ಅವೈಜ್ಞಾನಿಕ ಪರೀಕ್ಷಾ ಪದ್ಧತಿ ರದ್ದತಿಗೆ ಆಗ್ರಹಿಸಿ ಬೈಕ್ ರ್ಯಾಲಿ
Team Udayavani, Mar 1, 2019, 10:10 AM IST
ದಾವಣಗೆರೆ: ಅವೈಜ್ಞಾನಿಕ ಪರೀಕ್ಷಾ ಪದ್ಧತಿಯನ್ನ ದಾವಣಗೆರೆ ವಿಶ್ವವಿದ್ಯಾಲಯ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಗುರುವಾರ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ(ಎನ್ಎಸ್ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೈಕ್ ರ್ಯಾಲಿ ನಡೆಸಿದರು.
ದಾವಣಗೆರೆ ವಿಶ್ವವಿದ್ಯಾಲಯಯ ಜಾರಿಗೊಳಿಸಿರುವ ಸರಿ-ಬೆಸ ಸೆಮಿಸ್ಟರ್ ಪದ್ಧತಿಯಿಂದ ವಿದ್ಯಾರ್ಥಿ ಸಮುದಾಯಕ್ಕೆ ಸಾಕಷ್ಟು ತೊಂದರೆ ಆಗುತ್ತಿದೆ. ಈಗಿನ ನಿಯಮದಂತೆ ಪ್ರಥಮ ಸೆಮಿಸ್ಟರ್ನಲ್ಲಿ ಫೇಲಾದವರು 2ನೇ ಸೆಮಿಸ್ಟರ್ನಲ್ಲಿ ಮರು ಪರೀಕ್ಷೆ ಬರೆಯುವಂತಿಲ್ಲ. 3ನೇ ಸೆಮಿಸ್ಟರ್ನಲ್ಲಿ ಬರೆಯಬೇಕು. ಇಂತಹ ಅವೈಜ್ಞಾನಿಕ ಪದ್ಧತಿಯನ್ನು ಈ ಕೂಡಲೇ ರದ್ದುಪಡಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ದಾವಣಗೆರೆ ವಿಶ್ವವಿದ್ಯಾಲಯ ಸೆಮಿಸ್ಟರ್ ಅಂಕಪಟ್ಟಿ ನೀಡಲು ವಿಳಂಬ ನೀತಿ ಅನುಸರಿಸುತ್ತಿದೆ. ಸಾಕಷ್ಟು ವಿದ್ಯಾರ್ಥಿಗಳಿಗೆ ಆಗುವ ತೊಂದರೆ ನಿವಾರಿಸುವ ಹಿನ್ನೆಲೆಯಲ್ಲಿ ಸಕಾಲದಲ್ಲಿ ಅಂಕಪಟ್ಟಿ ವಿತರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಮುಜಾಹಿದ್ ಪಾಷಾ, ಶಶಿಧರ್ ಪಾಟೀಲ್, ಎಚ್.ಎಂ. ಮನೋಜ್ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!