ರಂಗಭೂಮಿಗೆ ಸಾಣೇಹಳ್ಳಿ ಮಠದ ಕೊಡುಗೆ ಅಪಾರ
Team Udayavani, Jan 19, 2018, 12:50 PM IST
ಹುಬ್ಬಳ್ಳಿ: ಸಾಣೇಹಳ್ಳಿ ಶಿವಕುಮಾರ ಕಲಾಸಂಘ “ಶಿವಸಂಚಾರ’ ನಾಟಕೋತ್ಸವದ ಉದ್ಘಾಟನೆ ನಗರದ ಆದರ್ಶನಗರದ ಕನ್ನಡ ಭವನದಲ್ಲಿ ಗುರುವಾರ ನಡೆಯಿತು. ಡಾ| ಪಾಂಡುರಂಗ ಪಾಟೀಲ ಮಾತನಾಡಿ, ನಾಟಕದ ಮೂಲಕ ಸಮಾಜ ಬದಲಾವಣೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟವರು ಸಾಣೇಹಳ್ಳಿ ಸ್ವಾಮಿಗಳು.
ಅವರ ತಂಡದವರು ಪ್ರತಿ ವರ್ಷ ವಿಭಿನ್ನ ನಾಟಕಗಳನ್ನು ಪ್ರದರ್ಶಿಸುತ್ತಾರೆ. ಹವ್ಯಾಸಿ ರಂಗಭೂಮಿಯ ಉತ್ತೇಜನಕ್ಕೆ ಸಾಣೇಹಳ್ಳಿ ಮಠದ ಕೊಡುಗೆ ಅಪಾರ ಎಂದರು. ಅನೇಕ ಕಲಾವಿದರು, ರಂಗಕರ್ಮಿಗಳನ್ನು ರೂಪಿಸಿದ ಕೀರ್ತಿ ಶಿವಸಂಚಾರಕ್ಕಿದೆ. ನಾಟಕಗಳನ್ನು ಆಯೋಜಿಸುವುದು ಕಡುಕಷ್ಟವಾಗಿದೆ.
ಇಂಥ ಸಂದರ್ಭದಲ್ಲಿ ನಿರಂತರ ನಾಟಕ ಪ್ರದರ್ಶನಗಳನ್ನು ನೀಡುತ್ತ ರಂಗಭೂಮಿಯನ್ನು ಜೀವಂತವಾಗಿಟ್ಟಿರುವುದು ಶ್ಲಾಘನೀಯ. ನಾಟಕ ಪ್ರದರ್ಶನಕ್ಕೆ ಕಡಿಮೆ ದರದಲ್ಲಿ ಕನ್ನಡ ಭವನ ನೀಡುವ ಕುರಿತು ಮಹಾಪೌರರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, ನಾವು ನಿತ್ಯ ಜೀವನದಲ್ಲಿ ಹಲವು ಬಾರಿ ನಾಟಕ ಮಾಡುತ್ತೇವೆ. ಆದರೆ ನಿಜವಾಗಿಯೂ ಯಾವುದು ನಾಟಕ ಎಂಬುದನ್ನು ತಿಳಿಯಲು ನಾಟಕ ನೋಡಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿ, ಸಾಣೆಹಳ್ಳಿ ಮಠ ಪ್ರತಿ ವರ್ಷ ಮೂರು ವಿಶಿಷ್ಟ ನಾಟಕಗಳನ್ನು ಪ್ರದರ್ಶಿಸುತ್ತಿದೆ. ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಾಟಕಗಳನ್ನು ವೀಕ್ಷಿಸಬೇಕು ಎಂದು ಹೇಳಿದರು. ಆರ್.ಟಿ. ಮಜ್ಜಗಿ ಮಾತನಾಡಿ, ನಾಟಕಗಳ ಆಯೋಜನೆಗೆ ಕನ್ನಡ ಭವನವನ್ನು ಉಚಿತವಾಗಿ ನೀಡಲು ಮಹಾನಗರ ಪಾಲಿಕೆ ಮುಂದಾಗಬೇಕು.
ರಂಗಭೂಮಿಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದರು. ನಂತರ ಡಾ| ಸಿದ್ದಲಿಂಗ ಪಟ್ಟಣಶೆಟ್ಟಿ ಅನುವಾದಿಸಿದ, ಮಾಲತೇಶ ಬಡಿಗೇರ ನಿರ್ದೇಶನದ “ಚೋರ ಚರಣದಾಸ’ ನಾಟಕದ ಪ್ರದರ್ಶನ ನಡೆಯಿತು. ಜ. 19ರಂದು “ಮೋಳಿಗೆ ಮಾರಯ್ಯ’ ಹಾಗೂ ಜ. 20ರಂದು “ಸಾಯೋ ಆಟ’ ನಾಟಕಗಳ ಪ್ರದರ್ಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ