ಸಾಂಕ್ರಾಮಿಕ ರೋಗ ಹತೋಟಿಗೆ ಮುಂಜಾಗ್ರತೆ ವಹಿಸಿ


Team Udayavani, Jul 21, 2018, 5:40 PM IST

21-july-22.jpg

ಹಾನಗಲ್ಲ: ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮುಂಜಾಗ್ರತಾ ಕ್ರಮವನ್ನು ಕಾಯ್ದುಕೊಳ್ಳುವ ಜೊತೆಗೆ ಮಾಧ್ಯಮಗಳ ಮುಖಾಂತರ ತಿಳಿಸುವುದರಿಂದ ಜನರಿಗೆ ಅರಿವು ಮೂಡಿಸಿದಂತಾಗುತ್ತದೆ ಎಂದು ಶಾಸಕ ಸಿ.ಎಮ್‌.ಉದಾಸಿ ಹೇಳಿದರು.

ಶುಕ್ರವಾರ ಹಾನಗಲ್ಲ ಪಟ್ಟಣದ ಕುಡಿಯುವ ನೀರಿನ ಜಲಮೂಲವಾದ ಆನಿಕೇರೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಗಪ್ಪಿ ಮೀನು ಹಾಗೂ ಗಂಬುಸಿಯಾ ಮೀನಿನ ಮರಿಗಳನ್ನು ಕೆರೆಗೆ ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲೂಕಿನಲ್ಲಿ ಈಗಾಗಲೆ ಚಿಕನ್‌ಗುನ್ಯಾ, ಡೆಂಘೀ, ಮಲೇರಿಯಾದಂತ ರೋಗಗಳು ಉಲ್ಬಣಿಸಿದ್ದು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಇಲಾಖೆ ಜನರ ಆರೋಗ್ಯ ಕಡೆಗೆ ಗಮನಹರಿಸಿ ಕಾಲಕ್ಕೆ ತಕ್ಕಂತೆ ಆರೋಗ್ಯ ಜಾಗೃತಿ ಹಾಗೂ ಔಷದೋಪಚಾರಕ್ಕೆ ಮುಂದಾಗಬೇಕು. ಸೊಳ್ಳೆಗಳ ನಿಯಂತ್ರಣ, ನೀರಿನ ಸ್ವಚ್ಛತೆ ಬಗ್ಗೆ ಇಲಾಖಾ ಅಧಿಕಾರಿಗಳು ನಿಯಂತ್ರಣಕ್ಕೆ ಪೂರಕವಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾ ಕೀಟ ಶಾಸ್ತ್ರ ತಜ್ಞೆ ಇಂದ್ರಾ ಪಾಟೀಲ ಮಾತನಾಡಿ, ಗಪ್ಪಿ ಮೀನು ಮತ್ತು ಗಂಬುಸಿಯಾ ಮೀನಿನ ಮರಿಗಳನ್ನು ಕೆರೆಗಳಿಗೆ ಬಿಡುವುದರಿಂದ ದಡದಲ್ಲಿರುವ ಸೊಳ್ಳೆಗಳನ್ನು ತಿಂದು ರೋಗ ಹರಡುವುದನ್ನು ನಿಯಂತ್ರಣ ಮಾಡುತ್ತವೆ. ಈಗಾಗಲೆ ತಾಲೂಕಿನ ವಿವಿಧ ಕೆರೆಗಳಿಗೆ ಇಂತಹ ಮೀನಿನ ಮರಿಗಳನ್ನು ಬಿಡಲಾಗಿದ್ದು, ಮೀನುಗಳ ಜೀವಿತಾವಧಿ 3 ರಿಂದ 5 ವರ್ಷ. ದಿನಕ್ಕೆ 300 ರಿಂದ 400 ಲಾರ್ವಾಗಳನ್ನು ತಿಂದು ಬದುಕುತ್ತವೆ. ಹೀಗಾಗಿ ಡೆಂಘೀನಂತಹ ಸಾಂಕ್ರಾಮಿಕ ರೋಗ ತಡೆಗೆ ಈ ಮೀನುಗಳು ಸಹಕಾರಿ ಎಂದು ತಿಳಿಸಿದರು.

ತಾಲೂಕು ಆರೋಗ್ಯ ಮೇಲ್ವಿಚಾರಕ ನಿಂಗಪ್ಪ ಎನ್‌.ಎಚ್‌ ಮಾತನಾಡಿ, ತಾಲೂಕಿನಲ್ಲಿ 12ಜನರಿಗೆ ಚಿಕನ್‌ಗುನ್ಯಾ ತಗುಲಿರುವ ವರದಿಯಾಗಿದೆ. 36 ಜನರನ್ನು ಶಂಕೆಯ ಮೇಲೆ ಪರೀಕ್ಷೆ ನಡೆಸಲಾಗಿದೆ. 6 ಜನರಲ್ಲಿ ಡೆಂಘೀ ಪತ್ತೆಯಾಗಿದ್ದು, 10 ಜನರಿಗೆ ಇರುವ ಸಂಶಯವಿದೆ. ಇನ್ನು ಮಲೇರಿಯಾ 9 ಜನರಿಗೆ ತಗುಲಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಮಲೇರಿಯಾ ಹಾಗೂ ಚಿಕೂನ್‌ಗುನ್ಯಾ ನಿಯಂತ್ರಣಕ್ಕೆ ಮುಂಜಾಗ್ರತ ಕ್ರಮಕ್ಕೆ ಶಾ ಕಾರ್ಯಕರ್ತರಿಂದ ಮನೆ ಮನೆಗೆ ಭೇಟಿ ನೀಡಿ ಜಾರ್ಗತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಚನ್ನಬಸಪ್ಪ ಹೆಡಿಯಾಲ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕಸ್ತೂರವ್ವ ಬೊಮ್ಮನಹಳ್ಳಿ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸಿ.ಎಸ್‌.ನೇಗಳೂರ. ಡಾ| ರವೀಂದ್ರ ಗೌಡ ಪಾಟೀಲ, ಹಾದಿಮನಿ, ಕಲ್ಯಾಣ ಕುಮಾರ ಶೆಟ್ಟರ, ಸಂತೋಷ ಪಾಂಡೆ, ಸುಭಾಸ್‌ ಚೊಗಚಿಕೊಪ್ಪ, ರಾಜು ಅಂಬಿಗೇರ. ಪರಶುರಾಮ ನಿಂಗೋಜಿ ಇತರರಿದ್ದರು. 

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.