ಶಾಂತಿ-ಸಂತಸದಿಂದ ಹೋಳಿ ಆಚರಿಸೋಣ


Team Udayavani, Mar 18, 2019, 6:54 AM IST

dvg-1.jpg

ದಾವಣಗೆರೆ: ಬಣ್ಣಗಳ ಹಬ್ಬ ಎಂದೇ ಕರೆಯಲ್ಪಡುವ ಹೋಳಿಯನ್ನ ಜಿಲ್ಲೆ ಮತ್ತು ನಗರದಲ್ಲಿ ಶಾಂತಿ ಮತ್ತು ಸಂತೋಷದಿಂದ ಆಚರಿಸಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್‌.ಚೇತನ್‌ ಮನವಿ ಮಾಡಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಭಾನುವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ನಾಗರಿಕ ಸೌಹಾರ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾ.20 ಅಥವಾ 21 ರಂದು ಜಿಲ್ಲೆಯ ಎಲ್ಲ ನಾಗರಿಕರು ಹೋಳಿಯನ್ನ ಶಾಂತಿಯುತವಾಗಿ ನೆರವೇರಿಸಲು ಸಹಕರಿಸಬೇಕು ಎಂದರು. 

ರೈತರು ತಾವು ಬೆಳೆದ ಬೆಳೆಯನ್ನು ಸಂಭ್ರಮಿಸುವ ಸುಗ್ಗಿ ಕಾಲದ ಹಬ್ಬವಾದ ಹೋಳಿಯನ್ನು ಎಲ್ಲರೂ ಸಂತಸದಿಂದ ಯಾವುದೇ ಗಲಭೆಗೆ ಅವಕಾಶ ಆಗದಂತೆ ಶಾಂತಿಯಿಂದ ನಡೆಸಬೇಕು.

ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶದಲ್ಲಿ ಅನೇಕ ಹಬ್ಬ ಆಚರಿಸಲಾಗುತ್ತದೆ. ವರ್ಷದ ಮೊದಲನೇ ದೊಡ್ಡ ಹಬ್ಬವಾದ ಹೋಳಿ ಆಚರಣೆ ಸಮಯವೇ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಮಯ ಗಮನದಲ್ಲಿಟ್ಟುಕೊಂಡು ಹಬ್ಬವನ್ನು ಶಾಂತಿಯಿಂದ ಆಚರಿಸಬೇಕು ಎಂದರು .

ಮುಖಂಡ ಕೆ.ಬಿ. ಶಂಕರನಾರಾಯಣ ಮಾತನಾಡಿ, ಬಹು ಹಿಂದಿನಿಂದಲೂ ಹೋಳಿ ಆಚರಿಸಿಕೊಂಡು ಬರಲಾಗುತ್ತಿದ್ದು, ಹೋಳಿ ಭೋಗ ಜೀವನವನ್ನು ಸುಡುವ ಸಂಕೇತ. ಹಿಂದೆ ಅರಿಶಿನ ಇತರೆ ಸ್ವಾಭಾವಿಕ ಬಣ್ಣದಿಂದ ಹಬ್ಬ ಆಚರಿಸಲಾಗುತ್ತಿತ್ತು.

ಆದರೆ, ಇತ್ತೀಚೆಗೆ ರಾಸಾಯನಿಕ ಭರಿತ ಬಣ್ಣದೊಂದಿಗೆ ಮೊಟ್ಟೆಯೊಡೆದು ಬಹಳ ವಿಚಿತ್ರವಾಗಿ ಗಲಾಟೆ ಮಾಡಿಕೊಂಡು ಆಚರಿಸುತ್ತಿರುವುದು ವಿಷಾದನೀಯ. ಎಲ್ಲೆ ಮೀರಿ ಆಚರಣೆ ಸಲ್ಲದು. ಆದ್ದರಿಂದ ಅಂತಹುದಕ್ಕೆಲ್ಲ ಕಡಿವಾಣ ಹಾಕಿ ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಳ್ಳಬೇಕು. ಪರೀಕ್ಷೆ ಮತ್ತು ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸಂತಸದಿಂದ ಹಬ್ಬ ಆಚರಿಸಬೇಕು. ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಇರುವುದರಿಂದ ಶುಕ್ರವಾರ ಹೈಸ್ಕೂಲ್‌ ಮೈದಾನದಲ್ಲಿ ಆಚರಣೆಗೆ ಅವಕಾಶ ಮಾಡಿಕೊಟ್ಟರೆ ಉತ್ತಮ ಎಂದು ಸಲಹೆ ನೀಡಿದರು.

ಹಬ್ಬದ ದಿನಗಳಲ್ಲಿ ಮಾತ್ರ ಹಬ್ಬ ಆಚರಣೆ ಮಾಡಲು ಸಾಧ್ಯವಾಗುತ್ತದೆ. ಈ ಬಾರಿ ಹೆಚ್ಚಿನ ಪೊಲೀಸ್‌ ಪಡೆಯನ್ನು ವಿವಿಧ ಆಚರಣೆಗಳಿಗೆ ನಿಯೋಜಿಸಲಾಗುತ್ತಿದೆ. ನಾಯಕನಹಟ್ಟಿ ಜಾತ್ರೆ ದಾವಣಗೆರೆ ವಲಯದಲ್ಲಿದ್ದು ಅಲ್ಲಿಗೆ ಪೊಲೀಸ್‌ ಪಡೆ ನಿಯೋಜಿಸಬೇಕು. ಚುನಾವಣೆ ಕರ್ತವ್ಯಕ್ಕೂ ಪೊಲೀಸರ ನ್ನು ನಿಯೋಜಿಸಲಾಗಿದೆ. ಜಗಳೂರಿನ ಚೌಡೇಶ್ವರಿ ಮತ್ತು ಕೊಡದಗುಡ್ಡದ ವೀರಭದ್ರೇಶ್ವರ ಜಾತ್ರೆಗಳಿಗೂ ಪೊಲೀಸ್‌ ಪಡೆ ನಿಯೋಜನೆ ಇರುವುದರಿಂದ ಶುಕ್ರವಾರ ಹೋಳಿ ಹಬ್ಬಕ್ಕೆ ನಿಯೋಜನೆ ಕಷ್ಟವಾಗುವುದರಿಂದ ಮತ್ತು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬುಧವಾರ ಅಥವಾ ಗುರುವಾರ ಆಚರಿಸಬೇಕು ಎಂದು ಎಸ್ಪಿ ಆರ್‌. ಚೇತನ್‌ ತಿಳಿಸಿದರು.
 
ಜಿಲ್ಲಾ ಜೆಡಿಎಸ್‌ ಮುಖಂಡ ಜೆ. ಅಮಾನುಲ್ಲಾ ಖಾನ್‌ ಮಾತನಾಡಿ, ಹಬ್ಬಗಳನ್ನು ಅತ್ಯಂತ ಸಂತಸ, ಸೌಹಾರ್ದತೆಯಿಂದ ಆಚರಿಸಬೇಕು. ಆದರೆ, ಇತ್ತೀಚಿನ ದಿನಗಳಲ್ಲಿ ಭಯದ ವಾತಾವರಣದಲ್ಲಿ ಹಬ್ಬ ಆಚರಿಸುವ ಸ್ಥಿತಿಯ ಬಗ್ಗೆ ಚಿಂತನೆ ಮಾಡಬೇಕಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಕೇವಲ ಪೊಲೀಸ್‌ ಇಲಾಖೆ ಕೆಲಸವಲ್ಲ ಜೊತೆಗೆ ಸಾರ್ವಜನಿಕರು, ಇತರೆ ಇಲಾಖೆಗಳೂ ಕೈಜೋಡಿಸಬೇಕು.

ಹೋಳಿ ಹಬ್ಬಕ್ಕೆ ಸಂಬಂಧಿ ಸಿದಂತೆ ಪರಿಸರ ಮತ್ತು ಆರೋಗ್ಯ ಇಲಾಖೆಗಳೂ ಸಹಕರಿಸಬೇಕು. ಅಪಾಯಕಾರಿ ರಾಸಾಯನಿಕ ಭರಿತ ಬಣ್ಣ ಬಳಸದೆ, ರಸ್ತೆಯಲ್ಲಿ ಹೋಗುವವರಿಗೆ ಒತ್ತಾಯಪೂರ್ವಕ ಬಣ್ಣ ಹಚ್ಚಬಾರದು. ಯಾರೂ ಕಿಡಿಗೇಡಿತನ ಮಾಡದೇ ಶಾಂತಿ-ಸಂತಸದಿಂದ ಹಬ್ಬ ಆಚರಣೆ ಆಗಬೇಕೆಂದರು.

ನಗರಸಭೆ ಮಾಜಿ ಉಪಾಧ್ಯಕ್ಷ ಎ. ನಾಗರಾಜ್‌ ಮಾತನಾಡಿ, ಇಡೀ ನಗರದಲ್ಲಿ ಒಂದೇ ದಿನ ಹಬ್ಬ ಆಚರಣೆ ಆಗುವಂತೆ ನಿರ್ಧಾರ ಕೈಗೊಳ್ಳಬೇಕು. ಮಧ್ಯಾಹ್ನ 12 ಗಂಟೆವರೆಗೆ ಅಚ್ಚುಕಟ್ಟಾಗಿ ಹಬ್ಬ ಆಚರಣೆ ಆಗಬೇಕು. ಹಬ್ಬಕ್ಕೆ ಯಾವುದೇ ರಾಜಕೀಯ ಬೆರೆಸದೇ ಎಲ್ಲರೂ ಒಗ್ಗಟ್ಟಾಗಿ ಹಬ್ಬ ಆಚರಿಸೊಣ, ಪೊಲೀಸ್‌ ಇಲಾಖೆ ಸಹಕಾರ ಅಭಿನಂದನೀಯ ಎಂದರು.

ಸಿಪಿಐ ಮುಖಂಡ ಆವರಗೆರೆ ಚಂದ್ರು ಮಾತನಾಡಿ, ಪೊಲೀಸ್‌ ಇಲಾಖೆ ಕಾರ್ಯ ಶಾಂತಿ-ಸುವ್ಯವಸ್ಥೆ ಕಾಪಾಡುವುದಾದರೂ ಬದಲಾದ ಕಾಲಘಟ್ಟದಲ್ಲಿ ತನ್ನ ಕರ್ತವ್ಯ ವಿಸ್ತರಿಸಿಕೊಂಡು ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಅಪಾಯಕಾರಿ ಬಣ್ಣಗಳನ್ನು ಬಳಸದಂತೆ ಉತ್ತಮ ಸಲಹೆಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವ್ಹೀಲಿಂಗ್‌ ಮಾಡುವ ಮೂಲಕ ಭಯ ನಿರ್ಮಿಸುತ್ತಾ ತಾವೂ ಅಪಾಯಕ್ಕೊಳಗಾಗುತ್ತಿರುವುದು ಕಳವಳಕಾರಿ. ಎಲ್ಲರೂ ಶಾಂತಿ-ಸಂಭ್ರಮದಿಂದ ಹಬ್ಬ ಆಚರಿಸೋಣವೆಂದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಟಿ.ಜೆ. ಉದೇಶ್‌, ನಗರ ಉಪಾಧೀಕ್ಷಕ ಎಸ್‌.ಎಂ. ನಾಗರಾಜ್‌ ಇತರರು ಇದ್ದರು. ಸಿಪಿಐ ಇ. ಆನಂದ್‌ ನಿರೂಪಿಸಿದರು.  

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.