ಕಾಲಕ್ಕೆ ತಕ್ಕಂತೆ ಬದಲಾಗಬೇಕು ಸುಡಗಾಡು ಸಿದ್ಧರು 


Team Udayavani, Jul 9, 2018, 5:34 PM IST

9-july-24.jpg

ಕುಷ್ಟಗಿ: ಸುಡಗಾಡು ಸಿದ್ಧರು ಸಂಪ್ರದಾಯ ಕಲೆಯ ಸಂಸ್ಕಾರಕ್ಕೆ ಅಂಟಿಕೊಳ್ಳದೇ ಕಾಲ ಬದಲಾದಂತೆ ಶಿಕ್ಷಣ ಹೊಂದುವ ಮೂಲಕ ಪರಿವರ್ತಿತಗೊಳ್ಳಬೇಕಿದೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ನಾಪುರ ಹೇಳಿದರು. ಇಲ್ಲಿನ ಶ್ರೀ ರೇಣುಕಾಚಾರ್ಯ ಮಂಗಲಭವನದಲ್ಲಿ ಕುಷ್ಟಗಿ ತಾಲೂಕು ಸುಡುಗಾಡು ಸಿದ್ಧರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಸುಡುಗಾಡು ಸಿದ್ಧರ ಕಲೆಯೂ ಇರಲಿ ಕಲೆಯ ಜೊತೆಗೆ ಶಿಕ್ಷಣವೂ ಇರಲಿ. ಶಿಕ್ಷಣ ಪಡೆದು ಅಭಿವೃದ್ಧಿ ಕಾಣಬೇಕಿದೆ ಎಂದರು.

ಸುಡಗಾಡು ಸಿದ್ಧರು ಪ್ರದರ್ಶಿಸುವ ಜಾದೂ, ಮನರಂಜನೆ, ಹೇಳುವ ಭವಿಷ್ಯದಿಂದ ಸದ್ಯದ ಜೀವನ ನಿರ್ವಹಣೆ ಸಾಧ್ಯವಿಲ್ಲ. ಜಗತ್ತು ಬದಲಾಗುತ್ತಿದ್ದು, ಬದಲಾವಣೆ ತಕ್ಕಂತೆ ಬದುಕಬೇಕಿದೆ. ಈ ಸಮಾಜಕ್ಕೆ ಜಮೀನು ಇಲ್ಲ, ಅಲೆಮಾರಿ ಜೀವನದ ಹಿನ್ನೆಲೆಯಲ್ಲಿ ಸರ್ಕಾರ ವಸತಿ, ವಸತಿ ಶಾಲೆ ಕಲ್ಪಿಸಿದೆ. ತಾವರಗೇರಾ ಭಾಗದಲ್ಲಿ ಎರಡು ಎಕರೆ ಜಮೀನು ನೀಡಿದ್ದು, ಆದರೆ ಈಗಿನ ಪರಿಸ್ಥಿತಿಯಲ್ಲಿ ಜಮೀನು ಹೆಸರಿಗೆ ಮಾತ್ರ, ಪರ್ಯಾಯ ಉದ್ಯೋಗಕ್ಕೆ ಒತ್ತು ನೀಡಬೇಕಿದೆ. ಸರ್ಕಾರ 34 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದೆ. ಈ ಸಾಲದಿಂದ ರೈತರ ಬದುಕು ಹಸನಾಗದು. ನಿತ್ಯದ ಬದುಕಿನಲ್ಲಿ ರೈತರ ಬವಣೆ ಬದಲಾಗದಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಸಮಾರಂಭ ಉದ್ಘಾಟಿಸಿ, ಸುಡುಗಾಡು ಎನ್ನುವುದು ಭಯ ಹುಟ್ಟಿಸುವ ಪದ. ಸಮಾಜದ ಕಂದಾಚಾರಗಳನ್ನು ಮೀರಿ ಸಿದ್ಧರಾಗಿ ಬದುಕು ಸಾಗಿಸುತ್ತಿದ್ದಾರೆ. ಸುಡಗಾಡು ಸಿದ್ಧರ ಜಾದೂ ಈಗಿನ ಕಾಲಘಟ್ಟದಲ್ಲಿ ನಡೆಯದು, ಸರ್ಕಾರದ ಸೌಲಭ್ಯ ಬಳಸಿಕೊಂಡು ಶಿಕ್ಷಣ ಹೊಂದಿ ಸಮಾಜದ ಮುಖ್ಯವಾಹಿಗೆ ಬರಬೇಕಿದೆ. ಅಲೆಮಾರಿಯಾಗಿರುವ ಈ ಸಮಾಜ ಒಂದೆಡೆ ನೆಲೆ ನಿಂತರೆ ಶಿಕ್ಷಣ, ಇತರೇ ಸೌಲಭ್ಯ ಹೊಂದಲು ಸಾಧ್ಯ ಎಂದರು. ಸುಡುಗಾಡು ಸಿದ್ಧರ ಸಮಾಜದ ಅಧ್ಯಕ್ಷ ಶಿವಪ್ಪ ಒಂಟೆತ್ತಿನವರ ಮಾತನಾಡಿ, ಸುಡುಗಾಡು ಸಿದ್ಧರ ಸಮಾಜದಲ್ಲಿ ಶಿಕ್ಷಣ ಕೊರತೆಯಿಂದ ಬಾಲ್ಯ ವಿವಾಹ ಪ್ರಕರಣಗಳಾಗಿದ್ದು, ಸಮಾಜದ ಒಳಿತಿಗಾಗಿ ಅನಿಷ್ಟ ಪದ್ಧತಿ ನಿಲ್ಲಿಸಲೇ ಬೇಕಿದೆ. ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು. ಸಮಾಜದ ವ್ಯಕ್ತಿಗೆ ತೊಂದರೆಯಾದಾಗ ಒಂದಾಗಿ ಸಮಾಜಕ್ಕೆ ಶಕ್ತಿ ಕೊಡಬೇಕೆಂದರು.

ಸರ್ಕಾರಿ ಆಸ್ಪತ್ರೆಯ ಹಿರಿಯ ತಜ್ಞವೈದ್ಯ ಡಾ| ಮಹೇಂದ್ರ ಕಿಂದರಿ ಮಾತನಾಡಿ, ಸಮಾಜ ಉಳಿಯಲು ಸಮಾಜದ ಜಾದು, ಮನರಂಜನೆ ಕಲೆ ಉಳಿಸಲೇ ಬೇಕಿದೆ. ಈ ಕಲೆ ಪ್ರೋತ್ಸಾಹಿಸಲು ಅಕಾಡೆಮಿ ಇಲ್ಲ. ಕಲೆಯನ್ನು ಕಲಿಯಲು ಯಾರು ಮುಂದೆ ಬರುವುದಿಲ್ಲ. ಹೀಗಾದಲ್ಲಿ ಈ ಕಲೆ ಉಳಿಸಲು ಹೇಗೆ ಸಾಧ್ಯ? ವೈದ್ಯಕೀಯ ಸೇವೆಯಿಂದ ಸ್ವಯಂ ನಿವೃತ್ತರಾಗಿ ಸುಡುಗಾಡು ಸಿದ್ಧರ ಸಮಾಜ ಸೇವೆಗೆ ಮೀಸಲಿಡುವುದಾಗಿ ಹೇಳಿದರು.

ಮಾಜಿ ಶಾಸಕ ಕೆ. ಶರಣಪ್ಪ, ವಸಂತ ಮೇಲಿನಮನಿ, ಚಂದ್ರಶೇಖರ ನಾಲತವಾಡ, ಲಕ್ಷ್ಮಣ  ಮುಖೀಯಾಜಿ, ಮೋಹನಲಾಲ್‌ ಜೈನ್‌, ಬಸನಗೌಡ ಮಾಲಿಪಾಟೀಲ, ಮರಿಯಪ್ಪ ಗಂಟಿ, ಬಸವರಾಜಪ್ಪ ವಿಭೂತಿ, ಸುಂಕಪ್ಪ ಶಿರಸಾಲಿ, ವೆಂಕಟರಾಮ್‌ ಶಿರಸಾಲಿ, ದುರಗಪ್ಪ ಪರಿಯವರ್‌, ಕೃಷ್ಣಪ್ಪ ವಿಭೂತಿ, ರಾಮಣ್ಣ ಪರಿಯವರ್‌ ಮತ್ತಿತರಿದ್ದರು. ಜಂಬಯ್ಯ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.