ಡಾ| ಕಿರಣ ಬೇಡಿಯಿಂದ ಚಾಲನೆ
Team Udayavani, Nov 30, 2017, 1:07 PM IST
ಹುಬ್ಬಳ್ಳಿ: ರಾಷ್ಟ್ರೀಯ ಸೇವಾ ಭಾರತಿ ಸೇವಾ ಸಂಗಮ ರಾಜ್ಯ ಸಮಾವೇಶಕ್ಕೆ ತಯಾರಿ ಕಾರ್ಯ ನಡೆಯುತ್ತಿದ್ದು, ಇಲ್ಲಿನ ಗೋಕುಲ ಗಾರ್ಡನ್ನಲ್ಲಿ ಡಿ. 1ರಂದು ಬೆಳಗ್ಗೆ 11:15 ಗಂಟೆಗೆ ಪಾಂಡಿಚೇರಿ ಲೆμrನೆಂಟ್ ಗರ್ವನರ್ ಡಾ| ಕಿರಣ ಬೇಡಿ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾವೇಶ ಸ್ವಾಗತ ಸಮಿತಿ ಕಾರ್ಯದರ್ಶಿ ಗೋವಿಂದಪ್ಪ ಗೌಡಪ್ಪಗೋಳ, ಡಿ. 1-3ರ ವರೆಗೆ ಸಮಾವೇಶ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಭಾರತಿ ಸಂಘಟನಾ ಕಾರ್ಯದರ್ಶಿ ರಾಕೇಶ ಜೈನ್ ಸಮಾವೇಶದ ಆಶಯ ನುಡಿ ನುಡಿಯಲಿದ್ದು,
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಪ್ರಮುಖ ಭಾಷಣ ಮಾಡಲಿದ್ದಾರೆ ಎಂದರು. ಡಿ. 2ರಂದು ಯುವ ಮತ್ತು ಮಹಿಳಾ ಸಮಾವೇಶ ನಡೆಯಲಿದೆ. ಸಂಜೆ 5:30 ಗಂಟೆಗೆ ಸಾರ್ವಜನಿಕ ಸಮಾರಂಭ ನಡೆಯಲಿದ್ದು,
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಕಾರ್ಯವಾಹ ಸುರೇಶ ಜೋಶಿ ಮುಖ್ಯ ಭಾಷಣ ಮಾಡಲಿದ್ದಾರೆ. ಸಮಾವೇಶದಲ್ಲಿ ಸುಮಾರು 1 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕ ಸಮಾವೇಶಕ್ಕೆ 2 ಸಾವಿರಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಡಿ. 3ರಂದು ವೈದ್ಯರ ಸಂವಾದ ನಡೆಯಲಿದ್ದು,
100ಕ್ಕೂ ಅಧಿಕ ಆಯುರ್ವೇದ ಹಾಗೂ ಪಾರಂಪರಿಕ ವೈದ್ಯರು ಪಾಲ್ಗೊಳ್ಳಲಿದ್ದಾರೆ. ಸೇವಾ ಸಂಗಮಕ್ಕಾಗಿ ಗೋಕುಲ ಗಾರ್ಡನ್ನಲ್ಲಿ ಮುಖ್ಯ ವೇದಿಕೆ ಅಲ್ಲದೆ, ಗುಂಪು ಚರ್ಚೆಗೆ ಪ್ರತ್ಯೇಕ ವೇದಿಕೆ ರೂಪಿಸಲಾಗಿದೆ. ಅದೇ ರೀತಿ ಮಾಹಿತಿ ಪ್ರದರ್ಶನ, ಮಳಿಗೆಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದರು. ಸೇವಾ ಭಾರತಿ ದಕ್ಷಿಣ ಭಾರತ ಸಂಯೋಜಕ ಶ್ರೀಧರ ಸಾಗರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ