ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ


Team Udayavani, Nov 24, 2018, 12:21 PM IST

vij-1.jpg

ನಾಲತವಾಡ: ಇಲ್ಲಿನ ಪಟ್ಟಣ ಪಂಚಾಯತ್‌ನಲ್ಲಿ ವಸತಿ ಯೋಜನೆ ಅಡಿ ಹಗರಣ ನಡೆದಿದ್ದು ಕೂಡಲೇ ಆಯ್ಕೆ ಪಟ್ಟಿ ರದ್ದುಪಡಿಸಿ ಹೊಸದಾಗಿ ಆಯ್ಕೆ ಪ್ರಕ್ರಿಯೆ ನಡೆಸಿ ಅರ್ಹರಿಗೆ ಮನೆ ಹಂಚಿಕೆ ನಡೆಸುವುದು ಸೇರಿದಂತೆ ಕೆಲ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಪಂ ಕಚೇರಿ ಎದುರು ಯುವಜನ ಸೇನೆ ಸಂಘಟನೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡು ದಿನ ಪೂರೈಸಿದೆ. ಶನಿವಾರದಿಂದ ಬೇಡಿಕೆ ಈಡೇರುವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಸಂಘಟನೆ ಪದಾಧಿಕಾರಿಗಳು, ಸದಸ್ಯರು ತೀರ್ಮಾನಿಸಿದ್ದಾರೆ.

2017-18ನೇ ಸಾಲಿನ ಶಾಸಕರ ವಾಜಪೇಯಿ ನಗರ ವಸತಿ ಯೋಜನೆಯ 300 ಆಸರೆ ಮನೆಗಳ ವಿತರಣೆಯನ್ನು ಕಾನೂನು ಬಾಹೀರವಾಗಿ ನಡೆಸಲಾಗಿದೆ. ಕೆಲ ಸದಸ್ಯರೇ ಹಣ ಪಡೆದು ತಮಗೆ ಬೇಕಾದವರಿಗೆ ಮನೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅದನ್ನು ಮರುಪರಿಶೀಲನೆ ಮಾಡಿ ಅರ್ಹರಿಗೆ ಮಾತ್ರ ಮನೆ ಒದಗಿಸಿಕೊಡಬೇಕು.
 
ಅಲ್ಲಿವರೆಗೂ ಈಗ ನಡೆಸಲಾಗುತ್ತಿರುವ ಜಿಪಿಎಸ್‌ ಕಾರ್ಯ ಸ್ಥಗಿತಗೊಳಿಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಅವರನ್ನು ಅಮಾನತು ಮಾಡಬೇಕು. ಅಕ್ರಮವಾಗಿ ಹಣ ಪಡೆದ ಸದಸ್ಯರ ಸದಸ್ಯತ್ವ ಅನರ್ಹಗೊಳಿಸಬೇಕು. ಮಹಿಳೆಯರಿಗೆ ಶೌಚಾಲಯ ನಿರ್ಮಿಸಬೇಕು. ಪ್ರತಿ ವಾರ್ಡುಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಬೇಕು. ಯಾವುದಾದರೂ ವೃತ್ತವೊಂದರಲ್ಲಿ ಶರಣ ವೀರೇಶ್ವರರ ಪುತ್ಥಳಿ ನಿರ್ಮಿಸಬೇಕು. ಬೀದಿ ದೀಪ ಅಳವಡಿಸಬೇಕು. ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಿಸಬೇಕು ಮುಂತಾದ ಬೇಡಿಕೆ ಇಟ್ಟು ಧರಣಿ ನಡೆಸಲಾಗುತ್ತಿದೆ. 

ಶಾಸಕರ ಬೆಂಬಲಿಗರ ಕೈವಾಡ ಆರೋಪ: ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘಟನೆ ಅಧ್ಯಕ್ಷ ಶಿವಾನಂದ ವಾಲಿ, ಶಾಸಕರ ಕೆಲ ಬೆಂಬಲಿಗರೆ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದು ಶಾಸಕರ ಹೆಸರಿಗೆ ಕಳಂಕ ತರುವಂಥದ್ದಾಗಿದೆ.

ಶಾಸಕರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ತಪ್ಪಿತಸ್ಥ ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮನೆ ವಿತರಿಸುವ ಕಮೀಟಿ ಅಧ್ಯಕ್ಷರು ಶಾಸಕರೇ ಆಗಿದ್ದು ಅರ್ಹರಿಗೆ ಮಾತ್ರ ಮನೆ ವಿತರಣೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮಾತುಕತೆ ವಿಫಲ: ಧರಣಿ ವಿಷಯ ತಿಳಿದು ಮುದ್ದೇಬಿಹಾಳ ಪೊಲೀಸ್‌ ಠಾಣೆ ಪಿಎಸೈ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿದರು. ಬೇಡಿಕೆಗಳ ಕುರಿತ ಮನವಿ ಸಲ್ಲಿಸಿದಲ್ಲಿ ಅದನ್ನು ಸಂಬಂಧಿಸಿದವರಿಗೆ ರವಾನಿಸಿ ಬೇಡಿಕೆ ಈಡೇರಿಕೆ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ. 

ಅಲ್ಲಿತನಕ ಧರಣಿ ಕೈಬಿಡುವಂತೆ ಮನವಿ ಮಾಡಿಕೊಂಡರು. ಇದನ್ನೊಪ್ಪದ ಧರಣಿ ನಿರತರು ವಿಜಯಪುರ ಜಿಲ್ಲಾಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳುವವರೆಗೆ ಧರಣಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಮುತ್ತು ಹೊಸಮಠ, ಸಂಗಮೇಶ ಕೆಂಭಾವಿ, ಮಲ್ಲಿಕಾರ್ಜುನ ಕೆಂಭಾವಿ, ಮಾಳಿಂಗರಾಯ ವನಹಳ್ಳಿ, ಅಮರೇಶ ಲೊಟಗೇರಿ, ರಮೇಶ ಗಂಗನಗೌಡರ, ವರುಣಗೌಡ ಗಂಗನಗೌಡರ, ಮಹಾಂತೇಶ ಹೆಸರೂರ, ಗಂಗು ಜೋಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.