ಸರಕಾರಿ ಶಾಲೆ ಕನಿಷ್ಠವೆಂಬ ಭ್ರಮೆ ಬೇಡ
Team Udayavani, May 25, 2018, 5:26 PM IST
ಹುಬ್ಬಳ್ಳಿ: ಖಾಸಗಿ ಶಾಲೆ ಉತ್ತಮ, ಸರಕಾರಿ ಶಾಲೆ ಕನಿಷ್ಠ ಎಂಬ ಭ್ರಮೆಯನ್ನು ಪಾಲಕರಿಂದ ಹೋಗಲಾಡಿಸಲು ಅಕ್ಷರ ಬಂಡಿ ಸಹಕಾರಿಯಾಗಲಿದೆ ಎಂದು ಡಿಡಿಪಿಐ ಎನ್.ಎಚ್. ನಾಗೂರ ಹೇಳಿದರು.
ಇಲ್ಲಿನ ಬಸವೇಶ್ವರ ನಗರದ ಸರಕಾರಿ ಶಾಲೆಯ ಸಭಾಂಗಣದಲ್ಲಿ ಯೋಜಿಸಿದ್ದ ಅಕ್ಷರ ಬಂಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳನ್ನು ಸರಕಾರಿ ಶಾಲೆಗೆ ಆಕರ್ಷಿಸುವುದು ಶಿಕ್ಷಕರಿಂದ ಹಿಡಿದು ಶಿಕ್ಷಣ ಇಲಾಖೆಯ ಪ್ರತಿಯೊಬ್ಬರ ಪ್ರಮುಖ ಕರ್ತವ್ಯವಾಗಿದೆ. ಶಾಲೆಗೆ ಬಂದ ಮಕ್ಕಳನ್ನು ಉಳಿಸಿಕೊಳ್ಳುವ ಪ್ರಯತ್ನ ನಮ್ಮದಾಗಬೇಕು. ಮಕ್ಕಳ ಮನಮುಟ್ಟುವಂತಹ ಗುಣಾತ್ಮಕ ಕಲಿಕೆ ನೀಡುವತ್ತ ಶ್ರಮವಹಿಸಬೇಕು ಎಂದು ಹೇಳಿದರು.
ಸರ್ವ ಶಿಕ್ಷಣ ಅಭಿಯಾನದ ಜಿಲ್ಲಾ ಸಮನ್ವಾಯಾಧಿಕಾರಿ ಎಸ್.ಎಂ. ಹುಡೇದ ಮಾತನಾಡಿ, ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಲ್ಲಿ ಹೊಸ ಚೈತನ್ಯ ಮೂಡುವಂತೆ ಆಚರಿಸಬೇಕು. ಶಾಲೆಗೆ ಬರುವ ಪ್ರತೀ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಆತ್ಮವಿಶ್ವಾಸ ಬೆಳೆಸಬೇಕು ಎಂದರು.
ಬಿಇಒ ಕೆ.ಎ. ಸನದಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಅಶೋಕ ಕುಂಬಾರ, ಸಿಆರ್ಪಿ ಡಿ.ಎಫ್. ಈರಗಾರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಡಾ| ಲಿಂಗರಾಜ ರಾಮಾಪುರ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು