ಸಿನಿಮೀಯ ಚೇಸ್:ಬಾವಿಗೆ ಹಾರಿ ಕಳ್ಳರ ಹಿಡಿದ ಪೊಲೀಸ್!
Team Udayavani, Aug 17, 2017, 2:55 PM IST
ಧಾರಾವಾಡ: ಕಳ್ಳತನಕ್ಕೆ ಬಂದ ಇಬ್ಬರು ಖದೀಮರು ಪೊಲೀಸರಿಂದ ತಪ್ಪಿಸಿಕೊಳ್ಳಲು ಬಾವಿಗೆ ಹಾರಿದ ಘಟನೆ ಬುಧವಾರ ರಾತ್ರಿ ನಡೆದಿದ್ದು, ಸಿನಿಮೀಯ ರೀತಿಯಲ್ಲಿ ಪೊಲೀಸರೂ ಬಾವಿಗಿಳಿದು ಇಬ್ಬರನ್ನು ಬಂಧಿಸಿದ್ದಾರೆ.
ಮಹಿಷಿ ರಸ್ತೆಯಲ್ಲಿರುವ ರಶ್ಮಿ ಎನ್ನುವವರ ಮನೆಗೆ ರಾತ್ರಿ ಇಬ್ಬರು ಕಳ್ಳರು ನುಗ್ಗಿ ಮನೆಯ ಮೇಲಿದ್ದ ಸೋಲಾರ್ನ ತಾಮ್ರದ ತಂತಿಗಳನ್ನು ಕದಿಯಲು ಆರಂಭಿಸಿದ್ದಾರೆ. ಕಳ್ಳರ ಕೃತ್ಯ ಕಂಡು ಕೂಡಲೇ ರಶ್ಮಿ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ.
ಪೊಲೀಸರು ಬರುವುದನ್ನು ಗಮನಿಸಿದ ಇಬ್ಬರು ಕಳ್ಳರು ಬಾವಿಗೆ ಹಾರಿ ಅಡಗಿ ಕುಳಿತಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಕಾರ್ಯಾಚರಣೆಗಿಳಿದು ಬಾವಿಯಲ್ಲಿದ್ದ ಧಾರವಾಡದ ಲಕ್ಷ್ಮೀ ಸಿಂಗನಕೇರಿ ಬಡವಾಣೆಯ ಶಾನು ಮತ್ತು ವಾಸಿಮ್ ಎನ್ನುವವರನ್ನು ವಶಕ್ಕೆ ಪಡೆದಿದ್ದಾರೆ.
ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ