ಬಾದಾಮಿ, ಇಳಕಲ್ನಲ್ಲಿ 24 ಲಕ್ಷ ವಶ
Team Udayavani, May 12, 2018, 4:57 PM IST
ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರ ಹಾಗೂ ಬಾದಾಮಿ ಪಟ್ಟಣದಲ್ಲಿ ಚುನಾವಣಾಧಿಕಾರಿಗಳು ಪ್ರತ್ಯೇಕ ದಾಳಿ ನಡೆಸಿದ್ದು 23.62 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಹಾಗೂ ಹುನಗುಂದ ಚುನಾವಣಾಧಿಕಾರಿಗಳು ಇಳಕಲ್ ನಗರದ ಸಂದೀಪ ಮಜಿ ಎಂಬುವವರ ಮನೆ ಮೇಲೆ ದಾಳಿ ನಡೆಸಿದ್ದು, ಅವರ ಮನೆಯಲ್ಲಿ ಉದ್ಯಮಿ ಕಮಲ್ಲಾಲ್ ವರ್ಮಾ ಎಂಬುವವರಿಗೆ ಸೇರಿದ್ದು ಎನ್ನಲಾದ 20 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಇಳಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾದಾಮಿಯಲ್ಲಿ 3.62 ಲಕ್ಷ ವಶ: ಬಾದಾಮಿ ನಗರ ಹಾಗೂ ಹೊಸೂರ ಗ್ರಾಮದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದು ಎನ್ನಲಾದ 3.62 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಎಸ್ಪಿ ಸಿ. ವಂಶಿಕೃಷ್ಣ ಅವರು ಬಾದಾಮಿ ಪಟ್ಟಣದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮೇಲೆ ದಾಳಿ ನಡೆಸಿ 1,62,830 ರೂ. ನಗದು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಬಾದಾಮಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿ ಸುಮಾರು 2.96 ಲಕ್ಷ ನಗದು ವಶಕ್ಕೆ ಪಡೆದಿದ್ದಾರೆ. ಈ ಎರಡೂ ಪ್ರಕರಣಗಳು ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
2.25 ಲಕ್ಷ ರೂ. ವಶ
ಬನಹಟ್ಟಿ: ಮತದಾರರಿಗೆ ಹಂಚಲು ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 2.25 ಲಕ್ಷ ರೂ. ನಗರದ ಬಸ್ ನಿಲ್ದಾಣದ ಬಳಿ ಗುರುವಾರ ರಾತ್ರಿ ವಶಪಡಿಸಿಕೊಳ್ಳಲಾಗಿದೆ. ತಡರಾತ್ರಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಸ್ಕೂಟಿಯೊಂದರಲ್ಲಿ 2.25 ಲಕ್ಷ ರೂ. ಮತದಾರರಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂಬ ಸಂಶಯದಿಂದ ವಶಕ್ಕೆ ಪಡೆದ ಪೊಲೀಸರು ಹಾಗೂ ಎಫ್ ಎಸ್ಟಿ ತಂಡದಿಂದ ಸೂಕ್ತ ದಾಖಲೆಯಿಲ್ಲದ ಕಾರಣ ಬೈಕ್ ಸವಾರ ಸುರೇಶ ಮೋಪಗಾರ(31) ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಠಾಣಾಧಿಕಾರಿ ಎಸ್.ಎಂ. ಅವಜಿ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?