ಶರಣರ ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತ
Team Udayavani, Apr 20, 2018, 5:26 PM IST
ಧಾರವಾಡ: ಬಸವಾದಿ ಶರಣರ ಚಿಂತನೆ, ಜೀವನ ಕ್ರಮ ಸರ್ವಕಾಲಕ್ಕೂ ಪ್ರಸ್ತುತ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ| ಎಸ್.ಜಿ. ಸಿದ್ದರಾಮಯ್ಯ ಹೇಳಿದರು.
ಕವಿವಿಯ ಶ್ರೀಬಸವೇಶ್ವರ ಪೀಠದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾದಾರ್ಶನಿಕ, ಮಾನವತಾವಾದಿ, ಸಮಾಜ ಚಿಂತಕ, ನಡೆ-ನುಡಿಗಳೆರಡರಲ್ಲಿ ಏಕತೆಯನ್ನು ಸಾಧಿ ಸಿದ ಬಸವೇಶ್ವರರ ಜೀವನ ಆದರ್ಶಪ್ರಾಯವಾಗಿದೆ. ಅವರ ಚಿಂತನೆಗಳನ್ನು ಇಡೀ ಮನಕುಲವೇ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಕವಿವಿ ಕುಲಸಚಿವ ಪ್ರೊ| ಮಲ್ಲಿಕಾರ್ಜುನ ಪಾಟೀಲ, ಅಧ್ಯಕ್ಷತೆ ವಹಿಸಿದ್ದ ಕವಿವಿ ಪ್ರಭಾರ ಕುಲಪತಿ ಪ್ರೊ| ನಾಗಪ್ಪ ಶಹಾಪುರ ಮಾತನಾಡಿದರು. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಡಾ| ಎಸ್.ಆರ್. ಗುಂಜಾಳ, ಪ್ರೊ| ಆರ್.ಎಲ್. ಹೈದರಾಬಾದ, ಶಿವಣ್ಣ ಬೆಲ್ಲದ ಇನ್ನಿತರರಿದ್ದರು. ಬಸವೇಶ್ವರ ಪೀಠದ ಸಂಯೋಜಕ ಡಾ| ಸಿ.ಎಂ. ಕುಂದಗೋಳ ಪರಿಚಯಿಸಿದರು. ಸಂತೋಷ ಹಿರೇಮಠ ನಿರೂಪಿಸಿದರು. ದನವಂತ ಹಾಜವಗೋಳ ವಂದಿಸಿದರು.
ಸಾಹಿತ್ಯ ಭವನದಲ್ಲಿ ಬಸವ ಜಯಂತಿ: ಇಲ್ಲಿಯ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬಸವ ಜಯಂತಿ ಆಚರಿಸಲಾಯಿತು. ಸಾಹಿತಿ ಪ್ರೊ| ಕೆ.ಎಸ್. ಕೌಜಲಗಿ, ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ ಹಾಗೂ ಡಾ| ಜಿನದತ್ತ ಹಡಗಲಿ ಮಾತನಾಡಿದರು, ಶಂಕರ ಕುಂಬಿ, ಎಫ್.ಬಿ. ಕಣವಿ, ಎಸ್.ಎನ್, ಗಡಾದ, ಚಂದ್ರಶೇಖರ ಕುಂಬಾರ, ಆರತಿ ದೇವಶಿಖಾಮಣಿ, ಎಚ್. ಕೆ. ಪಾಟೀಲ, ಪೂಜಾ ವಾಲೀಕಾರ ಇದ್ದರು. ಶಿವಾನಂದ ಟವಳಿ ನಿರೂಪಿಸಿದರು. ಚಂದ್ರಶೇಖರ ಕುಂಬಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ