ಸುದೀರ್ಘ‌ ಹೋರಾಟದಲ್ಲಿ  ರೈತರಿಗೆ ಸಹಿಸಲಾಗದ ನೋವು


Team Udayavani, Jul 30, 2018, 5:13 PM IST

30-july-20.jpg

ನರಗುಂದ: ಕುಡಿಯುವ ನೀರಿಗಾಗಿ ಮಹದಾಯಿ ಯೋಜನೆಗೆ ಒತ್ತಾಯಿಸಿ ಸುದೀರ್ಘ‌ ಹೋರಾಟದುದ್ದಕ್ಕೂ ರೈತರು ಸಹಿಸಲಾಗದ ನೋವು, ಹತಾಶೆ ಎದುರಿಸುವಂತಾಗಿದೆ. ಇಷ್ಟಾದರೂ ಈ ಯೋಜನೆ ಬಗ್ಗೆ ಯಾರಿಗೂ ಕಾಳಜಿಯಿಲ್ಲ. ಇದೊಂದು ರೈತರ ತಪಸ್ಸಿನ ಹೋರಾಟವಾಗಿದೆ ಎಂದು ಗಂಗಾವತಿ ತಾಲೂಕು ಕಂಪ್ಲಿ ಕರವೇ ಅಧ್ಯಕ್ಷ ಎಂ. ಇಸ್ಮಾಯಿಲ್‌ ಬೇಗ್‌ ವಿಷಾಧಿಸಿದರು.

ಹುತಾತ್ಮ ರೈತ ದಿ| ಈರಪ್ಪ ಕಡ್ಲಿಕೊಪ್ಪರ ವೀರಗಲ್ಲು ಬಳಿ ರವಿವಾರ ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ 1110ನೇ ದಿನ ನಿರಂತರ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಎಷ್ಟು ವರ್ಷಗಳ ಕಾಲ ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕು ಎಂಬ ರೈತರ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದು ಹೇಳಿದರು. ಈ ಹೋರಾಟದುದ್ದಕ್ಕೂ ಆಳುವ ಜನಪ್ರತಿನಿ ಧಿಗಳು, ರಾಜಕಾರಣಿಗಳು, ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸದೇ ಇರುವ ನೋವು ರೈತ ಕುಲವನ್ನು ಬಾ ಧಿಸುತ್ತಿದೆ. ರೈತರ ನೋವು, ನಲಿವಿನಲ್ಲಿ ಭಾಗಿಯಾಗಬೇಕಾದ ಆಳುವ ನಾಯಕರ ಇಚ್ಛಾಸಕ್ತಿ ಕೊರತೆ ಇಡೀ ಅನ್ನದಾತರ ಬದುಕನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಮಾತನಾಡಿ, ನೀರಿಗಾಗಿ ನಾಲ್ಕನೇ ವರ್ಷದಲ್ಲಿ ಹೋರಾಟ ಮಾಡಿದರೂ ಆಳುವ ನಾಯಕರ ಅಸಡ್ಡೆ ಧೋರಣೆಯಿಂದ ಹೋರಾಟ ಹೋರಾಟವಾಗಿಯೇ ಉಳಿದಿದೆ. ದೇಶದ ಬೆನ್ನೆಲುಬು ರೈತ ಎಂದು ಹೇಳುವ ಸರ್ಕಾರಗಳೇ ರೈತರ ಬೆನ್ನಿಗೆ ನಿಲ್ಲದಿದ್ದರೆ ನಾವು ಯಾರನ್ನು ಕೇಳಬೇಕು ಎಂದು ಪ್ರಶ್ನಿಸಿದರು.

ಕರವೇ ಘಟಕದ ಖಲೀಲ್‌, ದಾಮೋದರ ತುಳಜಮ್ಮನವರ, ಸಮನ್ವಯ ಸಮಿತಿ ಉಪಾಧ್ಯಕ್ಷ ರಮೇಶ ನಾಯ್ಕರ, ಕೋಶಾಧ್ಯಕ್ಷ ಫಕೀರಪ್ಪ ಜೋಗಣ್ಣವರ, ಪರಶುರಾಮ ಜಂಬಗಿ, ಹನಮಂತ ಕೋರಿ, ವಿರುಪಾಕ್ಷಪ್ಪ ಪಾರಣ್ಣವರ, ವಾಸು ಚವ್ಹಾಣ, ಯಲ್ಲಪ್ಪ ಗುಡದರಿ, ಈರಣ್ಣ ಗಡಗಿ, ಅರ್ಜುನ ಮಾನೆ, ಎಚ್‌.ಸಿ. ಹಿರೇಹೊಳಿ, ಜಯಪಾಲ ಮುತ್ತಿನ, ಹನಮಪ್ಪ ಪಡೇಸೂರ, ಹನಮಂತ ಸರನಾಯ್ಕರ, ನಾಗರತ್ನ ಸವಳಭಾವಿ, ಅನಸಮ್ಮ ಶಿಂಧೆ, ಬಸಮ್ಮ ಐನಾಪುರ, ಚನ್ನವ್ವ ಕರ್ಜಗಿ, ದೇವಕ್ಕ ತಾಳಿ, ಜನ್ನತಬಿ ಮುಲ್ಲಾನವರ, ಮಾಬೂಬಿ ಕೆರೂರ, ವೆಂಕಪ್ಪ ಹುಜರತ್ತಿ, ವೀರಣ್ಣ ಸೊಪ್ಪಿನ, ಶ್ರೀಶೈಲ ಮೇಟಿ, ವೆಂಕಟೇಶ ಸಾಬಳೆ ಇದ್ದರು.

ಟಾಪ್ ನ್ಯೂಸ್

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.