ಮತ್ತೆ ಮೋದಿ ಪ್ರಧಾನಿಯಾಗ್ತಾರೆ: ರೇಣು ವಿಶ್ವಾಸ


Team Udayavani, Mar 12, 2019, 10:08 AM IST

dvg-3.jpg

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ಒಳಗೊಂಡಂತೆ ರಾಜ್ಯದ 22 ಕ್ಷೇತ್ರ, ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರುವುದು, ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಸೂರ್ಯ-ಚಂದ್ರರು ಇರುವಷ್ಟೇ ಸತ್ಯ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವನ್ನು ಜಗತ್ತೇ ಮೆಚ್ಚಿದೆ. ನೋಟು ಅಮಾನ್ಯ, ಜಿಎಸ್‌ಟಿಯಂತಹ ದಿಟ್ಟ ನಿರ್ಧಾರ, ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಮತ್ತು ಕಾರ್ಯಕರ್ತರ ಸಂಘಟನೆಯ ಆಧಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಜೊತೆಗೆ ಮೋದಿ ಮತ್ತೂಮ್ಮೆ ಪ್ರಧಾನಿ ಆಗುತ್ತಾರೆ ಎಂದು ಹೇಳಿದರು.

ಈ ಬಾರಿ ನರೇಂದ್ರ ಮೋದಿ ವರ್ಸಸ್‌ ಮಹಾ ಘಟಬಂಧನ್‌ ನಡುವೆ ಲೋಕಸಭಾ ಚುನಾವಣೆ ನಡೆಯುತ್ತಿದೆ. ಆದರೆ ಮಹಾಘಟಬಂಧನ್‌ದಲ್ಲಿ ನಾಯಕತ್ವವೇ ಇಲ್ಲ. ರಾಹುಲ್‌ ಗಾಂಧಿ, ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು… ಯಾರು ಪ್ರಧಾನಿ ಅಭ್ಯರ್ಥಿ ಎಂಬ ಸ್ಪಷ್ಟತೆಯೇ ಇಲ್ಲ. ಈ ನಡುವೆ ಅವಕಾಶವಾದಿ ರಾಜಕಾರಣ ಮಾಡುವ ಕುಮಾರಸ್ವಾಮಿಯವರು ದೇವೇಗೌಡರು ಮತ್ತೂಮ್ಮೆ ಪ್ರಧಾನಿ ಆಗಬೇಕು ಎನ್ನುತ್ತಿದ್ದಾರೆ. ಆದರೆ ದೇಶದ ಎಲ್ಲಾ ಕಡೆ ಬಿಜೆಪಿ ಮತ್ತು ನರೇಂದ್ರ ಮೋದಿ ಪರ ವಾತಾವರಣ ಇದೆ. ನರೇಂದ್ರ ಮೋದಿಯವರೇ ಮತ್ತೂಮ್ಮೆ ಪ್ರಧಾನಿ ಆಗುವುದು ಸತ್ಯ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸದ ಬಗ್ಗೆ ಪ್ರತಿ ಪಕ್ಷಗಳು ಟೀಕೆ ಮಾಡುತ್ತಿದ್ದವು. ಪುಲ್ವಾಮಾ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿದಾಗ ಜಗತ್ತಿನ ಎಲ್ಲಾ ದೇಶಗಳು ಭಾರತದ ಪರವಾಗಿ ನಿಂತವು. ಪಾಕಿಸ್ತಾನ ಏಕಾಂಗಿಯಾಗಿತ್ತು. ಅದು ಮೋದಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದು ಮತ್ತು ಬೇರೆ ಬೇರೆ ದೇಶದ ನಾಯಕರೊಂದಿಗೆ ಹೊಂದಿರುವ ವಿಶ್ವಾಸದ ಫಲ. ಮನಮೋಹನ್‌ ಸಿಂಗ್‌ ಅಧಿಕಾರವಧಿಯಲ್ಲಿ ಭಾರತವನ್ನು ನೋಡುತ್ತಿದ್ದಂತಹ ರೀತಿ, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಬದಲಾಗಿದೆ ಎಂದು ತಿಳಿಸಿದರು.

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯತೆಯೇ ಇಲ್ಲ. ರಾಹುಲ್‌ ಗಾಂಧಿ ಒತ್ತಡಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಇದ್ದೇವೆ. ಲೋಕಸಭಾ ಚುನಾವಣೆ ನಂತರ ಬೆಂಬಲ ಕೊಡುವುದಿಲ್ಲ ಎಂದು ಅನೇಕ ಕಾಂಗ್ರೆಸ್‌ ಶಾಸಕರು, ಮುಖಂಡರು ಹೇಳಿದ್ದಾರೆ. ಬಿಜೆಪಿಯೊಂದಿಗೆ ಸರ್ಕಾರ ನಡೆಸಿದಾಗ ಕೊಡುತ್ತಿದ್ದಂತಹ ಗೌರವ ಕೊಡುತ್ತಿಲ್ಲ. ಕಾಂಗ್ರೆಸ್‌ನವರು ಎಲ್ಲದಕ್ಕೂ ಒತ್ತಡ ಹಾಕುತ್ತಾರೆ. ಲೋಕಸಭಾ ಚುನಾವಣೆ ನಂತರ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್‌ನವರು ಹೇಳುತ್ತಿದ್ದಾರೆ. ಲೋಕಸಭಾ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗುವುದು ಖಚಿತ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಜಿ. ಮಲ್ಲಿಕಾರ್ಜುನಪ್ಪ, ಮೂರು ಬಾರಿ ಜಿ.ಎಂ. ಸಿದ್ದೇಶ್ವರ್‌ ಅವರಿಗೆ ಜನರು ಆಶೀರ್ವಾದ ಮಾಡಿದ್ದಾರೆ. ಸಿದ್ದೇಶ್ವರ್‌ ಮನೆಗೆ ಹೋಗುತ್ತಾನೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಅವರು ಹಿರಿಯರು. ಅವರ ಬಗ್ಗೆ ಅಪಾರ ಗೌರವ ಇದೆ. ಆದರೆ, ಆ ರೀತಿ ಮಾತನಾಡುವುದು ಸರಿಯಲ್ಲ. ಸಿದ್ದೇಶ್ವರ್‌ ಕ್ಷೇತ್ರದ ಜನರ ಜೊತೆ ಹೊಂದಿರುವ ಸಂಬಂಧ ಮತ್ತು ಕಾರ್ಯಕರ್ತರ ಸಂಘಟನೆಯಿಂದ ನಾಲ್ಕನೇ ಬಾರಿಗೂ ಜಿ.ಎಂ. ಸಿದ್ದೇಶ್ವರ್‌ ಅವರೇ ಗೆಲ್ಲಲಿದ್ದಾರೆ. ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಎಂದು ಹೇಳುವ ಸಂಸ್ಕೃತಿ ಇಲ್ಲ. ಹೊನ್ನಾಳಿಯಿಂದ ಸಿದ್ದೇಶ್ವರ್‌ ಗೆಲುವಿಗೆ ಎಷ್ಟು ಕಾಣಿಕೆ ಕೊಡಲಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್‌ ಭಟ್‌, ರಾಜನಹಳ್ಳಿ ಶಿವಕುಮಾರ್‌, ಗುರುರಾಜ್‌, ಎಳನೀರು ಶಿವಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.