ಕೆಲಸ, ವಿದ್ಯುತ್‌ ತಂತಿ ತೆರವಿಗೆ ಮನವಿ: ಕ್ರಮದ ಭರವಸೆ


Team Udayavani, Feb 19, 2019, 11:49 AM IST

dvg-2.jpg

ದಾವಣಗೆರೆ: ವಿದ್ಯುತ್‌ ತಂತಿ ತೆರವು, ವಿಕಲಚೇತನ ಮಗಳಿಗೆ ಕೆಲಸ, ಜಮೀನಿನಲ್ಲಿರುವ ಮರಳು ಬಳಕೆಗೆ ಅನುಮತಿ ಮನವಿ ಸೇರಿ ಸೋಮವಾರ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲು ಸಲ್ಲಿಕೆಯಾಗಿವೆ.

ಲೋಕಿಕೆರೆ ಗ್ರಾಮದ ಎಂ.ಕೆ ಅಂಜಿನಪ್ಪ ಎಂಬುವರು ತತ್ಕಾಲ್‌ ಪೋಡಿಗಾಗಿ ಸಲ್ಲಿಸಿದ ಅರ್ಜಿ ಸಂಬಂಧ ಅಪರ ಜಿಲ್ಲಾಧಿಕಾರಿ, ಸಾಮಾಜಿಕ ಭದ್ರತೆ ಶಾಖೆಯ ವಿಷಯ ನಿರ್ವಾಹಕರಿಗೆ ಅರ್ಜಿ ನೀಡಿ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 

ಪಹಣಿಯಲ್ಲಿ ಜಂಟಿ ಹೆಸರು ನಮೂದಿಸುವ ಸಂಬಂಧ ಹರಿಹರ ತಾಲೂಕಿನ ದೂಳೆಹೊಳೆ ಗ್ರಾಮದ ಕಮಲಮ್ಮ ಎಂಬುವರು ಅರ್ಜಿ ಸಲ್ಲಿಸಿ, ಗ್ರಾಮದ ರಿ.ಸ.ಸಂ 86/10ರಲ್ಲಿ 3 ಎಕರೆ ಜಮೀನನ್ನು ಪಾಲು ವಿಭಾಗ ಮಾಡಿಸಲು ಹೋದಾಗ ಡಾಟಾ ಎಂಟ್ರಿಯಲ್ಲಿ ಸರ್ಕಾರಿ ಎಂದು ತೋರಿಸುತ್ತಿದೆ. ಚಾಲ್ತಿ ಪಹಣಿಯಲ್ಲಿ ಕಮಲಮ್ಮ, ಲೋಕೇಶಪ್ಪ, ಜಾನಪ್ಪ, ಜಟ್ಯಪ್ಪ, ತಿಪ್ಪಣ್ಣ ಮತ್ತು ಭರಮಪ್ಪ ಇವರ ಜಂಟಿ ಹೆಸರುಗಳು ಬರುವಂತೆ ಸರಿಪಡಿಸಿಕೊಡಿ ಎಂದು ಮನವಿ ಸಲ್ಲಿಸಿದರು.

ಆಗ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಹರಿಹರ ತಾಲೂಕಿನ ತಹಶೀಲ್ದಾರ್‌ ಅವರಿಂದ ಈ ಕುರಿತು ಮಾಹಿತಿ ಪಡೆದು ನಂತರ ಸರಿಪಡಿಸಿಕೊಡಲಾಗುವುದು ಎಂದು ಪ್ರತಿಕ್ರಿಯಿಸಿದರು. ಬೂದಾಳ್‌ ರಸ್ತೆಯ ಎಸ್‌.ಪಿ.ಎಸ್‌. ನಗರದ ನಿವಾಸಿ ಟಿ. ಶ್ರೀಧರ್‌, ಎಸ್‌.ಪಿ.ಎಸ್‌ ನಗರದ
1ನೇ ಹಂತ, 3ನೇ ಕ್ರಾಸ್‌ನಲ್ಲಿ 11 ಕೆ.ವಿ ವಿದ್ಯುತ್‌ ಕಂಬದ ವೈರ್‌ಗಳು ವಾಸದ ಮನೆಗಳ ಮೇಲೆ ಹಾದುಹೋಗಿವೆ. ಅಲ್ಲಿನ ಹಳೇ ಕಂಬಗಳನ್ನು ತೆರವುಗೊಳಿಸುವಂತೆ ವಿನಂತಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ, ಬೆಸ್ಕಾಂ ಅಧಿಕಾರಿಗಳಿಗೆ ಸಮಸ್ಯೆ ನಿವಾರಿಸುವಂತೆ ಸೂಚಿಸಲಾಗುವುದು ಎಂದರು.

ವಿಜಯನಗರ ಬಡಾವಣೆಯ ಗೋಪಾಲಮ್ಮ ಎಂಬುವರು, ತಮ್ಮ ವಿಕಲಚೇತನ ಮಗಳಿಗೆ ಕೆಲಸ ಕೊಡಿಸುವಂತೆ ಮನವಿ ಸಲ್ಲಿಸಿದಾಗ, ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಹೇಳಿದರು. 

ಹರಿಹರ ತಾಲೂಕಿನ ದೂಳೆಹೊಳೆ ಗ್ರಾಮದ ಕೆ. ಹನುಮಂತಪ್ಪ , ಇತರರು ಗ್ರಾಮದ ಸರ್ವೆ.ನಂ 26ರಲ್ಲಿ 4+10 ಗುಂಟೆ ಜಮೀನನ್ನು ಸರ್ಕಾರ ನಿವೇಶನ ಇಲ್ಲದವರಿಗೆ ಹಂಚಿ ಹಕ್ಕುಪತ್ರ ನೀಡಿದೆ. ಈ ಸೊತ್ತು ಮೂಲ ಗ್ರಾಮಠಾಣಾ ಹೊರಗಡೆ ಇದೆ ಎಂಬುದಾಗಿ ಮೌಖೀಕವಾಗಿ ತಿಳಿಸಿದ್ದಾರೆ.

ದೂಳೆಹೊಳೆ ಗ್ರಾಮದ ರಿ.ಸ.ನಂ 26 ರಲ್ಲಿ 4+10 ಗುಂಟೆ ಜಮೀನನ್ನು ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಸೇರ್ಪಡೆ ಹಾಗೂ ಹಂಚಿಕೆಯಾದ ನಿವೇಶನಗಳ ಕುರಿತು ಇ-ದಾಖಲೆ ಕೊಡಿಸುವಂತೆ ಮನವಿ ಸಲ್ಲಿಸಿದರು.
 
ಗ್ರಾಮಸ್ಥರ ಮನವಿಗೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ, ಈ ಕುರಿತು ಪರಿಶೀಲಿಸಿ, ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್‌ಗೆ ಸೂಚಿಸಿದರು. ದಾವಣಗೆರೆ ತಾಲೂಕಿನ ಕೊಡಗನೂರು ಗ್ರಾಮದ ಎಚ್‌.ತಿಮ್ಮಪ್ಪ, ಅಬಕಾರಿ ನಿಯಮಾವಳಿ ಉಲ್ಲಂಘಿಸಿ ಮದ್ಯದ ಅಂಗಡಿ ತೆರೆಯಲು
ನೀಡಿರುವ ಅನುಮತಿ ರದ್ದುಪಡಿಸುವಂತೆ ಮನವಿ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ, ಈ ಕುರಿತು ಅಬಕಾರಿ ಇಲಾಖೆಯ ಆಯುಕ್ತರ ಗಮನಕ್ಕೆ ತಂದು ಸಮಸ್ಯೆ ನಿವಾರಿಸುವಂತೆ ತಿಳಿಸಲಾಗುವುದು ಎಂದರು.

ದಾವಣಗೆರೆ ತಾಲೂಕಿನ ಕುಕ್ಕವಾಡ ಗ್ರಾಮದ  ಡಿ.ಬಿ. ಮುರುಗೇಂದ್ರಪ್ಪ ಎಂಬುವರು ಮನೆ ಕಟ್ಟಿಕೊಳ್ಳಲು ತಮ್ಮ ಜಮೀನಿನಲ್ಲಿರುವ ಮರಳು ಬಳಸಿಕೊಳ್ಳಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.
 
ತಹಶೀಲ್ದಾರ್‌ಗೆ ಈ ಕುರಿತು ಮಾಹಿತಿ ನೀಡಿ ಪರಿಶೀಲಿಸುವಂತೆ ಸೂಚಿಸಲಾಗುವುದು ಎಂದು ಪದ್ಮ ಬಸವಂತಪ್ಪ ತಿಳಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳಾದ ರೇಷ್ಮ ಹಾನಗಲ್‌, ಡಿಎಚ್‌ಒ ಡಾ|ತ್ರಿಪುಲಾಂಬ, ಜಿಲ್ಲಾ ವಿಕಲಚೇತನಾ ಧಿಕಾರಿ ಶಶಿಧರ್‌, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಸಿದ್ದೇಶ್‌, ಇತರರು ಸಭೆಯಲ್ಲಿ ಭಾಗವಹಿಸಿದ್ದರು.  

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.