ದೇಶದಲ್ಲಿ ಶಾಂತಿ ನೆಲೆಸಿ, ರೈತನ ಬದುಕು ಸುಭದ್ರಗೊಳ್ಳಲಿ


Team Udayavani, Jun 19, 2018, 5:04 PM IST

19-june-23.jpg

ಬನಹಟ್ಟಿ: ದೇಶದಲ್ಲಿ ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ
ಜೈನ ಮುನಿ ಕುಲರತ್ನ ಭೂಷಣ ಮಹಾರಾಜರು ಹೇಳಿದರು.

ಸಮೀಪದ ಹಳಿಂಗಳಿ ಭದ್ರಗಿರಿ ಬೆಟ್ಟದಲ್ಲಿ ಹಮ್ಮಿಕೊಂಡ ಶೃತಾವತಾರ ಶೃತಪಂಚಮಿ ಮಹಾಪರ್ವ ನಿಮಿತ್ತ ಹಮ್ಮಿಕೊಂಡ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದೇಶದಲ್ಲಿ ಶಾಂತಿ ನೆಲೆಸಲಿ, ಮಳೆ ಬೆಳೆಗಳು ಚೆನ್ನಾಗಿ ಆಗಿ ರೈತನ ಬಾಳು ಬೆಳಗಲಿ. ಅನ್ಯಾಯ, ಅತ್ಯಾಚಾರಗಳು ಕಡಿಮೆಯಾಗಲಿ ಎಂಬ ಸದುದ್ದೇಶದಿಂದ ಈ ಶಾಂತಿ ಸಮಾರಂಭವನ್ನು ಹಮ್ಮಿಕೊಂಡಿದ್ದು ನಮಗೆ ಸಂತಸ ತಂದಿದೆ ಎಂದರು.

ಮಳೆ ಮತ್ತು ಬದುಕಿಗೆ ಅತ್ಯಂತ ಹತ್ತಿರದ ಸಂಬಂಧ. ಮಳೆಯ ಒಳ್ಳೆಯ ದಿನಗಳಿಗಾಗಿ ಕಾಯುವ ತಾಳ್ಮೆ ಬೇಕು. ಮಳೆಯೊಂದಿಗೆ ಬರುವ ಸಿಡಿಲು, ಗುಡುಗು, ಸಿಡಿಲುಗಳಂತೆಯೇ ಬದುಕಿನಲ್ಲೂ ಬರಸಿಡಿಲುಗಳು ಹೊಡೆಯುತ್ತಲೇ ಇರುತ್ತವೆ. ಆದರೆ, ಅಲ್ಲೇ ಒಂದು ಕೋಲ್ಮೀಚು ಕಾಣಿಸುತ್ತದೆ ಎಂಬುದನ್ನು ನಾವು ಮೆರೆಯಬಾರದು ಎಂದರು. ಮನೆಗಿಂತ ಬಾಲಿಲು ಚಿಕ್ಕದು, ಬಾಗಿಲಿಗಿಂತ ಬೀಗ ಚಿಕ್ಕದು, ಬೀಗಕ್ಕಿಂತ ಕೀಲಿ ಚಿಕ್ಕದು, ಕೀಲಿ ಚಿಕ್ಕದಾದರೂ ಅದರ ಪಾತ್ರ ಹಿರಿದು. ವಿವೇಚನೆಯಿಂದ ಕೂಡಿದ ಸಣ್ಣ ಪರಿಹಾರವೂ ಉತ್ತಮವಾಗಿರುತ್ತದೆ ಎಂಬುದನ್ನು ಹಿರಿಯರು ಹೇಳಿದ ಮಾತನ್ನು ಯಾವತ್ತು ಮರೆಯಬಾರದು ಎಂದರು. 

ಭದ್ರಗಿರಿ ಬೆಟ್ಟದ ಭೂಗರ್ಭದಲ್ಲಿ ದೊರೆತ ರತ್ನಖಚಿತ ಜಿನಬಿಂಬಗಳ ಪ್ರದರ್ಶನ ಮೂರು ದಿನಗಳವರೆಗೆ ನಡೆಯಲಿದೆ ಎಂದರು. ಭದ್ರಗಿರಿ ಕ್ಷೇತ್ರದ ಮತ್ತು ಆಚಾರ್ಯ ಭದ್ರಬಾಹು ಮುನಿ ಮಹಾರಾಜರ ಕುರಿತು ಕುಲರತ್ನಭೂಷಣ ಮಹಾರಾಜರು ವಿವರಿಸಿದರು. ಇದಕ್ಕೂ ಪೂರ್ವದಲ್ಲಿ ಮಹಾರಾಷ್ಟ್ರದಿಂದ ಆಗಮಿಸಿ 1008 ಬೈಕ ರ್ಯಾಲಿಯ ಶ್ರಾವಕರನ್ನು ಬರಮಾಡಿಕೊಂಡು ಅಶೀರ್ವದಿಸಲಾಯಿತು. ಇದೇ ಸಂದರ್ಭದಲ್ಲಿ ದಿ. ಸಿದ್ದು ನ್ಯಾಮಗೌಡರಿಗೆ ಮೃತ ನಂತರ ‘ರೈತರ ಕಣ್ಮಣಿ’ ಪ್ರಶಸ್ತಿಯನ್ನು ಅವರ ಮಕ್ಕಳಾದ ಆನಂದ
ಮತ್ತು ಬಸವರಾಜ ಅವರಿಗೆ ನೀಡಿ ಗೌರವಿಸಲಾಯಿತು. ನ್ಯಾಮಗೌಡ ಕುಟುಂಬದ ಅನೇಕ ಸದಸ್ಯರು ಹಾಜರಿದ್ದರು. 

ಜೈನ ಸಮಾಜದೊಂದಿಗೆ ಹೃದಯ ಸ್ಪರ್ಶಿ ಸಂಬಂಧ ಇಟ್ಟುಕೊಂಡಿದ್ದ ದಿ.ಸಿದ್ದು ನ್ಯಾಮಗೌಡರಿಗೆ ಸಾವಿರಾರು ಜೈನ ಸಮುದಾಯದ ಜನರು ಒಂದು ನಿಮಿಷದ ಮೌನ ಆಚರಿಸಿ ಶಾಂತಿ ಕೋರಿದರು. ಜೈನ ಸಮಾಜದ ಹಿರಿಯರು ಮತ್ತು ಭಾರತ ದೇಶದ ಜೈನ ಸಮಾಜದ ಮುಖಂಡರಾದ ಸುರೇಶ ಜೈನ ಅವರಿಗೆ ಭದ್ರಗಿರಿ ಬೆಟ್ಟದ ವತಿಯಿಂದ ‘ಜೈನ
ರತ್ನ’ ಪ್ರಶಸ್ತಿ, ಇನ್ನೋರ್ವ ಹಿರಿಯರಾದ ರಾಜೇಂದ್ರ ಕೇರಕರ ಅವರಿಗೆ ಪರಿಸರವಾದಿ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗ್ರಾಮದ ಹಿರಿಯಾದ ಬಿ. ಎ. ದೇಸಾಯಿ, ದೇವಲ ದೇಸಾಯಿ, ಮಹಾವೀರ ದೇಸಾಯಿ, ಅರವಿಂದ ಪಾಟೀಲ, ಚಂದ್ರಕಾಂತ ಬೋಜದಾರ, ಸಂಜಯ ನಾಡಗೌಡ, ಪಿ.ಟಿ. ಪಾಟೀಲ ಸೇರಿದಂತೆ ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಸಾವಿರಾರು ಜೈನ ಸಮುದಾಯದ ಭಕ್ತರು ಆಗಮಿಸಿದ್ದರು. ಶೀತಲ ನಂದೆಪ್ಪನವರ ಹಾಗೂ ಸುಕುಮಾರ ಖೇಬೋಜಿ ನಿರೂಪಿಸಿದರು. ವೈ.ಜಿ. ಅಲಾಸ ಸ್ವಾಗತಿಸಿದರು. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.