ಅರ್ಹರಿಗೆ ನ್ಯಾಯ ಒದಗಿಸಿ


Team Udayavani, Mar 22, 2019, 6:31 AM IST

dvg-3.jpg

ದಾವಣಗೆರೆ: ಸದಾ ಸ್ವಸ್ಥ ನಾಗರಿಕ ಸಮಾಜಕ್ಕೆ ಪ್ರಾಸಿಕ್ಯೂಷನ್‌ ಅತ್ಯಗತ್ಯ ಎಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ನಿರ್ದೇಶಕ ಜಿ.ಎಚ್‌. ಅಮೃತ್‌ ಕುಮಾರ್‌ ಪ್ರತಿಪಾದಿಸಿದ್ದಾರೆ.

ಗುರುವಾರ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ವಲಯ ಪೊಲೀಸ್‌, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಗಣಿ ಮತ್ತು ಭೂ ವಿಜ್ಞಾನಗಳ ಇಲಾಖೆ, ಅಬಕಾರಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಒಂದು ದಿನದ ವಲಯ ಮಟ್ಟದ ಕಾರ್ಯಾಗಾರ(ಎನ್‌ಡಿಪಿಎಸ್‌ ಮತ್ತು ಎಂಎಂಆರ್‌ಡಿ/ಕೆಎಂಎಂಸಿಆರ್‌) ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರಿ ಅಭಿಯೋಜಕರು ಅತೀ ಸಮರ್ಥವಾಗಿ ವಾದ ಮಂಡನೆ ಮಾಡುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಸರ್ಕಾರಿ ಅಭಿಯೋಜಕರು ಅರ್ಹರಿಗೆ ನ್ಯಾಯ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ಎಲ್ಲಾ ಇಲಾಖೆಯವರು ಸರ್ಕಾರಿ ಅಭಿಯೋಜಕರ ಬಳಿ ಕೆಲಸ-ಕಾರ್ಯಕ್ಕೆ ಬರುವ ಹಿನ್ನೆಲೆಯಲ್ಲಿ ಪ್ರತಿ ಇಲಾಖೆಯ ಮಾಹಿತಿ, ಕಾನೂನು-ಕಟ್ಟಳೆ ಎಲ್ಲವನ್ನೂ ಚೆನ್ನಾಗಿ ತಿಳಿದುಕೊಂಡಿರಬೇಕು. ತಮ್ಮ ಪ್ರಕಾರ ಪ್ರಾಸಿಕ್ಯೂಷನ್‌ ಅತ್ಯಂತ ಪವಿತ್ರ ವೃತ್ತಿ. ಆ ಮೂಲಕ ನ್ಯಾಯ ದೊರಕಿಸಿಕೊಡುವ ಜೊತೆಗೆ ಸ್ವಸ್ಥ ನಾಗರಿಕ ಸಮಾಜ ನಿರ್ಮಾಣಕ್ಕೂ ಕಾರಣೀಭೂತರಾಗುವ ಹಿನ್ನೆಲೆಯಲ್ಲಿ ವೃತ್ತಿಯ ಬಗ್ಗೆ ಗೌರವ ಮತ್ತು ಧನ್ಯತಾಭಾವ ಹೊಂದಿರಬೇಕು ಎಂದು ತಿಳಿಸಿದರು. 

ನ್ಯಾಯಾಲಯದಲ್ಲಿನ ಕಾರ್ಯ-ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ನ್ಯಾಯಾಧೀಶರ ಚಿಂತನಾಶೈಲಿ ಅರ್ಥ
ಮಾಡಿಕೊಂಡು ವಾದ ಮಂಡನೆ ಮಾಡಬೇಕು. ಆ ರೀತಿ ಮಾಡುವ ಮೂಲಕ ಒಳ್ಳೆಯ ಫಲಿತಾಂಶ ಪಡೆಯಲಿಕ್ಕೆ ಸಾಧ್ಯ
ಎಂದು ತಿಳಿಸಿದರು.

ಅಪರಾಧ ತಡೆಗೆ ಪೊಲೀಸ್‌ ಇಲಾಖೆ ಅಗತ್ಯ ಹೆಚ್ಚಾಗಿದೆ ಎಂದರೆ ನೈತಿಕತೆ ಕುಸಿದಿದೆ ಎಂದರ್ಥ. ಪೊಲೀಸ್‌ ಇಲಾಖೆ ಮತ್ತು ಪ್ರಾಸಿಕ್ಯೂಷನ್‌ ಸಮನ್ವಯತೆಯಿಂದ ಕೆಲಸ ಮಾಡಬೇಕು. ಒಂದೊಮ್ಮೆ ಆ ರೀತಿ ಮಾಡದೇ ಹೋದಲ್ಲಿ ಅಪರಾಧಿಗಳು, ಸಮಾಜಘಾತುಕ ಶಕ್ತಿಗಳು ಲಾಭ ಪಡೆಯುವರು ಎಂದು ನುಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕುಲಕರ್ಣಿ ಅಂಬಾದಾಸ್‌ ಜಿ., ಮಾತನಾಡಿ, ಈಚೆಗೆ ಮಾದಕದ್ರವ್ಯ ಜಾಲ ಹರಡುವ ಷಡ್ಯಂತ್ರ ನಡೆಸುವ ಮೂಲಕ ಭಾರತದ ಸಾಮರ್ಥ್ಯ ಕುಗ್ಗಿಸುವ ಕೆಲಸ ನಡೆಯುತ್ತಿದೆ. ಮಾದಕ ದ್ರವ್ಯ ನಾಗರಿಕ ಸಮಾಜದ ಕ್ಯಾನ್ಸರ್‌ ಇದ್ದಂತೆ. ಅದನ್ನ ಮೂಲೋತ್ಪಾಟನೆ ಮಾಡಬೇಕಿದೆ. ಪೊಲೀಸ್‌, ಪ್ರಾಸಿಕ್ಯೂಷನ್‌ ಮೇಲೆ ರಾಜಕೀಯ ಒಳಗೊಂಡಂತೆ ಇತರೆ
ಒತ್ತಡ ಇರುತ್ತದೆ. ಆ ನಡುವೆಯೂ ಎರಡೂ ಇಲಾಖೆ ಅತಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಮಾತನಾಡಿ, ಪೊಲೀಸ್‌ ಮತ್ತು ಪ್ರಾಸಿಕ್ಯೂಷನ್‌ ಒಟ್ಟಾಗಿ ಕೆಲಸ ಮಾಡುವ ಮೂಲಕ ಅಪರಾಧಿಗಳಿಗೆ ಸೂಕ್ತ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು.
 
ನ್ಯಾಯಾಲಯದಲ್ಲಿ ಪ್ರತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ರೀತಿ ವಾದ ಮಂಡನೆಯ ಅಗತ್ಯತೆಯೂ ಇದೆ. ಈಚೆಗೆ ಶಿಕ್ಷೆಯ ಪ್ರಮಾಣ ಶೇ.3 ರಿಂದ 5 ರಷ್ಟು ಪ್ರಮಾಣದಲ್ಲಿದೆ. ಸಾಕ್ಷಿಗಳು ತದ್ವಿರುದ್ಧವಾಗಿ ನಡೆದುಕೊಳ್ಳಲು ಈ ಅಂಶವೂ ಕಾರಣ ಆಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮಾದಕ ವಸ್ತುಗಳ ಸೇವನೆ ಕೇವಲ ಒಬ್ಬರ ಮೇಲೆ ಮಾತ್ರ ಪರಿಣಾಮ ಉಂಟು ಮಾಡುವದಿಲ್ಲ. ಸಮಾಜದ ಮೇಲೆಯೂ
ಉಂಟು ಮಾಡುತ್ತರೆ. ಈ ವರ್ಷದ ಮೊದಲ ಎರಡು ತಿಂಗಳಲ್ಲಿ 7-8 ಪ್ರಕರಣ ಪತ್ತೆ ಹಚ್ಚಿ, ಜಾಲದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಮಾದಕ ವಸ್ತುಗಳ ದಂಧೆಯಲ್ಲಿ ಸಿಕ್ಕಿ ಬಿದ್ದಾಗ ಯಾವುದೇ ಅನುಕಂಪ ತೋರಬಾರದು ಎಂದರು. 

2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌. ನಾಗಶ್ರೀ, ಹಿರಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶ ಸಾಬಪ್ಪ,
ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಟಿ.ಜೆ. ಉದೇಶ್‌, ಸರ್ಕಾರಿ ಅಭಿಯೋಜಕ ಎಸ್‌.ವಿ. ಪಾಟೀಲ್‌, ಹಿರಿಯ ಕಾನೂನು
ಅಧಿಕಾರಿ ಕೆ.ಜಿ. ಕಲ್ಪನಾ, ಟಿ. ನಾಗರಾಜ್‌, ವಿ. ಕೋದಂಡರಾಮ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.