ವಿವಿಧ ವಿಭಾಗಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ
Team Udayavani, Apr 21, 2018, 4:56 PM IST
ಹುಬ್ಬಳ್ಳಿ: ನೈಋತ್ಯ ರೈಲ್ವೆಯ 63ನೇ ಸಪ್ತಾಹ ಕಾರ್ಯಕ್ರಮ ಚಾಲುಕ್ಯ ರೈಲ್ವೆ ಇನ್ಸ್ಟಿಟ್ಯೂಟ್ನಲ್ಲಿ ಶುಕ್ರವಾರ ನಡೆಯಿತು.
ವಿವಿಧ ವಿಭಾಗಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸಿದವರಿಗೆ ಪ್ರಶಸ್ತಿ ನೀಡಿದ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎ.ಕೆ. ಗುಪ್ತಾ ಮಾತನಾಡಿ, ಸಿಬ್ಬಂದಿ ಉತ್ಕೃಷ್ಟ ಕಾರ್ಯ ಮಾಡುತ್ತಿರುವುದರಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ಸಿಗುತ್ತಿದೆ. ಕಳೆದ 57 ವರ್ಷಗಳಲ್ಲಿಯೇ ವಲಯದಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ ಎಂದರು.
2017-18ರಲ್ಲಿ ವಲಯ ಅಗಾಧ ಸಾಧನೆ ಮಾಡಿದೆ. ಮುಂಗಡವಲ್ಲದ ಟಿಕೆಟ್ ಪಡೆಯಲು ಅಪ್ಲಿಕೇಶನ್ ಬಿಡುಗಡೆ, ಟಿಕೆಟ್ ಪರಿಶೀಲನೆ ಮೂಲಕ ಹೆಚ್ಚಿನ ಆದಾಯ, ದೀರ್ಘಾವಧಿ ಸಂಚರಿಸುವ 12 ರೈಲುಗಳು, 30 ಕಿಮೀ ಹೊಸ ಲೈನ್ ಹಾಗೂ 74 ಕಿಮೀ ಡಬ್ಲಿಂಗ್ ಮಾಡಲಾಗಿದೆ. ಎಲ್ಲ ನಿಲ್ದಾಣಗಳಲ್ಲಿ ಶೇ. 100ರಷ್ಟು ಎಲ್ಇಡಿ ಲೈಟಿಂಗ್ ಅಳವಡಿಸಲಾಗಿದೆ. ಮಾನವರಹಿತ ಲೆವಲ್ ಕ್ರಾಸಿಂಗ್ನಲ್ಲಿ ರೈಲ್ಮಿತ್ರ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
16 ಹಿರಿಯ ಅಧಿಕಾರಿಗಳು, 48 ಸಿಬ್ಬಂದಿ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರೆ, ಇಬ್ಬರು ಮಹಿಳಾ ಸಿಬ್ಬಂದಿ ವರ್ಷದ ಮಹಿಳೆ ಪ್ರಶಸ್ತಿಗೆ ಭಾಜನರಾದರು. ಸಮಗ್ರ ಎಫಿಶಿಯೆನ್ಸಿ ಪ್ರಶಸ್ತಿ ಬೆಂಗಳೂರು ವಿಭಾಗದ ಪಾಲಾಯಿತು. ಎಸ್.ಕೆ. ಅಲ್ಬೇಲಾ ಸ್ವಾಗತಿಸಿದರು. ಶ್ರೀನಿವಾಸ ರಾಘವನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ