ಆರ್ಥಿಕ ಸಬಲತೆಗೆ ಜೇನು ಕೃಷಿ ಸಹಾಯಕ
Team Udayavani, Nov 19, 2017, 12:13 PM IST
ಧಾರವಾಡ: ಮಳೆಯ ಅನಿಶ್ಚಿತತೆಯಿಂದ ಕೃಷಿಯಲ್ಲಿ ಕೈಸುಟ್ಟುಕೊಂಡ ರೈತರಿಗೆ ಆರ್ಥಿಕ ಸಂಕಷ್ಟದಿಂದ ಹೊರಬರಲು ಜೇನು ಕೃಷಿ ಸಹಾಯಕವಾಗಿದೆ ಎಂದು ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರು ಹೇಳಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹಮ್ಮಿಕೊಂಡಿದ್ದ ವೈಜ್ಞಾನಿಕ ಜೇನು ಕೃಷಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಕೃಷಿಯಲ್ಲಿ ಆಸಕ್ತಿ ಬೆಳೆಸಿಕೊಂಡು ಸ್ವಯಂ ಉದ್ಯೋಗ ಕಂಡುಕೊಳ್ಳಬೇಕು. ಜೇನು ಕೃಷಿ ಉತ್ತಮ ಆದಾಯ ತರುವ ಹಾಗೂ ಪ್ರಕೃತಿ ಸ್ನೇಹಿ ಉದ್ಯೋಗವಾಗಿದೆ. ಇದರ ನಿವರ್ಹಣೆ ವೆಚ್ಚ ಕೂಡ ಕಡಿಮೆ. ತೋಟಗಾರಿಕೆ ಇಲಾಖೆ ಹಾಗೂ ಜಿಪಂ ಸಹಯೋಗದಲ್ಲಿ ಪ್ರತಿ ತಾಲೂಕಿನಲ್ಲೂ ಜೇನು ಕೃಷಿ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗುವುದು.
ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿ ಮಾಡಲು ಬೇಕಾಗುವ ಪರಿಕರಗಳ ಖರೀದಿಗೆ ಸಹಾಯಧನ ನೀಡಲಾಗುವುದು ಎಂದರು. ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕ ಡಾ| ರಾಮಚಂದ್ರ ಕೆ. ಮಡಿವಾಳ ಮಾತನಾಡಿ, ಜೇನು ಸಾಕಣೆ ಕೈಗೊಳ್ಳುವ ಪ್ರತಿ ಫಲಾನುಭವಿಗೂ ಜೇನು ಪೆಟ್ಟಿಗೆ, ಸ್ಟಾಂಡ್ ಖರೀದಿಗೆ 1800 ರೂ. ಸಬ್ಸಿಡಿ ನೀಡಲಾಗುತ್ತದೆ.
ಅಲ್ಲದೆ ಪರಿಶಿಷ್ಟ ರೈತರಿಗೆ ಶೇ. 90ರಷ್ಟು ರಿಯಾತಿ ನೀಡಲಾಗುವುದು ಎಂದರು. ಉಳುವಾ ಯೋಗಿ ರೈತ ಉತ್ಪಾದಕ ಸಂಘದ ಅಧ್ಯಕ್ಷ ದ್ಯಾಮಣ್ಣ ರೇವಣ್ಣನವರ, ಜಿಪಂ ಸದಸ್ಯ ನಿಂಗಪ್ಪ ಘಾಟಿನ್, ತಾಪಂ ಸದಸ್ಯೆ ಪೂಜಾ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಎಂ. ಕುಂದಗೋಳ,
ಹುಬ್ಬಳ್ಳಿ ಎಪಿಎಂಸಿ ಅಧ್ಯಕ್ಷ ಈಶ್ವರ ಕಿತ್ತೂರು, ಬಾಗಲಕೋಟೆ ತೋಟಗಾರಿಕೆ ವಿವಿ ಸಹ ಪ್ರಧ್ಯಾಪಕಿ ಡಾ| ಸುವರ್ಣಾ ಪಾಟೀಲ್, ಹಿರಿಯ ವಿಜ್ಞಾನಿ ನರೇಂದ್ರ ಕುಲಕರ್ಣಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಆರ್.ಟಿ. ಹಿರೇಮಠ, ಹುಬ್ಬಳ್ಳಿ ತೋಟಗಾರಿಕೆ ಸಹಾಯಕ ನಿರ್ದೇಶಕಿ ಶಿಲ್ಪಶ್ರೀ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ