ಒಂದು ಮೊಟ್ಟೆಯ ಕಥೆ


Team Udayavani, Nov 18, 2017, 12:47 PM IST

h1-egg.jpg

ಹುಬ್ಬಳ್ಳಿ: ಕಳೆದ ಒಂದೂವರೆ ತಿಂಗಳಿಂದ ಕೋಳಿ ಮೊಟ್ಟೆ ದುಬಾರಿಯಾಗುತ್ತಿದೆ. 100 ಮೊಟ್ಟೆಗಳ ದರದಲ್ಲಿ ದಿಢೀರನೇ 180 ರೂ.ಗಳ ಏರಿಕೆ ಕಂಡು ಬಂದಿದೆ. ಮೊಟ್ಟೆಯ ದರ ದಿನದಿಂದ ದಿನಕ್ಕೆ ಮೇಲೆರುತ್ತಲೇ ಇದ್ದುದರಿಂದ ವ್ಯಾಪಾರಸ್ಥರ, ಹಾಗೂ ಅಂಗಡಿಕಾರರ ನಿದ್ದೆಗೆಡಿಸಿದೆ.

ಕಳೆದ ಅಕ್ಟೋಬರ್‌ 1ರಿಂದ ಮೊಟ್ಟೆ ದರ ಏರುತ್ತಲೇ ಇದ್ದು ಇಳಿಯುತ್ತಿಲ್ಲ. ಸೆಪ್ಟೆಂಬರ್‌ನಲ್ಲಿ 100 ಮೊಟ್ಟೆಗಳಿಗೆ 370 ರೂ. ಗಳಿಗೆ ನೂರು ಇತ್ತು, ಆದರೆ ಈಗ ಮೊಟ್ಟೆಯ ದರ ಇದೀಗ 550 ರೂ.ಗಳಿಗೆ ಹೆಚ್ಚಳಗೊಂಡಿದೆ. ಮೊಟ್ಟೆ ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.

ಕೋಳಿ ಮೊಟ್ಟೆಯ ಬೇಡಿಕೆ ಪ್ರಮಾಣವನ್ನೇ ಬಂಡವಾಳ ಮಾಡಿಕೊಂಡಿರುವ ಮಾರಾಟಗಾರರು ದಿನನಿತ್ಯ ಹೊಸ ದರದೊಂದಿಗೆ ಮಾರಾಟ ಮಾಡುವಂತಾಗಿದೆ. ಕಳೆದ 2-3 ವರ್ಷಗಳಿಗೆ ಹೋಲಿಸಿದರೆ ಈ ವರ್ಷದ ದರ ಅತೀ ಹೆಚ್ಚು ಎನ್ನಬಹುದು.

ಇಷ್ಟೇ ಅಲ್ಲ ಈ ದರ ಇನ್ನೂ ಹೆಚ್ಚಾಗುವ ಸಾಧ್ಯತೆಗಳು ದಟ್ಟವಾಗಿವೆ. ಚಳಿಗಾಲದಲ್ಲಿ ಮೊಟ್ಟೆ ತಿನ್ನುವುದರಿಂದ ದೇಹದ ಉಷ್ಣತೆ ಕಾಯ್ದುಕೊಳ್ಳಬಹುದು ಎನ್ನುವ ಜನರ ನಂಬಿಕೆಯೇ ಮೊಟ್ಟೆಯ ದರ ಹೆಚ್ಚಲು ಕಾರಣ ಎನ್ನಲಾಗಿದೆ. ಚಳಿಗಾಲ ಮುಗಿಯುವವರೆಗೂ ಮೊಟ್ಟೆಯ ದರದಲ್ಲಿ ಇಳಿಕೆ ಸಾಧ್ಯತೆಯಿಲ್ಲ ಎಂಬುದು ವ್ಯಾಪಾರಿಗಳ ಅಭಿಪ್ರಾಯ.

ರಾಜ್ಯ ಸರಕಾರದಿಂದ ಇತ್ತೀಚೆಗೆ ಅಂಗನವಾಡಿ ಮಕ್ಕಳು ಹಾಗೂ ಬಾಣಂತಿಯರಿಗೆ ಮೊಟ್ಟೆ ನೀಡುವಂತೆ ರಾಜ್ಯ ಸರಕಾರ ಆದೇಶಿಸಿದೆ. ಮೊಟ್ಟೆ ಆರೋಗ್ಯಕ್ಕೆ ಉತ್ತಮ ಎನ್ನುವುದು ಎಲ್ಲ ರೀತಿಯಿಂದ ತಿಳಿದು ಬಂದಿದೆ. ವೈದ್ಯರೂ ಕೂಡಾ ಮೊಟ್ಟೆ ತಿನ್ನುವಂತೆ ಸಲಹೆ ನೀಡುತ್ತಾರೆ. 

ಬೇಡಿಕೆಯಂತೆ ಸಿಗುತ್ತಿಲ್ಲ ಮೊಟ್ಟೆ: ಇಲ್ಲಿನ ಕಮರಿಪೇಟೆ ಅಶೋಕ ಮೊಟ್ಟೆ ಕೇಂದ್ರದಲ್ಲಿ ದಿನನಿತ್ಯ 68,250 ಮೊಟ್ಟೆಯ ಒಂದು ಲೋಡ್‌ ಬೇಕಾಗುತ್ತದೆ. ಆದರೆ ಮಾರುಕಟ್ಟೆಗೆ ತಕ್ಕಂತೆ ಮೊಟ್ಟೆಗಳು ಬರುತ್ತಿಲ್ಲ. ಈ ಹಿಂದೆ ಒಂದು ಲೋಡ್‌ ಮೊಟ್ಟೆಗಳು (68,250) ಸಿಗುತ್ತಿದ್ದವು. 

ಆದರೆ  ಇದೀಗ 52 ಸಾವಿರ ಮೊಟ್ಟೆಗಳು ಸಿಗುತ್ತಿದ್ದು ಇದರಿಂದ 10 ಸಾವಿರಕ್ಕೂ ಹೆಚ್ಚು ಮೊಟ್ಟೆಗಳ ಕೊರತೆಯಾಗುತ್ತಿದೆ. ಮಹಾರಾಷ್ಟ್ರ ಭಾಗಕ್ಕೆ ಮೊಟ್ಟೆ ಹೆಚ್ಚು ಸರಬರಾಜು ಮಾಡಲಾಗುತ್ತಿದ್ದು, ನಮ್ಮಲ್ಲಿನ ಕೊರತೆಗೆ ಮುಖ್ಯ ಕಾರಣ. ಚಳಿಯ ಕಾರಣದಿಂದಾಗಿ ಆ ಭಾಗದಲ್ಲಿ ಮೊಟ್ಟೆಗಳ ಮಾರಾಟದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಕೊಪ್ಪಳದ ಗಿಣಗೇರಾದಿಂದ ಮೊಟ್ಟೆಗಳು ಬರುತ್ತಿದ್ದು ಈ ಹಿಂದೆ ಅಲ್ಲಿ 5 ಲಕ್ಷಕ್ಕೂ ಹೆಚ್ಚು ಕೋಳಿ ಸಾಕಾಣಿಕೆ ಮಾಡಲಾಗಿತ್ತು. ಇದೀಗ ಸಾಕಾಣಿಕೆ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ಉತ್ತರ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೊಟ್ಟೆಗಳ ಮಾರಾಟ ಮಾಡಲಾಗುತ್ತಿದೆ ಎಂದು ಮೊಟ್ಟೆ ಕೇಂದ್ರದ ಮಾಲಿಕ ವಾಸುದೇವ ಕ್ಷೀರಸಾಗರ ಹೇಳುತ್ತಾರೆ. 

ದರದಲ್ಲಿ ಏರಿಕೆ: ಅಕ್ಟೋಬರ್‌ 1ರಂದು ಮೊಟ್ಟೆಯ ದರ 370 ರೂ.ಗಳು, ಅಕ್ಟೋಬರ್‌ 15ರಂದು 390 ರೂ.ಗಳು, 17ರಂದು 400 ರೂ.ಗಳು, ನವೆಂಬರ 2ರಂದು 450 ರೂ.ಗಳು, ನ.12ರಂದು 500 ರೂ.ಗಳು, ನ.17ರಂದು 550 ರೂ.ಗಳ ದರ ಏರಿಕೆಯಾಗುತ್ತಲೇ ಬಂದಿದೆ. 

* „ಬಸವರಾಜ ಹೂಗಾರ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.