ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಬರ 


Team Udayavani, Jun 25, 2018, 5:24 PM IST

25-june-21.jpg

ಚಿತ್ರದುರ್ಗ: 14 ಜಿಲ್ಲೆಗಳ ವ್ಯಾಪ್ತಿ ಹಾಗೂ ಚಿತ್ರದುರ್ಗದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಸಮ್ಮಿಶ್ರ ಸರ್ಕಾರದ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ದೊರೆಯಬಹುದು ಎಂಬ ಆಸೆ ಗರಿಗೆದರಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ ಹಾಗೂ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರಗಳು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿದ್ದು ಈ
ಬಾರಿ ಅನುದಾನದ ಮಹಾಪೂರವೇ ಹರಿದು ಬರಬಹುದು ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. 

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಬಿಳಿಯಾನೆ ಇದ್ದಂತೆ ಎಂಬ ಭಾವನೆ ಇದ್ದಿದ್ದರಿಂದ ಹಿಂದಿನ ಸರ್ಕಾರಗಳು ಮಂಡಳಿಗೆ ಅತ್ಯಲ್ಪ ಅನುದಾನ ನಿಗದಿಪಡಿಸುತ್ತಿದ್ದವು. ಚಿತ್ರದುರ್ಗ, ದಾವಣಗೆರೆ, ರಾಮನಗರ, ಬೆಳಗಾವಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ ಸೇರಿದಂತೆ ಒಟ್ಟು 14 ಜಿಲ್ಲೆಗಳ 57 ತಾಲೂಕುಗಳು ಮಂಡಳಿ ವ್ಯಾಪ್ತಿಯಲ್ಲಿವೆ. ಮಂಡಳಿಗೆ 70 ವಿಧಾನಸಭಾ ಕ್ಷೇತ್ರಗಳ ಶಾಸಕರು, 14 ಸಂಸದರು, ಜಿಪಂ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ವಿಧಾನ ಪರಿಷತ್‌ನ 24 ಸದಸ್ಯರು, 9 ಜನ ಸರ್ಕಾರದ ನಾಮನಿರ್ದೇಶಿತ ಸದಸ್ಯರನ್ನೊಳಗೊಂಡು ಒಟ್ಟೂ 147 ಸದಸ್ಯರಿದ್ದಾರೆ. ಇಷ್ಟೊಂದು ಬೃಹತ್‌ ವ್ಯಾಪ್ತಿ ಹೊಂದಿದ್ದರೂ ಪ್ರತಿ ವರ್ಷವೂ ಈ ಮಂಡಳಿಗೆ ಅನುದಾನ ಮಾತ್ರ ‘ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ ಎಂಬಂತಾಗಿದೆ. ಸಿಗುವ ಅಲ್ಪಸ್ವಲ್ಪ ಅನುದಾನವನ್ನೇ ಶಾಸಕರು ಹಾಗೂ ಸಂಸದರಿಗೆ ಹಂಚಿಕೆ ಮಾಡಬೇಕಿದೆ.

ಪ್ರತಿ ವರ್ಷ ಅನುದಾನ ಸಾಲದು ಎಂಬ ಕೂಗು ಕೇಳಿ ಬರುತ್ತದೆಯಾದರೂ ಆ ಕೂಗು ಕೇಳ್ಳೋರಿಲ್ಲದೆ ಅಲ್ಲಿಯೇ ಕ್ಷೀಣವಾಗುತ್ತದೆ. ಅನುದಾನ ಹೆಚ್ಚಳದ ಬಗ್ಗೆ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಲು ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಈ ಬಾರಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾದಿಯಾಗಿ ಉಪಮುಖ್ಯಮಂತ್ರಿ, ಪ್ರಭಾವಿ ಸಚಿವರು ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಸದಸ್ಯರಾಗಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿನಿಧಿ ಸುವ ರಾಮನಗರ, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ ಕ್ಷೇತ್ರ ಕೊರಟಗೆರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಬಾದಾಮಿ ಪ್ರಭಾವಿ ಸಚಿವರಾಗಿರುವ ಡಿ.ಕೆ. ಶಿವಕುಮಾರ್‌, ರಮೇಶ್‌ ಜಾರಕಿಹೊಳಿ, ಎಸ್‌. ಆರ್‌. ಶ್ರೀನಿವಾಸ್‌, ಶಿವಾನಂದ ಪಾಟೀಲ್‌, ವೆಂಕಟರಮಣಪ್ಪ, ವಿಧಾನಸಭಾಧ್ಯಕ್ಷ ರಮೇಶ್‌ಕುಮಾರ್‌ ಸೇರಿದಂತೆ ಸಾಕಷ್ಟು ಸಚಿವರು ಪ್ರತಿನಿಧಿ ಸುವ ಕ್ಷೇತ್ರಗಳು ಮಂಡಳಿ ವ್ಯಾಪ್ತಿಯಲ್ಲಿವೆ. ಹಾಗಾಗಿ ಈ ಬಾರಿ ಬಜೆಟ್‌ನಲ್ಲಿ ಅನುದಾನ ಹೆಚ್ಚಳವಾಗಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ. 

ಹಿಂದೆ ಎಷ್ಟು ಸಿಕ್ಕಿತ್ತು?
2012-13ನೇ ಸಾಲಿನಲ್ಲಿ 17 ಕೋಟಿ ರೂ. ಮಂಜೂರಾತಿ ಪೈಕಿ 12.75 ಕೋಟಿ, 2013-14ನೇ ಸಾಲಿನಲ್ಲಿ 17.30 ಕೋಟಿ ರೂ. ಪೈಕಿ 12.98 ಕೋಟಿ ಬಿಡುಗಡೆಯಾಗಿದೆ. 2014-15ನೇ ಸಾಲಿನಲ್ಲಿ 20 ಕೋಟಿ, 2015-16ನೇ ಸಾಲಿನ ಬಜೆಟ್‌ನಲ್ಲಿ 35 ಕೋಟಿ, 2016-17ನೇ ಸಾಲಿನಲ್ಲಿ 45 ಕೋಟಿ ಹಾಗೂ 2017-18ನೇ ಸಾಲಿನ ಬಜೆಟ್‌ನಲ್ಲಿ 27 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿತ್ತು. ಈ ಅನುದಾನವನ್ನು ಚೆಕ್‌ಡ್ಯಾಂ, ಪಿಕ್‌ಅಪ್‌ಗ್ಳು, ರಸ್ತೆಗಳು, ಸಮುದಾಯ ಭವನಗಳ ನಿರ್ಮಾಣ, ಜಲಸಂಪನ್ಮೂಲ ಅಭಿವೃದ್ಧಿ, ಭೂಸಾರ ಸಂರಕ್ಷಣೆ, ಅರಣ್ಯಾಭಿವೃದ್ದಿ, ತೋಟಗಾರಿಕೆ, ಪಶುಸಂಗೋಪನೆ ಹಾಗೂ ಕೃಷಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ.

ಇಷ್ಟು ಕಡಿಮೆ ಮೊತ್ತದ ಅನುದಾನವನ್ನು 14 ಜಿಲ್ಲೆಗಳ 57 ತಾಲೂಕುಗಳ 70 ವಿಧಾನಸಭೆ ಕ್ಷೇತ್ರದ ಶಾಸಕರಿಗೆ ವಿಂಗಡಿಸಿದರೆ ಕೇವಲ 10-20 ಲಕ್ಷ ರೂ. ನೀಡಬೇಕಾಗುತ್ತದೆ. ಈ ಅನುದಾನದಲ್ಲಿ ಒಂದೆರಡು ಚೆಕ್‌ ಡ್ಯಾಂ ನಿರ್ಮಾಣ ಮಾಡಬಹುದು. ಆದ್ದರಿಂದ ಬೇರೆ ನಿಗಮ ಮಂಡಳಿಗಳಿಗಿಂತ ಅತಿ ಹೆಚ್ಚು ವ್ಯಾಪ್ತಿ ಹೊಂದಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ಹೆಚ್ಚಿನ ಅನುದಾನ ನೀಡಲು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮನಸ್ಸು ಮಾಡಬೇಕಿದೆ. 

ಹರಿಯಬ್ಬೆ ಹೆಂಜಾರಪ್ಪ 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.