ಕಲಿತ ವಿದ್ಯೆ-ಕಲಿಸಿದ ಗುರು ಮರೆಯಬೇಡಿ
Team Udayavani, Feb 17, 2017, 2:35 PM IST
ಹುಬ್ಬಳ್ಳಿ: ಕಲಿತ ವಿದ್ಯೆ ಹಾಗೂ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು. ತಾಲೂಕಿನ ಬು.ಅರಳಿಕಟ್ಟಿ ಗ್ರಾಮದ ಚನ್ನಬಸವೇಶ್ವರ ಸೆಕೆಂಡರಿ ಸ್ಕೂಲ್ ಹಾಗೂ ಪದವಿಪೂರ್ವ ಮಹಾವಿದ್ಯಾಲಯ 2005ರ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ 2007ರ ಪಿಯುಸಿ ವಿದ್ಯಾರ್ಥಿಗಳ ಸಮ್ಮಿಲನ 2017 ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮಾಡಿರುವ ಸಾಧನೆ ಹಾಗೂ ಸಾಧನೆ ಮಾಡಲು ಪ್ರೋತ್ಸಾಹಿಸಿದ ಗುರುಗಳು, ಪಾಲಕರನ್ನು ಸದಾ ಸ್ಮರಣೆ ಮಾಡಿಕೊಳ್ಳಬೇಕು ಎಂದರು. ನಿವೃತ್ತ ಪ್ರಾಚಾರ್ಯ ಎಸ್.ಬಿ. ಟಿಕಪ್ಪನವರ ತಮ್ಮ ಶಿಕ್ಷಕ ವೃತಿಯಲ್ಲಿ ನಡೆದ ಹಲವು ಘಟನೆಗಳನ್ನು ಮೆಲಕು ಹಾಕಿದರು.
ಇದೇ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಲ್ಯಾನ್ಸ್ ನಾಯಕ ಯೋಧ ಹನುಮಂತಪ್ಪ ಕೊಪ್ಪದ ಅವರ ತಾಯಿ ಬಸಮ್ಮ ಕೊಪ್ಪದ ಅವರನ್ನು ಹಾಗೂ ಎಲ್ಲ ನಿವೃತ್ತ ಗುರುವೃಂದ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು. ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಸಂತೋಷ ಮುತಾಲಿಕ ದೇಸಾಯಿ ಮಾತನಾಡಿ, ಈ ವರ್ಷ ಆರ್ಥಿಕ ಹಿಂದುಳಿದ ಇಬ್ಬರು ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದರು.
ಪ್ರಾಚಾರ್ಯ ಐ.ವಿ. ಅರಳಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ಈ ವಿ. ಬಿಳೇಕಲ್, ಪಿ.ಸಿ. ವಲಮಣ್ಣವರ, ಅಬ್ದುಲ್ ಅಂಕಲಿ, ಗೌರಮ್ಮ ಕುಂಬಾರ, ದೀಪಾ ಬಾಳಿಕಾಯಿ, ಸುಮಾ ಹೂಸಕಟ್ಟಿ, ಅನಿಲಕುಮಾರ ಹೊಂಡದ ಇನ್ನಿತರರು ಮಾತನಾಡಿದರು. ಅನಿಲಕುಮಾರ ಉಮೇಶ ಕೋಟ್ರಿಕಿ ನಿರೂಪಿಸಿದರು. ಶಿವಾನಂದ ಹಡಪದ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ