌, ಇನಾಯತ್‌ ಉಲ್ಲಾ ಟಿ., ಜಿ.ಬಸವಣ್ಯಪ್ಪ, ಪುಷ್ಪ ಕೆ.ಜಿ., ಲೋಹಿತಾ, ಚೇತನಾ, ಜಮುನಾ, ಅಶ್ವಿ‌ನಿ, ಸಾಕಮ್ಮ, ಜಿ.ಎಚ್‌. ಭಾಗೀರಥಿ, ಕೆ.ಜಿ.ಕೆ.ಪಾಟೀಲ್‌, ರಿಯಾಜ್‌ ಅಹಮದ್‌, ಸುಬಾಶ್ಚಂದ್ರ ಬೋಸ್‌, ಅಂಬಾದಾಸ ಮೆಹರಾಡೆ, ರಾಜು ಟಿ.ಮಸವಳ್ಳಿ, ಗಣೇಶ್‌ ದುರ್ಗದ್‌, ಸಿ.ಬಿ.ರಾಘವೇಂದ್ರ, ಸುರೇಶ್‌ ಕುಮಾರ್‌ ವೈ., ಬಿ.ಎಸ್‌.ಗಣೇಶ್‌, ಪರಶುರಾಮ್‌ ಅಂಬೇಕರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.