ಜನನಾಯಕರಿಗೆ ಮತ ಕೇಳುವ ಹಕ್ಕಿಲ್ಲ -ಆಕ್ರೋಶ 


Team Udayavani, Apr 23, 2018, 5:02 PM IST

23-April-27.jpg

ಚಿಕ್ಕೋಡಿ: ಚಿಕ್ಕೋಡಿ-ಸದಲಗಾ ವಿಧಾನಸಭೆ ಮತಕ್ಷೇತ್ರದ ಪಶ್ಚಿಮ ಭಾಗದ ರೈತರು ಸಮರ್ಪಕ ನೀರಿಲ್ಲದೆ ಪರದಾಡುತ್ತಿದ್ದಾರೆ. ಈ ಭಾಗದಲ್ಲಿ ಮಹಾಲಕ್ಷ್ಮೀ  ಏತ ನೀರಾವರಿ ಯೋಜನೆ ಮಂಜೂರಾದರೂ ಸಹ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಅನುಷ್ಠಾನ ಮಾಡಲು ವಿಫಲರಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಮತ ಕೇಳುವ ನೈತಿಕ ಹಕ್ಕು ಉಳಿಸಿಕೊಂಡಿಲ್ಲ ಎಂದು ಕೋಥಳಿ, ಕುಠಾಳಿ, ಕುಪ್ಪಾನವಾಡಿ, ಚಿಂಚಣಿ ಭಾಗದ ರೈತರು ಆಕ್ರೋಶ ವ್ಯಕ್ತಪಡಿಸಿದರು.

ರವಿವಾರ ತಾಲೂಕಿನ ಕೋಥಳಿ ಗ್ರಾಮದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ರೈತರು, ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಚಿಕ್ಕೋಡಿ ತಾಲೂಕಿನ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿ ಅನುದಾನ ಸಹ ಘೋಷಣೆ ಮಾಡಿದ್ದರು. ಆದರೆ ಈ ಭಾಗದಲ್ಲಿ ಆಡಳಿತ ಇರುವ ಕಾಂಗ್ರೆಸ್‌ ಸರಕಾರದ ಸಂಸದರು ಮತ್ತು ಶಾಸಕರು ಏತ ನೀರಾವರಿ ಯೋಜನೆ ಅನುಷ್ಠಾನ ಮಾಡದೇ ರೈತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ರೈತ ಮುಖಂಡ ಪ್ರಕಾಶ ಮಗದುಮ್ಮ ಮಾತನಾಡಿ, ಚಿಕ್ಕೋಡಿ ತಾಲೂಕಿನ ಪಶ್ಚಿಮ ಭಾಗದ ಚಿಂಚಣಿ, ಕೋಥಳಿ, ಕುಪ್ಪಾಣವಾಡಿ, ಕುಠಾಳಿ, ನವಲಿಹಾಳ, ನಾಯಿಂಗ್ಲಜ್‌, ಖಡಕಲಾಟ, ಪಟ್ಟಣಕುಡಿ ಸೇರಿ ಸುಮಾರು ಹತ್ತು ಹಳ್ಳಿಗಳಿಗೆ ಅನುಕೂಲವಾಗುವ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಮಂಜೂರಾಗಿದೆ. ಅದನ್ನು ಅನುಷ್ಠಾನ ಮಾಡಿ ನೀರು ಹರಿಸುತ್ತೇನೆಂದು ರೈತರಿಗೆ ವಾಗ್ಧಾನ ಮಾಡಿರುವ ಹಾಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದರು.

ಕಳೆದ ಉಪಚುನಾವಣೆಯಲ್ಲಿ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಅನುಷ್ಠಾನ ಮಾಡಿ ಆರು ತಿಂಗಳೊಳಗಾಗಿ ನೀರು ಹರಿಸುತ್ತೇನೆಂದು ನೀರಾವರಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರೂ ಪ್ರಯೋಜನವಾಗಿಲ್ಲ ಮತ್ತು ಕ್ಷೇತ್ರವನ್ನು ದತ್ತು ತೆಗೆದುಕೊಂಡು ಇಲ್ಲಿಯ ನೀರಾವರಿ ಸಮಸ್ಯೆಗಳನ್ನು ಬಗೆಹರಿಸುತ್ತೇನೆಂದು ಪಟ್ಟಣಕುಡಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಹೇಳಿ ಮೂರು ವರ್ಷ ಕಳೆದರೂ ಇಲ್ಲಿಯ ಜನ ಹನಿ ನೀರು ಕಂಡಿಲ್ಲ ಎಂದ ಅವರು, ಈ ಭಾಗದಲ್ಲಿ ನೀರು ಹರಿಸುತ್ತೇನೆ. ಇಲ್ಲವಾದಲ್ಲಿ ಮುಂದಿನ ಬಾರಿ ಮತ ಕೇಳಲು ಬರುವುದಿಲ್ಲವೆಂದು ರೈತರಿಗೆ ವಾಗ್ಧಾನ ಮಾಡಿರುವ ಹುಕ್ಕೇರಿ
ಅವರು, ಈಗ ಕ್ಷೇತ್ರದಲ್ಲಿ ಮತ ಕೇಳಲು ಬರುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.

ಘಟಪ್ರಭಾ ಸಿಬಿಸಿ ಕಾಲುವೆಯನ್ನು ದುರಸ್ತಿಗೊಳಿಸಿ ಕೊನೆ ಹಳ್ಳಿಗೆ ನೀರು ಹರಿಸುತ್ತೇನೆಂದು ಕಾಲುವೆ ಸ್ವಚ್ಛತೆಗೆ 30 ಕೋಟಿ ರೂ. ಬಿಡುಗಡೆ ಮಾಡಿದರೂ ಸಹ ಕೊನೆ ಹಳ್ಳಿಯವರಿಗೆ ಹನಿ ನೀರು ಹರಿಲಿಲ್ಲ. ಮಡ್ಡಿ ಭಾಗದ ಸರಕಾರಿ ಪ್ರಾಥಮಿಕ ಶಾಲೆಯ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೂ ಸಹ ಅವುಗಳಿಗೆ ಗಮನ ಹರಿಸದೇ ಕೇವಲ ರಸ್ತೆ, ಗಟಾರ ಮತ್ತು ವಿದ್ಯುತ್‌ ಕಂಬಗಳಿಗೆ ಅನುದಾನ ಖರ್ಚು ಮಾಡಿ ಸರಕಾರದ ಕೋಟ್ಯಂತರ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ವೃಷಭ ಕಣಗಲೆ, ವಿದ್ಯಾಧರ ಬನವನ್ನವರ,
ಜಾವೇದ ಮುಜಾವರ, ಶಾಂತಿನಾಥ ಸಕಾವರ, ಭರತೇಶ ಪಾಟೀಲ, ಸುರೇಶ ಹೆಗಡೆ, ಬಾಬು ಮುಜಾವರ, ಪ್ರವೀಣ ಹೂವನ್ನವರ ಇದ್ದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.