ವೀರಶೈವ ಒಳಪಂಗಡ ಒಗ್ಗೂಡಲಿ


Team Udayavani, Mar 10, 2019, 7:44 AM IST

dvg-3.jpg

ಹರಿಹರ: ವೀರಶೈವ ಸಮಾಜದ ಒಳಪಂಗಡಗಳ ಮಧ್ಯೆ ಪರಸ್ಪರ ವಿವಾಹ ಸಂಬಂಧಗಳು ಏರ್ಪಟ್ಟಾಗ ಮಾತ್ರ ಸಮಾಜ ಸಂಘಟನೆ ಬಲಾಡ್ಯಗೊಳ್ಳಲು ಸಾಧ್ಯ ಎಂದು ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.

ನಗರ ಹೊರವಲಯದ ಪಂಚಮಸಾಲಿ ಪೀಠದ ಹರ ದೇವಸ್ಥಾನದಲ್ಲಿ ಶನಿವಾರ ನಡೆದ ವೀರಶೈವ ಮಹಾಸಭಾ ತಾಲೂಕು ಘಟಕದ ಸಂಘಟನೆ ಮತ್ತು ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಧರ್ಮ, ಜಾತಿಗಳಲ್ಲೂ ಪಂಗಡಗಳ ಅಸ್ತಿತ್ವ ಸಹಜ. ಪರಸ್ಪರ
ವಿವಾಹ ಸಂಬಂಧಗಳೇರ್ಪಟ್ಟರೆ ಸಹಬಾಳ್ವೆ ಸುಗಮವಾಗುತ್ತದೆ ಎಂದರು.

ಹಾನಗಲ್‌ ಕುಮಾರಸ್ವಾಮಿಗಳು ದೂರದೃಷ್ಟಿಯಿಂದ ಎಲ್ಲಾ ಒಳಪಂಗಡಗಳನ್ನು ಒಟ್ಟುಗೂಡಿಸಿ ಮಹಾಸಭಾ ಸ್ಥಾಪಿಸಿದರು. ತದನಂತರ ಒಳಪಂಗಡಗಳ ಒಗ್ಗೂಡಿಸುವಿಕೆ ನಿರಂತರವಾಗಿ ನಡೆಯುತ್ತಿದೆ. ವಿದೇಶಗಳಲ್ಲೆಲ್ಲೂ ವೀರಶೈವರಲ್ಲಿ ಒಳಪಂಗಡಗಳು ಅಸ್ತಿತ್ವದಲ್ಲಿಲ್ಲ. ಎಲ್ಲರೂ ವೀರಶೈವ ಅಥವಾ ಬಸವದಳ ಎಂಬ ಹೆಸರಿನಡಿ ಒಗ್ಗಟ್ಟಾಗಿದ್ದಾರೆ. ಸಮಾಜದ ಪ್ರತಿಯೊಬ್ಬರೂ ವೀರಶೈವ ಮಹಾಸಭಾ ಸದಸ್ಯತ್ವ ಪಡೆದು,
ಎಲ್ಲೆಡೆ ಒಗ್ಗಟ್ಟು ಪ್ರದರ್ಶಿಸಬೇಕೆಂದು ಕರೆ ನೀಡಿದರು.

ತಾಲೂಕು ಅಧ್ಯಕ್ಷ ಡಿ.ಜಿ.ಶಿವಾನಂದಪ್ಪ ಮಾತನಾಡಿ, ಇಂದಿನಿಂದ ಸದಸ್ಯತ್ವ ನೋಂದಣಿ ಜೊತೆಗೆ ಒಳಪಂಗಡಗಳ ಒಗ್ಗೂಡಿಸುವ ಮಹತ್ತರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದ 84 ತಾಲೂಕುಗಳ ಪೈಕಿ ದಾವಣಗೆರೆ ಜಿಲ್ಲೆಯ ಹರಿಹರ ಮತ್ತು ದಾವಣಗೆರೆ ತಾಲೂಕುಗಳಲ್ಲಿ ಮಾತ್ರ ಮಹಾಸಭಾಗೆ ಚುನಾವಣೆ ನಡೆದಿದೆ. ಉಳಿದ ತಾಲೂಕುಗಳಲ್ಲೂ ಸಂಘಟನೆ ಚುರುಕಾಗಬೇಕಿದೆ ಎಂದರು.

ಹಿರಿಯ ಮುಖಂಡ ಎನ್‌.ಜಿ. ನಾಗನಗೌಡ, ಪಾಲಾಕ್ಷಪ್ಪ ಬಣಕಾರ್‌, ಡಿ.ಎಂ.ಹಾಲಸ್ವಾಮಿ ಮಾತನಾಡಿದರು. ಪಂಚಮಸಾಲಿ ಸಮಾಜದ ಅಧ್ಯಕ್ಷ ಗುಳೇದಹಳ್ಳಿ ಶೇಖರಪ್ಪ, ಕುಂಬಾರ ಸಮಾಜದ ಅಧ್ಯಕ್ಷ ಕರಿಬಸಪ್ಪ, ಹಡಪದ ಅಣ್ಣಪ್ಪ ಸಮಾಜದ ಅಧ್ಯಕ್ಷ ಕೆ.ಉಮಾಪತಿ, ಬಣಜಿಗ ಸಮಾಜದ
ಅಧ್ಯಕ್ಷ ಟಿ.ಜೆ.ಮುರುಗೇಶಪ್ಪ, ನೊಣಬ ಸಮಾಜದ ಅಧ್ಯಕ್ಷ ಕೆ.ಎನ್‌. ನಾಗನಗೌಡ, ಸಾಧು ವೀರಶೈವ ಸಮಾಜದ ಎಚ್‌. ಎಂ. ಶಿವಾನಂದಪ್ಪ, ಜಿ.ನಂದಿಗೌಡ್ರು, ಎಚ್‌. ವಿಶ್ವನಾಥಪ್ಪ, ತಿಮ್ಮನಗೌಡ, ಆರ್‌.ಸಿ. ಪಾಟೀಲ್‌, ಚಂದ್ರಶೇಖರ್‌ ಪೂಜಾರಿ, ಬಸವರಾಜ ಓಂಕಾರಿ, ಅನಿತಾ ಪಾಟೀಲ್‌, ಕೆ.ಸಿ. ಪಾಟೀಲ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.