ಬಿ ಫಾರಂ ಇಲ್ಲದಿದ್ದರೂ ನಾಮಪತ್ರ ಸಲ್ಲಿಕೆ


Team Udayavani, Aug 17, 2018, 5:09 PM IST

17-agust-24.jpg

ಲಕ್ಷ್ಮೇಶ್ವರ: ಪಟ್ಟಣದ ಪುರಸಭೆಗೆ ಆ.29ರಂದು ನಡೆಯಲಿರುವ ಚುನಾವಣೆಗೆ ಆ.16ರ ವರೆಗೆ ಒಟ್ಟು 55 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿಗಳಾದ ಆರ್‌.ಎಸ್‌. ಬುರಡಿ ಮತ್ತು ಎಸ್‌.ಎನ್‌.ಹಳ್ಳಿಗುಡಿ ತಿಳಿಸಿದ್ದಾರೆ. ಆ.17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೂ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದಿಂದಲೂ ಬಿ ಫಾರ್ಮ್ ನೀಡದೇ ಇದ್ದರೂ ಗುರುವಾರ 46 ನಾಮಪತ್ರಗಳಲ್ಲಿ 18-ಬಿಜೆಪಿ, 12-ಕಾಂಗ್ರೆಸ್‌ ಮತ್ತು 18 ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.ಜಿಟಿಜಿಟಿ ಮಳೆ ನಡುವೆಯೂ ಅಭ್ಯರ್ಥಿಗಳು ಅಪಾರ ಬೆಂಬಲಿಗರಿಂದ ಪುರಸಭೆಗೆ ಆಗಮಿಸಿದ್ದರಿಂದ ಜನಸ್ತೋಮದಿಂದ ಪುರಸಭೆ ತುಂಬಿತ್ತು. ಟ್ರಾಫಿಕ್‌ ಸಮಸ್ಯೆ, ಗದ್ದಲ ನಿಯಂತ್ರಣಕ್ಕಾಗಿ ಪೊಲೀಸರು ಹರಸಾಹಸ ಪಟ್ಟರು.

ತುರುಸುಗೊಂಡ ನಾಮಪತ್ರ ಸಲ್ಲಿಕೆ
ನರೇಗಲ್ಲ: ಸ್ಥಳೀಯ ಚುನಾವಣೆಗೆ ಗುರುವಾರ 35 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿ 5 ದಿನಗಳು ಕಳೆದಿದ್ದರೂ ಬುಧವಾರ ಕೇವಲ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು. ಆದರೆ, ಗುರುವಾರ 35 ನಾಮಪತ್ರ ಸಲ್ಲಿಕೆಯಾಗುವ ಮೂಲಕ ಚುಣಾವಣಾ ಕಣ ರಂಗೇರುತ್ತಿದೆ.

ಬೆಳಗ್ಗೆ 11 ಗಂಟೆಗೆ ಪ್ರಾರಂಭವಾದ ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್‌ ಹಾಗೂ ಬಿಜೆಪಿಯ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ತುರುಸಿನಿಂದ ನಾಮಪತ್ರ ಸಲ್ಲಿಕೆಯಲ್ಲಿ ತೊಡಗಿದ್ದರು. ಶುಕ್ರವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಹೆಚ್ಚಿನ ಸಂಖ್ಯೆಯ ನಾಮಪತ್ರ ಸಲ್ಲಿಕೆಯಾಗಲಿವೆ ಎಂದು ಚುನಾವಣಾಧಿಕಾರಿ ಡಿ.ಐ. ಅಸುಂಡಿ ಮತ್ತು ಎಸ್‌.ಆರ್‌. ಹೂಗಾರ ತಿಳಿಸಿದ್ದಾರೆ.

ವರಿಷ್ಠರಿಗೆ ಕಗ್ಗಂಟಾದ ಅಭ್ಯರ್ಥಿ ಆಯ್ಕೆ
ಗಜೇಂದ್ರಗಡ: ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆಯ ಹಂತ ತಲುಪಿದೆ. ಆದರೆ ಪಟ್ಟಣದ ಕೆಲ ವಾರ್ಡ್‌ಗಳ ಅಭ್ಯರ್ಥಿಗಳ ಆಯ್ಕೆ ಪಕ್ಷಗಳ ವರಿಷ್ಠರಿಗೆ ಕಗ್ಗಂಟಾಗಿದೆ. ಆದರೆ ಕೆಲ ವಾರ್ಡ್‌ಗಳ ಬಿಜೆಪಿ, ಕಾಂಗ್ರೆಸ್‌ ಮತ್ತು ಸಿಪಿಐಎಂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಹೊರತು ಇನ್ನು ಕೆಲ ವಾರ್ಡ್‌ಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೊಂದಲದ ಗೂಡಾಗಿದೆ. ಗುರುವಾರ ಬಿಜೆಪಿಯಿಂದ 8, ಕಾಂಗ್ರೆಸ್‌ 4, ಸಿಪಿಐಎಂ 5, ಪಕ್ಷೇತರ 1 ಸೇರಿ ಒಟ್ಟು 17 ಜನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌, ಬಿಜೆಪಿ ಮತ್ತು ಸಿಪಿಐಎಂ ಪಕ್ಷದ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ್ದು, ಚುನಾವಣಾ ಕಣ ರಂಗೇರುವಂತೆ ಮಾಡಿತು.

ಪಪಂ ಚುನಾವಣೆ: 20 ನಾಮಪತ್ರ ಸಲ್ಲಿಕೆ
ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯತಿಗೆ ಆ.29ರಂದು ಚುನಾವಣೆ ನಿಗದಿಯಾಗಿದ್ದು, ಗುರುವಾರ ಒಟ್ಟು 20 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್‌ ಪಕ್ಷದಿಂದ 18 ಹಾಗೂ ಪಕ್ಷೇತರರಾಗಿ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಒಟ್ಟು 19 ವಾರ್ಡ್‌ಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆಯಾಗುತ್ತಿದ್ದು, ಆ.17 ಕೊನೆಯ ದಿನವಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್‌ ಅಭ್ಯರ್ಥಿಗಳು ವಾದ್ಯಮೇಳಗಳ ಮೆರವಣಿಗೆ ಮೂಲಕ ಶಾಸಕ ಎಚ್‌.ಕೆ. ಪಾಟೀಲ ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಎಲ್ಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿಗಳಾದ ಕೆ.ವಿ. ಪಾಟೀಲ, ಎಚ್‌.ಎಂ. ಖಾನ ಹಾಗೂ ಇತರೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಒಟ್ಟಿನಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯ ಭರದಿಂದ ಸಾಗಿದೆ.

ನಾಮಪತ್ರ ಸಲ್ಲಿಕೆ
ರೋಣ: ಪಟ್ಟಣದ ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಜೋರಾಗಿದ್ದು, ಗುರುವಾರ ವಿವಿಧ ವಾರ್ಡ್‌ಗೆ ಕೆಲವರು ಉಮೇದುವಾರಿಕೆ ಸಲ್ಲಿಸಿದರು. ಇಲ್ಲಿಯವರೆಗೆ 32 ಜನ ಅಭ್ಯರ್ಥಿಗಳು 1ರಿಂದ 11ನೇ ವಾರ್ಡ್‌ಗೆ ಚುನಾವಣಾಧಿಕಾರಿ ಎನ್‌.ನಂಜುಡಯ್ಯ ಮತ್ತು 12ರಿಂದ 23ನೇ ವಾರ್ಡ್‌ ಗೆ ಚುನಾವಣಾಧಿ ಕಾರಿ ಡಾ| ಶಿವರಾಜ ಕುಲಕರ್ಣಿ ಅವರಿಗೆ ನಾಮಪತ್ರ ಸಲ್ಲಿಸಿದರು. ಶಿರಹಟ್ಟಿ ಪಪಂ ಚುನಾವಣೆಗೆ ಒಟ್ಟು 17 ನಾಮಪತ್ರ ಸಲ್ಲಿಕೆಯಾಗಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.