ಬಾಲವಿಕಾಸ ಸಮಿತಿ ರಚನೆಗೆ ವಿರೋಧ
Team Udayavani, Apr 19, 2018, 5:36 PM IST
ರಾಮದುರ್ಗ: ಅಂಗನವಾಡಿ ಕೇಂದ್ರಗಳ ನಿರ್ವಹಣೆಗೆ ಇರುವ ಬಾಲ ವಿಕಾಸ ಸಮಿತಿಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಮಾದರಿಯಲ್ಲಿ ಮಾಡಲಾಗುತ್ತಿರುವ ಸರಕಾರದ ಆದೇಶವನ್ನು ವಾಪಸ್ ಪಡೆಯಬೇಕು ಹಾಗೂ ಅಂಗನವಾಡಿ ನೌಕರರಿಗೆ ಪ್ರತಿವರ್ಷ ನೀಡುತ್ತಿರುವ ಬೇಸಿಗೆ ರಜೆಯನ್ನು ಕಾರ್ಯಕರ್ತೆ ಹಾಗೂ ಸಹಾಯಕಿಗೆ ಏಕ ಕಾಲಕ್ಕೆ ನೀಡಬೇಕು ಎಂದು ಒತ್ತಾಯಿಸಿ ತಾಲೂಕಾ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮಾದರಿಯಲ್ಲಿ ಬಾಲ ವಿಕಾಸ ಸಮಿತಿ ರಚನೆಯಾದರೆ ನೌಕರರು ಆ ಸಮಿತಿಯ ಆದೇಶದಂತೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಪೂರಕ ಪೌಷ್ಟಿಕ ಆಹಾರ ನೀಡುವ ದಿನಗಳು 300 ಆಗಿಲ್ಲವೆಂಬ ಒಂದೇ ನೆಪ ಮಾಡಿ ಶಿಕ್ಷಕಿಗೆ 15 ದಿನ ಮೊದಲು ರಜೆ ಹಾಗೂ ನಂತರ 15 ದಿನ ಸಹಾಯಕಿಗೆ ರಜೆ ಎಂದು ಸರಕಾರ ಆದೇಶ ಮಾಡಿದ್ದು ಸರಿಯಲ್ಲ. ಕಾರಣ ಸರಕಾರ ಮಾಡಿದ ಆದೇಶವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಕಿಯ ಜೊತೆಗೆ ಸಹಾಯಕಿ ಒಟ್ಟಿಗೆ ಇದ್ದಲ್ಲಿ ಮಾತ್ರ ಎಲ್ಲ ಕೆಲಸಗಳು ಸುಗಮವಾಗಿ ನಡೆಯುತ್ತವೆ. ಈ ಮೊದಲಿನಂತೆ ಏಕಕಾಲಕ್ಕೆ ಶಿಕ್ಷಕಿ ಹಾಗೂ ಸಹಾಯಕಿಗೆ ಬೇಸಿಗೆ ರಜೆ ನೀಡಬೇಕು ಎಂದು ಅವರು ಮನವಿ ಮೂಲಕ ಒತ್ತಾಯಿಸಿದ್ದಾರೆ. ಮನವಿ ಸ್ವೀಕರಿಸಿದ ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಖಾದರಬಿ ಲಕ್ಷ್ಮೇಶ್ವರ ಮಾತನಾಡಿ, ಮನವಿಯನ್ನು ಮೇಲಧಿಕಾರಿಗಳಿಗೆ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಗೈಬು ಜೈನೆಖಾನ, ಸಂಘದ ಅಧ್ಯಕ್ಷೆ ಸರಸ್ವತಿ ಮಾಳಶೆಟ್ಟಿ, ಮುಖಂಡರಾದ ರೇಖಾ ಪಟ್ಯಾಳ, ವಿಜಯಲಕ್ಷ್ಮೀ ಸಿದ್ಧಿಭಾಂವಿ, ಬೋರಮ್ಮ ತೆಕ್ಕಿ, ಸ್ವೇತಾ ಕೊಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ