ಬಸ್‌ ಬರುವುದನ್ನೇ ಮರೆತಿದ್ದಾರೆ ಮರಕುಂಬಿ ಮಂದಿ


Team Udayavani, Jul 16, 2018, 5:30 PM IST

16-july-28.jpg

ಕನಕಗಿರಿ: ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ದೇಶಕ್ಕೆ ಸ್ವತಂತ್ರ್ಯ ಬಂದು 60 ವರ್ಷಗಳಾದರೂ ಈ ಗ್ರಾಮಕ್ಕೆ ಬಸ್‌ ಆಗಮಿಸಿಲ್ಲ. ಬಸ್‌ ಹತ್ತಬೇಕು ಎಂದರೆ ಸುಮಾರು 6ರಿಂದ 7 ಕಿ.ಮೀ. ಟಂಟಂನಲ್ಲಿಸಾಗಬೇಕು ಇಲ್ಲವೇ ನಡೆದುಕೊಂಡು ಹೋಗುವುದು ಅನಿವಾರ್ಯ. ಇನ್ನು ಗ್ರಾಮದ ವಿದ್ಯಾರ್ಥಿಗಳು ಪ್ರತಿದಿನ 6ರಿಂದ 7 ಕಿ.ಮೀ. ನಡೆದುಕೊಂಡು ಹೋಗಿ ತರಗತಿಗೆ ಹಾಜರಾಗಬೇಕಿದೆ. ಇದು ಸಮೀಪದ ಮರಕುಂಬಿ ಗ್ರಾಮದ ದುಸ್ಥಿತಿ.

ಹೌದು, ಮರಕಂಬಿ ಗ್ರಾಮದಲ್ಲಿ ಇದೂವರೆಗೂ ಬಸ್‌ ಸಂಚರಿಸಿದ ಉದಾಹರಣೆಯಿಲ್ಲ. ಹೆದ್ದಾರಿಯಿಂದ ಏಳು ಕಿ.ಮೀ. ದೂರದಲ್ಲಿರುವ ಈ ಗ್ರಾಮದ ರಸ್ತೆ ದಶಕಗಳಾದರೂ ದುರಸ್ತಿ ಆಗಿಲ್ಲ. ಹೀಗಾಗಿ ಮರಕುಂಬಿ ಗ್ರಾಮಕ್ಕೆ ಸಾರಿಗೆ ಸಂಸ್ಥೆಯವರು ಬಸ್‌ ವ್ಯವಸ್ಥೆ ಕಲ್ಪಿಸಿಲ್ಲ. ಹೀಗಾಗಿ ಮರಕುಂಬಿ ಗ್ರಾಮಸ್ಥರು ಬಸ್‌ ಬೇರೆ ಊರುಗಳಿಗೆ ತೆರಲು ಕೇಸರಹಟ್ಟಿ ವರೆಗೂ ಖಾಸಗಿ ವಾಹನ, ಟಂಟಂ ಇಲ್ಲವೇ ನಡೆದುಕೊಂಡೇ ಹೋಗುತ್ತಾರೆ. 

ವಿದ್ಯಾರ್ಥಿಗಳ ಪರಿಸ್ಥಿತಿಯಂತೂ ಹೇಳ ತೀರದು. ಗ್ರಾಮದ ಪ್ರೌಢಶಾಲೆ ಮತ್ತು ಕಾಲೇಜಿನ 45 ವಿದ್ಯಾರ್ಥಿಗಳು ಪಕ್ಕದ ಕೇಸರಹಟ್ಟಿ ಗ್ರಾಮದ ಪ್ರೌಢಶಾಲೆ ಮತ್ತು ಕಾಲೇಜಿಗೆ ದಿನವೂ ನಡೆದುಕೊಂಡು ಹೋಗುತ್ತಾರೆ. ಮಳೆಗಾಲ ಶುರುವಾಗಿದ್ದು, ತಮ್ಮ ಮಕ್ಕಳು ಶಾಲೆಯಿಂದ ಮರಳಿ ಗ್ರಾಮಕ್ಕೆ ವಾಪಾಸಾಗುವವರೆಗೂ ಪಾಲಕರು ಭೀತಿಯಲ್ಲಿಯೇ ಕಾಲ ಕಳೆಯುವಂತಾಗಿದೆ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಈ ಹಿಂದೆ ಶೈಕ್ಷಣಿಕ ವರ್ಷದಲ್ಲಿ ಸೈಕಲ್‌ ನೀಡಲಾಗಿದೆ. ಆದರೆ ಸೈಕಲ್‌ಗ‌ಳು ವಿವಿಧ ಕಾರಣಗಳಿಂದ ದುರಸ್ತಿಗೆ ಬಂದು ಮೂಲೆಗೆ ಸೇರಿವೆ. ಪ್ರತಿದಿನ ಹೋಗಿ-ಬರಲು ಟಂಟಂಗೆ 20 ರೂ. ವ್ಯಯಿಸುವುದು ಅಸಾಧ್ಯ. ಆದ್ದರಿಂದ ನಡೆದುಕೊಂಡು ಹೋಗಬೇಕಿದೆ.

ಸಮನ್ವಯ ಕೊರತೆ: ಜನಪ್ರತಿನಿಧಿ ಗಳು ಮತ್ತು ಅಧಿಕಾರಿಗಳ ಸಮನ್ವಯ ಕೊರತೆಯಿಂದ ಕೇಸರಹಟ್ಟಿ ಗ್ರಾಮದಿಂದ ಮರುಕುಂಬಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿ ಕಾಣದೇ ಅನಾಥವಾಗಿದೆ. ರಸ್ತೆ ಸರಿ ಇಲ್ಲದೇ ಇರುವುದರಿಂದ ಗ್ರಾಮಕ್ಕೆ ಬಸ್‌ ಸಂಚಾರವನ್ನು ಕಲ್ಪಿಸಲು ಸಾರಿಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.

ಸಾರಿಗೆ ಸೌಕರ್ಯದ ಕೊರತೆಯಿಂದಾಗಿ ಈ ಗ್ರಾಮದ ವಿದ್ಯಾರ್ಥಿಗಳು ದಿನವೂ ಶಾಲಾ, ಕಾಲೇಜಿಗೆ ತಲುಪಲು ಹರಸಾಹಸ ಪಡಬೇಕಾಗಿದೆ. ಶಾಲಾ ಮತ್ತು ಕಾಲೇಜಿನಿಂದ ವಾಪಾಸ್‌ ಬರುವಾಗ ಮಳೆ ಬಂದರೆ ರಕ್ಷಣೆಗಾಗಿ ಪರಿತಪ್ಪಿಸಬೇಕಾಗಿದೆ. ದಿನವೂ ನಡೆದುಕೊಂಡೆ ಶಾಲೆಗೆ ಹೋಗಬೇಕಿರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಬೇಸರಿಸಿಕೊಳ್ಳುತ್ತಾರೆ.

ರಸ್ತೆ ದುರಸ್ತಿಗೆ ಒತ್ತಾಯ: ಕೇಸರಹಟ್ಟಿ ಗ್ರಾಮದಿಂದ ಮರುಕುಂಬಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಅಗಲೀಕರಣಗೊಳಿಸಿ, ಡಾಬಂರೀಕರಣ ಮಾಡಬೇಕೆಂದು ಗ್ರಾಮಸ್ಥರು ಹಲವಾರು ಸಂಬಂಧಪಟ್ಟ ಅ ಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ವಾಹನ ಸಂಚಾರಕ್ಕೆ ಮತ್ತು ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗಲು ತುಂಬಾ ತೊಂದರೆಯಾಗುತ್ತಿದೆ. ಕೊಡಲೇ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ಥಿಗೊಳಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.

ಕೇಸರಹಟ್ಟಿ ಗ್ರಾಮದಿಂದ ಮರಕುಂಬಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾತಂರಿಸಿಲ್ಲ. ಇದರಿಂದ ರಸ್ತೆ ನಿರ್ಮಣಕ್ಕೆ ತೊಂದರೆಯಾಗಿದೆ. ಜಿಪಂನಲ್ಲಿ ರಸ್ತೆ ನಿರ್ಮಾಣಕ್ಕೆ ಅನುದಾನವೂ ಇಲ್ಲ. ಗ್ರಾಮಸ್ಥರ ಹಿತದೃಷ್ಠಿಯಿಂದ ಈ ರಸ್ತೆಯ ಬಗ್ಗೆ ಒಮ್ಮೆ ಶಾಸಕರೊಂದಿಗೆ ಮಾತನಾಡುತ್ತೇನೆ.
 ಅಮರೇಶ ಗೋನಾಳ, ಜಿಪಂ ಸದಸ್ಯ.

ಸುಮಾರು ವರ್ಷಗಳಿಂದ ರಸ್ತೆಯನ್ನು ದುರಸ್ತಿಗೊಳಿಸಿಲ್ಲ. ಇದರಿಂದ ವಾಹನ ಸಂಚಾರಕ್ಕೆ ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗಲು ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿ ಕಾರಿಗಳು ಮತ್ತು ಜನಪತ್ರಿನಿಧಿ ಗಳು ಇದರ ಬಗ್ಗೆ ಗಮನ ಹರಿಸಬೇಕು.
 ಖದರಸಾಬ್‌ ಹುಸೇನಸಾಬ್‌,
ಗ್ರಾಮಸ್ಥರು.

ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ನೇಹಾ ಹತ್ಯೆ ತನಿಖೆನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾಐಗೆ ವಹಿಸಿ: ಜೆ.ಪಿ.ನಡ್ಡಾ

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.