ಮಾಡಿದರೆ ಯೋಗ ಓಡುವುದು ರೋಗ
Team Udayavani, Jun 22, 2018, 5:32 PM IST
ಕನಕಗಿರಿ: ಚೈತನ್ಯ ಲವಲವಿಕೆಯಿಂದ ಪ್ರತಿಯೊಬ್ಬ ಮನುಷ್ಯ ಬದುಕಲು ಜೀವನದಲ್ಲಿ ಯೋಗ ಅತ್ಯವಶ್ಯಕತೆ ಇದೆ.
ಯೋಗ ಮಾಡಿದರೆ ರೋಗವು ಓಡಿ ಹೋಗುವುದು ಎಂದು ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದಿ ಆರ್ಟ್ ಆಫ್ ಲಿವಿಂಗ್
ಹಾಗೂ ಸುವರ್ಣಗಿರಿ ಯೋಗ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದಲೂ ಋಷಿ ಮುನಿಗಳು ಯೋಗ ಅಭ್ಯಾಸವನ್ನು ಮಾಡುತ್ತಿದ್ದರು. ಕಳೆದ ನಾಲ್ಕು ವರ್ಷದಿಂದ
ಪ್ರಧಾನಿ ನರೇಂದ್ರ ಮೊದಿಯವರು ಇಡೀ ವಿಶ್ವವೇ ಯೋಗ ದಿನಾಚರಣೆಯನ್ನು ಮಾಡುವ ಮೂಲಕ ವಿಶ್ವಕ್ಕೆ ಭಾರತದ ಕೊಡೆಗೆಯನ್ನು ನೀಡಿದ್ದಾರೆ. ಪಟ್ಟಣದಲ್ಲಿ ಯೋಗ ಶಿಬಿರ ಕಟ್ಟಡಕ್ಕೆ ಶಾಸಕರ ಅನುದಾನದಲ್ಲಿ ಹಣ ನೀಡಲಾಗುವುದು, ಪ್ರತಿ ನಿತ್ಯ ಒಂದು ಗಂಟೆ ಕಾಲ ಯೋಗಕ್ಕೆ ಸಮಯವನ್ನು ಮೀಸಲಿಡುವುದರಿಂದ ಆರೋಗ್ಯದ ಕಡೆ ಗಮನ ಹರಿಸಿದಂತಾಗುತ್ತದೆ. ನಾನು ಪ್ರತಿ ನಿತ್ಯ ಯೋಗ ಮಾಡುವುದನ್ನು ರೂಢಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುವರ್ಣಗಿರಿ ಯೋಗ ಟ್ರಸ್ಟ ಅಧ್ಯಕ್ಷ ವಾಗೇಶ ಹಿರೇಮಠ, ಪ.ಪಂ ಅಧ್ಯಕ್ಷ ರವಿ ಭಜಂತ್ರಿ, ಎಪಿಎಂಸಿ ಸದಸ್ಯ ದೇವಪ್ಪ ತೋಳದ್, ಪಪಂ ಮುಖ್ಯಾಧಿಕಾರಿ ಶ್ರೀಶೈಲಗೌಡ, ವ್ಯಾಪಾರ ಸಮೀತಿ ಅಧ್ಯಕ್ಷ ಮಹಾಂತೇಶ ಸಜ್ಜನ್, ಯೋಗ ಗುರು ಶೇಖರಯ್ಯ ಸ್ವಾಮಿ, ಪ್ರಮುಖರಾದ ಪ್ರಕಾಶ ಹಾದಿಮನಿ, ಅನಂತಪ್ಪ ದಾಯಿಪುಲ್ಲೆ, ಶಿವಾನಂದ ಬೆಲ್ಲದ್, ಪರಸಪ್ಪ ಹೊರಪೆಟೆ, ಕೃಷ್ಣವೇಣಿ ಬೊಂದಾಡೆ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
UPSC ಪರೀಕ್ಷೆಯಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ
MUST WATCH
ಹೊಸ ಸೇರ್ಪಡೆ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ