ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ
Team Udayavani, Apr 29, 2018, 5:14 PM IST
ಧಾರವಾಡ: ಸಾಮಾಜಿಕವಾಗಿ ಎಲ್ಲರಿಗೂ ಕಾನೂನಿನ ಭದ್ರತೆ ಒದಗಿಸುವ ಜವಾಬ್ದಾರಿ ಪೊಲೀಸರ ಮೇಲಿದೆ. ಹೀಗಾಗಿ ಆರಕ್ಷಕರು ಮತ, ಧರ್ಮ, ಪಂಥ ಮರೆತು ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ತರಬೇತಿ ಪೊಲೀಸ್ ಮಹಾ ನಿರ್ದೇಶಕ ಪಿ.ಕೆ. ಗರ್ಗ ಹೇಳಿದರು.
ಇಲ್ಲಿನ ಧಾರವಾಡ ಪೊಲೀಸ್ ತರಬೇತಿ ಶಾಲೆಯ 3ನೇ ತಂಡದ ನಾಗರಿಕ ಪೊಲೀಸ್ (ಸಿವಿಲ್) ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಕಳೆದ 8 ತಿಂಗಳಿಂದ ವೃತ್ತಿಪರ ಬುನಾದಿ ತರಬೇತಿ ಪಡೆದ ಪೊಲೀಸ್ ಕಾನ್ಸ್ಟೇಬಲ್ಗಳು ಶಿಸ್ತು, ಸಹನೆ, ಸನ್ನಡತೆ ಕಾಪಾಡಿಕೊಳ್ಳಬೇಕು. ಸದೃಢ ಆರೋಗ್ಯದೊಂದಿಗೆ ವೃತ್ತಿಪರ ಜೀವನ ನಡೆಸಬೇಕು ಎಂದರು.
ಅಧಿಕಾರಿಗಳು ಮತ್ತು ಪೊಲೀಸ್ ಕಾನ್ಸ್ಟೇಬಲರ ಸಮವಸ್ತ್ರ ಒಂದೇಯಾಗಿದ್ದು, ಸಮಾಜ ನಮ್ಮನ್ನು ಒಂದೇ ತರಹ ನೋಡುತ್ತದೆ. ಸಮಾಜದಲ್ಲಿ ಎಲ್ಲರಿಗೂ ಕಾನೂನುಬದ್ಧವಾಗಿ ರಕ್ಷಣೆ ಕೊಡುವ ಹೊಣೆ ಪೊಲೀಸರದ್ದಾಗಿರುತ್ತದೆ. ಪೊಲೀಸರು ಸಂತೋಷದಿಂದ, ನೆಮ್ಮದಿಯಿಂದ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಇಲಾಖೆಗೆ ಒಳ್ಳೆಯ ಹೆಸರು ತರಬೇಕು. ವೃತ್ತಿಯ ಘನತೆ ಹೆಚ್ಚಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾ ವಿಧಿಬೋಧಿ ಸಿದರು. ಸ್ಮರಣೆ ಸಂಚಿಕೆ ಬಿಡುಗಡೆ ಮಾಡಿದರು. ತರಬೇತಿ ಶಾಲೆಯ ಪ್ರಾಂಶುಪಾಲರಾದ ಪೊಲೀಸ್ ಅ ಧೀಕ್ಷಕ ಆರ್.ಎ. ಪಾರಶೆಟ್ಟಿ ಸ್ವಾಗತಿಸಿ, ವರದಿ ವಾಚಿಸಿದರು. ಒಳಾಂಗಣ, ಹೊರಾಂಗಣ ವಿಭಾಗ ಫೈರಿಂಗ್ ಮತ್ತು ಸರ್ವೋತ್ತಮ ಸಾಧನೆ ಮಾಡಿದ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ರಾಜ್ಯದಲ್ಲಿಯೇ ಸುಂದರವಾಗಿ ಕ್ರೀಡಾಂಗಣ ನಿರ್ಮಿಸಿದ್ದಕ್ಕಾಗಿ ಮಹಾನಿರ್ದೇಶಕರು 5 ಸಾವಿರ ರೂ. ಬಹುಮಾನ ಘೋಷಿಸಿದರು. ಎಸ್ಪಿ ಸಂಗೀತಾ ಜಿ., ಡಿಸಿಪಿ ಬಿ.ಎಸ್. ನ್ಯಾಮಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ