ಶೈಕ್ಷಣಿಕ ಪ್ರಗತಿಗೆ ಪ್ರತಿಯೊಬ್ಬರು ಶ್ರಮಿಸಲಿ: ಹಿಟ್ನಾಳ
Team Udayavani, Jun 24, 2018, 5:04 PM IST
ಕೊಪ್ಪಳ: ಮಕ್ಕಳ ಭವಿಷ್ಯ ಶೈಕ್ಷಣಿಕ ರಂಗದಲ್ಲಿ ಅಡಗಿದೆ. ಶೈಕ್ಷಣಿಕ ಪ್ರಗತಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ತಾಲೂಕಿನ ಕವಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಹದ್ದೂರಬಂಡಿ ಸಿ.ಆರ್.ಪಿ. ಹನುಮಂತಪ್ಪ ಕುರಿ ಅವರು ಶೈಕ್ಷಣಿಕ ಜಾಗೃತಿ ಗೀತೆಗಳ ಸಿ.ಡಿ. ಬಿಡುಗಡೆ ಹಾಗೂ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ದಿನಮಾನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆಯು ಹೆಚ್ಚಾಗಿದೆ. ಅಂತಹ ಸ್ಪರ್ಧೆಗೆ ತಕ್ಕಂತೆ ನಾವು ಮಕ್ಕಳನ್ನು ತಯಾರು ಮಾಡಬೇಕು. ಮಗುವಿಗೆ ಕೇವಲ ಪಠ್ಯದಲ್ಲಿ ಇರುವ ವಿಷಯಗಳನ್ನು ಮಾತ್ರ ಬೋಧನೆ ಮಾಡದೆ ಅವರ ಸರ್ವಾಂಗೀಣ ಪ್ರಗತಿಗೆ ಬೇಕಾದಂಥ ಉಪಯುಕ್ತ ಮಾಹಿತಿ ತಿಳಿಸಿ ಕೊಡಬೇಕಿದೆ ಎಂದರು.
ಶಿಕ್ಷಕರು ಸೇರಿದಂತೆ ಪ್ರತಿಯೊಬ್ಬರು ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶ್ರಮಿಸಬೇಕು. ಅಂದಾಗ ಮಾತ್ರ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ
ಸಾಧಿಸಲು ಸಾಧ್ಯವಾಗುತ್ತದೆ. 10ನೇ ತರಗತಿಯ ಫಲಿತಾಂಶದಲ್ಲಿ ಇನ್ನೂ ಹೆಚ್ಚಿನ ಸ್ಥಾನವನ್ನು ಪಡೆಯುವ ರೀತಿಯಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಸಿ.ಆರ್.ಪಿ ಹನುಮಂತಪ್ಪ ಕುರಿ ಅವರು ತಮ್ಮದೇಯಾದ ರೀತಿಯಲ್ಲಿ ಸಾಹಿತ್ಯ ರಚನೆ ಮಾಡಿ ಸಿ.ಅಶ್ವಥ ಅವರ ಶೈಲಿಯಲ್ಲಿ ಶಾಲೆ ಬಿಟ್ಟ ಮಕ್ಕಳ ಬಗ್ಗೆ ಹಾಗೂ ದಾಖಲಾತಿ ಜಾಗೃತಿಯ ಗೀತೆಗಳನ್ನು ಹಾಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೆಚ್ಚಿನ ಕೆಲಸದ ಒತ್ತಡವಿದೆ. ಅದರ ಮಧ್ಯೆಯೂ ಸಿ.ಆರ್.ಪಿ.ಹನುಮಂತಪ್ಪ ಕುರಿ ಅವರು ಶೈಕ್ಷಣಿಕ ಹಾಗೂ ಮತದಾನದಂತಹ ಅನೇಕ ಗೀತೆಗಳನ್ನು ರಚಿಸಿ, ಹಾಡುವ ಮೂಲಕ ಸಮಾಜದ ಜಾಗೃತಿಗೆ ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಎಸ್.ಡಿ.ಎಂ.ಸಿ ಅಧ್ಯಕ್ಷ ಹೊನಕೇರಪ್ಪ ಮುಕ್ಕಣ್ಣನವರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಸದಸ್ಯರಾದ ಶರಣಪ್ಪಗೌಡ ಪಾಟೀಲ, ಯಂಕ್ಕಣ್ಣ , ದೇವಪ್ಪ ಹಳ್ಳಿ, ಅಳವಂಡಿ ವಲಯ ಶಿಕ್ಷಣ ಸಂಯೋಜಕ ಭರಮಪ್ಪ ಕಟ್ಟಿಮನಿ, ಸಿ.ಆರ್ .ಪಿ. ಬಸವರಾಜ ಜೀರ್, ಚಂದ್ರ ಗಿರಿಯಪ್ಪ, ಹನುಮಂತಪ್ಪ ಕುರಿ, ಮುಖ್ಯೋಪಾಧ್ಯಾಯ ಸಂಗನಗೌಡ ಸೇರಿದಂತೆ ಇತರರು
ಉಪಸ್ಥಿತರಿದ್ದರು. ಮಲ್ಲಿಕಾರ್ಜುನಗೌಡ ನಿರೂಪಿಸಿದರು. ಮಲ್ಲಪ್ಪ ಸ್ವಾಗತಿಸಿದರು. ಅಶೋಕ ಚೌಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್