ಬಾಂಬ್ ಬೆದರಿಕೆ: ರೈಲ್ವೆ ನಿಲ್ದಾಣದಲ್ಲಿ ತಪಾಸಣೆ
Team Udayavani, Feb 23, 2019, 5:29 AM IST
ದಾವಣಗೆರೆ: ರಾಜ್ಯದ ರೈಲ್ವೆ ನಿಲ್ದಾಣವೊಂದರಲ್ಲಿ ಬಾಂಬ್ ಸ್ಫೋಟಿಸುವ ಬಗ್ಗೆ ಅನಾಮಿಕ ದೂರವಾಣಿ ಕರೆ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ನಗರದ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಬೆಂಗಳೂರಿನ ಕಂಟ್ರೋಲ್ ರೂಂ ಸಂದೇಶದನ್ವಯ ತಡರಾತ್ರಿ 2-30ರ ವೇಳೆ ನಗರದ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಪತ್ತೆ ದಳ, ಶ್ವಾನದಳ, ಎಸಿಟಿ ತಂಡ ಆಗಮಿಸಿ ಪ್ಲಾಟ್ಫಾರಂ ಒಳಗೊಂಡಂತೆ ರೈಲು ನಿಲ್ದಾಣದ ಸುತ್ತ ಮುತ್ತ ಒಂದು ಗಂಟೆ ಕಾಲತಪಾಸಣೆ ನಡೆಸಿದರು. ಜೊತೆಗೆ ಅಲ್ಲಿದ್ದ ಪ್ರಯಾಣಿಕರ ವಿಚಾರಿಸಿ, ಬ್ಯಾಗ್ಗಳನ್ನು ಪರಿಶೀಲಿಸಿದರು. ನಂತರ ಇಡೀ ರೈಲು ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿತ್ತು.
ರೈಲ್ವೆ ಪೊಲೀಸ್ ಅಧಿಕಾರಿಗಳಾದ ಮಲ್ಲಿಕಾರ್ಜುನ್ ಮಠದ್, ಸೋಮ್ಲಾನಾಯ್ಕ, ನಗರ ಉಪ ವಿಭಾಗದ ಡಿವೈಎಸ್ಪಿ ನಾಗರಾಜ್, ಪೊಲೀಸ್ ಇನ್ಸ್ಪೆಕ್ಟರ್ ಇ. ಆನಂದ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ