ವಿಮೆ ಹಣ ನೀಡಲು ಸ್ಪಷ್ಟ ದಿನಾಂಕ ನಿಗದಿ ಮಾಡಿ: ಬಳ್ಳಾರಿ


Team Udayavani, Jun 24, 2018, 4:50 PM IST

24-june-25.jpg

ಬ್ಯಾಡಗಿ: ವಿಮಾ ಕಂಪನಿಗಳು ವಿಮೆ ಹಣ ತುಂಬಿಸಿಕೊಳ್ಳಲು ದಿನಾಂಕ ನಿಗದಿ ಪಡಿಸಿದಂತೆ ವಿಮೆ ಹಣವನ್ನು ಸಕಾಲದಲ್ಲಿ ರೈತರಿಗೆ ಬಿಡುಗಡೆ ಮಾಡುವ ಕುರಿತಂತೆ ಸ್ಪಷ್ಟ ದಿನಾಂಕ ನಿಗದಿ ಮಾಡುವವರೆಗೂ ಜಿಲ್ಲೆಯಾದ್ಯಂತ ಯಾವ ರೈತರೂ ವಿಮೆ ಹಣ ಭರಣ ಮಾಡುವುದಿಲ್ಲ ಎಂದು ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬ್ಯಾಂಕ್‌ ವ್ಯವಸ್ಥಾಪಕ ಹಾಗೂ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸತತ ಬರಗಾಲ ಹಾಗೂ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರು ಸಂಕಷ್ಟದಲ್ಲಿರುವಾಗ ಕೈಡಿಯುತ್ತೆ ಎಂದು ತುಂಬಿರುತ್ತಾರೆ. ಆದರೆ, ಕೃಷಿ ಅಧಿಕಾರಿಗಳ ಹಾಗೂ ವಿಮೆ ಕಂಪನಿಗಳ ಬೇಜವಾಬ್ದಾರಿತನದಿಂದಾಗಿ ಆನ್ನದಾತ ಕಷ್ಟಕ್ಕೆ ಸಿಲುಕಿದಂತಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಯಾರೂ ವಿಮೆ ಹಣ ತುಂಬದಿರಲು ನಿರ್ಧಸಿದ್ದಾಗಿ ತಿಳಿಸಿದರು.

ವಿಮೆ ಯಾಕ್ರೀ ತುಂಬಬೇಕು?: ಗಂಗಣ್ಣ ಎಲಿ ಮಾತನಾಡಿ, ಜಿಲ್ಲೆಯಾದ್ಯಂತ ರೈತರು ಬೆಳೆ ವಿಮೆ ಹಣಕ್ಕಾಗಿ ಅಂಗಲಾಚುವ ಸ್ಥಿತಿ ಎದುರಾಗಿದ್ದು, 15-16 ನೇ ಸಾಲಿನ ಸುಮಾರು 8 ಕೋಟಿಗೂ ಅಧಿಕ ಹಣ ಜಿಲ್ಲಾಡಳಿತದ ವೈಫಲ್ಯದಿಂದ ಹಂಚಿಕೆಯಾಗದೆ ಬ್ಯಾಂಕ್‌ನಲ್ಲಿ ಕೊಳೆಯುತ್ತಿದೆ. ಇದರ ನಡುವೆ ಮತ್ತೊಮ್ಮೆ ವಿಮೆ ಹಣ ತುಂಬುವ ಸಮಯ ಬಂದಿದ್ದು ಬಾಕಿ ವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡುವರೆಗೂ ವಿಮೆ ಹಣ ತುಂಬುವುದಿಲ್ಲ ಎಂದರು.

ಕೃಷಿ ಅಧಿಕಾರಿ ಅಮೃತೇಶ ಮಾತನಾಡಿ, ಡಬ್ಲಿಂಗ್‌ ಆಗಿರುವ ರೈತರ ಕುರಿತಂತೆ ಇಗಾಗಲೇ ವಿಮಾ ಕಂಪನಿಗಳ ಹತ್ತಿರ ಚರ್ಚಿಸಲಾಗಿದೆ. ವಿಮಾ ಕಂಪನಿಗಳು ರೈತರು ಹಾಗೂ ಅಧಿಕಾರಿಗಳ ಸಭೆಯನ್ನು ಜೂ.26 ರಂದು ಬೆಳಗ್ಗೆ 10:30 ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದೆ ಎಂದರು.

ಆಧಾರ್‌ ಇಲ್ಲದೇ ನೋಂದಣಿ ಇಲ್ಲ: ಸಭೆಯಲ್ಲಿದ್ದ ಯುನೈಟೆಡ್‌ ಇನ್ಸೂರೆನ್ಸ್‌ ಕಂಪನಿ ವ್ಯವಸ್ಥಾಪಕ ತಿಮ್ಮೇಶ ಮಾತನಾಡಿ, ರೈತರು ಕಡ್ಡಾಯವಾಗಿ ಆಧಾರ್‌ ಹೊಂದಿದ್ದಲ್ಲಿ ಮಾತ್ರ ವಿಮೆ ಹಣ ಭರಣ ಮಾಡಿಕೊಳ್ಳಲು ಸಾಧ್ಯ, ಇಲ್ಲದಾದಲ್ಲಿ ಯಾವುದೇ ಕಾರಣಕ್ಕೂ ವಿಮೆ ಹಣ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ವಿಮೆ ಹಣ ತುಂಬುವ ಸಂದರ್ಭದಲ್ಲಿ ಆಧಾರ್‌, ಪಾಸ್‌ ಬುಕ್‌ ಹಾಗೂ ಪಹಣಿ ಕಡ್ಡಾಯವಾಗಿ ತರಬೇಕು ಎಂದರು.

ಪ್ರತ್ಯೇಕ ಕೌಂಟರ್‌ ಮಾಡಿ:
ತಹಶೀಲ್ದಾರ್‌ ಎಸ್‌.ಎ.ಪ್ರಸಾದ ಮಾತನಾಡಿ, ವಿಮೆ ಹಣ ತುಂಬುವ ವೇಳೆಯಲ್ಲಿ ರೈತರು ಕಳೆದ ವರ್ಷ ಪರದಾಡಿದ್ದು ಹಾಗೂ ನಿಗದಿತ ದಿನಾಂಕದಲ್ಲಿ ವಿಮೆ ಹಣ ತುಂಬಲಾಗದೇ ಪ್ರತಿಭಟನೆ ಕೂಡಾ ಮಾಡಿದ ಉದಾಹರಣೆಗಳಿವೆ. ಹೀಗಾಗಿ ಬ್ಯಾಂಕ್‌ಗಳಲ್ಲಿ ವಿಮೆ ಹಣ ಭರಣಕ್ಕಾಗಿ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ ಮಾಡಿಕೊಂಡು ರೈತರಿಗೆ ಅನೂಕೂಲ ಮಾಡಿಕೊಡುವಂತೆ ಬ್ಯಾಂಕ್‌ ವ್ಯವಸ್ಥಾಪಕರಿಗೆ ಸೂಚಿಸಿದರು. ರೈತ ಮುಖಂಡ ಗಂಗಣ್ಣ ಎಲಿ, ಕಿರಣಕುಮಾರ ಗಡಿಗೋಳ ಸೇರಿದಂತೆ ಎಲ್ಲ ಬ್ಯಾಂಕ್‌ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.