ಚಿನ್ನಿ ನಿರಾಣಿ ಎಂದು ಕರೆಯುತ್ತಿದ್ದರು
Team Udayavani, Aug 17, 2018, 4:58 PM IST
ಮುಧೋಳ: ನನ್ನನ್ನು ‘ಚಿನ್ನಿ ನಿರಾಣಿ'(ಚಿನ್ನಿ ಹಿಂದಿಯಲ್ಲಿ ಸಕ್ಕರೆ) ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪ್ರೀತಿಯಿಂದ ಕರೆಯುತ್ತಿದ್ದರು. ಅವರು ಎಲ್ಲರನ್ನು ಅವರವರ ಹೆಸರಿನಿಂದ ಕರೆಯುತ್ತಿದ್ದರು. ಅದು ವಾಜಪೇಯಿ ಅವರ ಅಪರೂಪದ ನಾಯಕತ್ವದ ಗುಣ. ನಾನು ಶಾಸಕನಾಗಿ, ಸಚಿವನಾಗಿ ವಾಜಪೇಯಿ ಅವರನ್ನು ಹಲವು ಬಾರಿ ಭೇಟಿಯಾಗಿ ಅವರೊಂದಿಗೆ ಚರ್ಚಿಸುವ ಅವಕಾಶ ದೊರೆತಿದ್ದು, ನನ್ನ ಬದುಕಿನ ಭಾಗ್ಯವೆಂದು ಭಾವಿಸಿದ್ದೇನೆ ಎಂದು ಶಾಸಕ ಮುರುಗೇಶ ನಿರಾಣಿ ವಾಜಪೇಯಿ ಅವರ ವ್ಯಕ್ತಿತ್ವ ಸ್ಮರಿಸಿ ಕಂಬನಿ ಮಿಡಿದಿದ್ದಾರೆ.
ಭಾರತದಲ್ಲಿ ಹರಿದ ದೊಡ್ಡ ನದಿಗಳ ಜೋಡನೆ, ವೈಜ್ಞಾನಿಕ ಕೃಷಿ, ತಂತ್ರಜ್ಞಾನದ ಅಭಿವೃದ್ಧಿ ಮುಂತಾದ ಮಹತ್ವದ ಚಿಂತನೆಗಳನ್ನು ಅವರು ದೇಶಕ್ಕೆ ಕೊಟ್ಟಿದ್ದಾರೆ. ಪ್ರಧಾನಿಯಾಗಿ ಅವರು ಜಗತ್ತಿನ ಉಳಿದ ರಾಷ್ಟ್ರಗಳೊಂದಿಗೆ ಅವರು ಒಳ್ಳೆಯ ಸಂಬಂಧ ಬೆಳೆಸಿದರು. ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿ ಭಾರತದ ಹೆಮ್ಮೆಯ ಪುತ್ರ. ನಮ್ಮ ದೇಶವನ್ನು ಸಶಕ್ತವಾಗಿ ಕಟ್ಟುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಗಾಂಧಿಧೀಜಿ ಹಾಗೂ ನೆಹರು ಅವರಂತೆ ವಾಜಪೇಯಿ ಅವರ ಹೆಸರು ಭಾರತದ ಚರಿತ್ರೆಯಲ್ಲಿ ಅಮರವಾಗಿ ಉಳಿಯುತ್ತದೆ ಎಂದು ನಿರಾಣಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ