ಡೆಂಘೀ ಹರಡದಂತೆ ಕ್ರಮ
Team Udayavani, Jun 23, 2018, 5:42 PM IST
ಜಮಖಂಡಿ: ತಾಲೂಕಿನಲ್ಲಿ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಸರ್ಕಾರಿ ಇಲಾಖೆಗಳ ಸಹಕಾರ-ಸಹಯೋಗ ಅತೀ ಅವಶ್ಯವಾಗಿದೆ. ನಗರಸಭೆ ಮತ್ತು ನೀರು ಪೂರೈಕೆ ಮಂಡಳಿ ಸಿಬ್ಬಂದಿ ಅಚ್ಚುಕಟ್ಟಾಗಿ ತಮ್ಮ-ತಮ್ಮ ಕೆಲಸ ನಿರ್ವಹಿಸಿದರೆ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಜಿ.ಎಸ್.ಗಲಗಲಿ ಹೇಳಿದರು.
ನಗರದ ಕುಡಚಿ ರಸ್ತೆಯಲ್ಲಿರುವ ಮಿನಿ ವಿಧಾನಸೌಧ ಕಚೇರಿ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳಗಳು ಉತ್ಪತ್ತಿಯಾಗುತ್ತಿದ್ದು, ಮನೆ ಮುಂದೆ ನೀರು ಸಂಗ್ರಹ ಮಾಡಿಕೊಳ್ಳಬಾರದು. ಈಗಾಗಲೇ ತಾಲೂಕಿನಲ್ಲಿ 31 ಚಿಕೂನ್ ಗುನ್ಯಾ ಪ್ರಕರಣಗಳ ಬಗ್ಗೆ ಸಂಶಯ ಪಡಲಾಗಿದ್ದು, ತಾಲೂಕಿನ ಹಿಪ್ಪರಗಿ, ಶಿರಗುಪ್ಪಿ, ರಬಕವಿ-ಬನಹಟ್ಟಿ, ತೇರದಾಳಗಳಲ್ಲಿ ಆಶಾ ಕಾರ್ಯಕರ್ತೆಯರು ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುತ್ತಿದ್ದಾರೆ. 74 ಡೆಂಘೀ ಬಗ್ಗೆ ಸಂಶಯ ಪಡೆಲಾಗಿದ್ದು, ಅದರಲ್ಲಿ 11 ಪ್ರಕರಣ ಗುರುತಿಸಲಾಗಿದ್ದು, ಅದರಲ್ಲಿ ಒಂದು ಮಲೇರಿಯಾ ರೋಗ ಕೇಸ್ ದಾಖಲಾಗಿದೆ ಎಂದರು.
ಡಾ|ಎಚ್.ಜಿ. ದಡ್ಡಿ ಮಾತನಾಡಿ, ತಾಲೂಕಿನಲ್ಲಿ ಉಣ್ಣೆ ಜ್ವರ ಪತ್ತೆಯಾಗಿದ್ದು, ಜಮಖಂಡಿ-ಬನಹಟ್ಟಿಗಳಲ್ಲಿ ವೈದ್ಯರ ಸಭೆ ಕರೆದು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಜಮಖಂಡಿ-ರಬಕವಿ-ಬನಹಟ್ಟಿ ನಗರಸಭೆಗಳಲ್ಲಿ ಚರಂಡಿ ಸ್ವಚ್ಛತೆ ಬಗ್ಗೆ ತಿಳಿವಳಿಕೆ ಮೂಡಿಸುವ ಶಿಬಿರ ನಡೆಸಬೇಕು. ಅಲ್ಲದೇ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಹಾಗೂ ಸ್ವತ್ಛ-ಶುದ್ಧ ನೀರು ಪೂರೈಕೆ ಮಾಡಬೇಕು. ಕಾಟಾಚಾರಕ್ಕೆ ಸಭೆ ನಡೆಸದೆ ಪ್ರತಿಯೊಬ್ಬರು ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಹೇಳಿದರು. ಕಂದಾಯ ಇಲಾಖೆ ಶಿರಸ್ತೇದಾರ್ ಎ.ಎಸ್. ಗೋಟ್ಯಾಳ, ಸಮಾಜ ಕಲ್ಯಾಣಾಧಿ ಕಾರಿ ಟಿ.ವಿ. ಮಂಟೂರ, ಎಸ್.ಎಸ್. ಕಡ್ಲಿಮಟ್ಟಿ, ಪ್ರಕಾಶ ಗೌಡರ, ಸಿಡಿಪಿಒ ಎಸ್.ಆರ್.ವಾಲೇಕರ, ತಾಪಂ ಅ ಧಿಕಾರಿ
ಬಿ.ಎ.ಬಿರಾದಾರ, ರಬಕವಿ-ಬನಹಟ್ಟಿ, ಜಮಖಂಡಿ ನಗರಸಭೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾ ಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ