ತುಲಾಭಾರ ಮಾಡಿ ಸಂಭ್ರಮಿಸಿದ್ದ  ಜನತೆ


Team Udayavani, Aug 17, 2018, 5:21 PM IST

17-agust-25.jpg

ಗುಳೇದಗುಡ್ಡ: ಆ ಸುಂದರ ಕ್ಷಣ ಕಳೆದು ಇಂದಿಗೆ 36 ವರ್ಷ ಕಳೆದಿವೆ. ಆದರೂ ಆ ಕ್ಷಣಗಳು ಪಟ್ಟಣದ ಅದೆಷ್ಟೋ ಜನರ ಮನದಲ್ಲಿ ಇಂದಿಗೂ ಹಾಗೆಯೇ ಉಳಿದಿದೆ. ಆದರೆ ಆ ಸಮಾರಂಭದ ಕೇಂದ್ರಬಿಂದುವಾಗಿದ್ದ ಮಹಾನ್‌ ಚೇತನ್‌ ನಮ್ಮಿಂದ ಇಂದು ದೂರವಾಗಿರುವುದು ವಿಷಾದದ ಸಂಗತಿ. ಅದು ಬೇರಾರು ಅಲ್ಲ ಭಾರತ ರತ್ನ, ರಾಜನೀತಿಜ್ಞ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರು. ಆ ಮಹಾನ್‌ ಚೇತನ್‌ ಗುಳೇದಗುಡ್ಡಕ್ಕೆ ಒಂದಲ್ಲ ಎರಡು ಬಾರಿ ಬಂದು ಪಟ್ಟಣದ ಜನರ ಆತಿಥ್ಯ ಸ್ವೀಕರಿಸಿದ್ದರು.

1982ರಲ್ಲಿ ತುಲಾಭಾರ: 1982ರಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಅಟಲ್‌ ಬಿಹಾರಿ ವಾಜಪೇಯಿಯವರಿಗೆ ಗುಳೇದಗುಡ್ಡ ಪಟ್ಟಣದ ಜನತೆ, ಭಾರತೀಯ ಜನತಾ ಪಾರ್ಟಿ ಮುಖಂಡರು ತುಲಾಭಾರ ಮಾಡಿದ್ದರು. ಆ ಸುಂದರ ಘಟನೆಯನ್ನು ನೆನೆದು ಪಟ್ಟಣದ ಬಿಜೆಪಿ ಪಕ್ಷದವರಷ್ಟೇ ಅಲ್ಲದೇ ಇಡೀ ಪಟ್ಟಣವೇ ಸ್ಮರಿಸಿಕೊಳ್ಳುತ್ತಿದೆ. ಸದ್ಯ ಅಟಲ್‌ಜಿ ನಮ್ಮೊಂದಿಗಿಲ್ಲ ಎಂಬುದನ್ನು ನೆನೆಸಿಕೊಂಡು ದುಃಖಿತರಾಗುತ್ತಿದ್ದಾರೆ.

1982ರಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪಟ್ಟಣದ ಭಂಡಾರಿ ಕಾಲೇಜಿನ ಆವರಣದಲ್ಲಿ ತುಲಾಭಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, 84ಕೆಜಿ ತೂಕವಿದ್ದ ಅಟಲ್‌ಜಿಯವರಿಗೆ ನಾಣ್ಯಗಳಿಂದ ತುಲಾಭಾರ ಮಾಡಿ, 51ಸಾವಿರಗಳ ದೇಣಿಗೆಯನ್ನು ನೀಡಿದ್ದರು. ನಂತರ ತುಂಬಿದ ಸಭೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಅಟಲ್‌ಜಿ ಮಾತನಾಡಿದ್ದರು. ಅಂದಿನ ಕಾರ್ಯಕ್ರಮದಲ್ಲಿ ಆಗಿನ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಟಿ.ಎಂ. ಹುಂಡೇಕಾರ, ನಾರಾಯಣಸಾ ಭಾಂಡಗೆ ಇತರರು ಇದ್ದರು.

1982ರಲ್ಲಿ ಘನಶ್ಯಾಮದಾಸ ರಾಠಿ, ಮಲ್ಲಿಕಾರ್ಜುನ ಬನ್ನಿ, ರಂಗಪ್ಪ ಶೇಬಿನಕಟ್ಟಿ, ಕೆ.ಎಚ್‌. ಮರಳಿ,ರಾಮಬಿಲಾಸ ಧೂತ, ಮಧುಸೂಧನ ರಾಂದಡ, ಡೀಕಣ್ಣ ಕಂಠಿ, ವಂಸತಸಾ ಸಿಂಗ್ರಿ, ಕಮಲಾಕರ ಪವಾರ, ಡಾ.ಯು.ಎಂ.ಉಮರ್ಜಿ, ಮನೋಹರ ಶೆಟ್ಟರ ಸೇರಿದಂತೆ ಇನ್ನೂ ಅನೇಕರು ತುಲಾಭಾರ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ರಾಠಿ ಮನೆಯಲ್ಲಿ ಭೋಜನ: ಪಟ್ಟಣದ ಖಣಗಳ ವ್ಯಾಪಾರಸ್ಥರಾದ ಆರ್‌ಎಸ್‌ ಎಸ್‌ ಮುಖಂಡ ಘನಶ್ಯಾಮದಾಸ್‌ ರಾಠಿ ಅವರ ಮನೆಯಲ್ಲಿ ತುಲಾಭಾರ ಕಾರ್ಯಕ್ರಮ ಮುಗಿದ ನಂತರ ಭೋಜನದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಅಟಲ್‌ ಬಿಹಾರಿ ವಾಜಪೇಯಿಯವರು ಭೋಜನ ಸೇವಿಸಿ, ಕಾರ್ಯಕರ್ತರೊಂದಿಗೆ ಚರ್ಚಿಸಿ, ಗದಗ ಕಡೆ ಪ್ರಯಾಣ ಬೆಳೆಸಿದ್ದರು.

ಚುನಾವಣಾ ಪ್ರಚಾರಕ್ಕೆ ಮತ್ತೆ ಆಗಮನ: 1982ರಲ್ಲಿ ತುಲಾಭಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಾಜಪೇಯಿಯವರು ಮತ್ತೇ 1983ರಲ್ಲಿ ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣಾ ಪ್ರಚಾರದ ಸಲುವಾಗಿ ಆಗ ಗುಳೇದಗುಡ್ಡ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದ ಮಲ್ಲಿಕಾರ್ಜುನ ಬನ್ನಿಯವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿ, ಪ್ರಚಾರ ಕಾರ್ಯಕೈಗೊಂಡಿದ್ದರು, ಅಂದು ವಾಜಪೇಯಿಯವರು ಮಾಡಿದ ಚುನಾವಣಾ ಪ್ರಚಾರದ ನಂತರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಬನ್ನಿ ಗೆಲುವು ಸಾಧಿಸಿದ್ದರು.

1983ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗುಳೇದಗುಡ್ಡ ಮತಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿದ್ದ ನನ್ನ ಪರ ಪ್ರಚಾರ ಮಾಡಿದ್ದರು. ಆ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದ್ದೇ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರು ಅಜಾತ ಶತ್ರುವಾಗಿದ್ದರು, ರಾಜನೀತಿಜ್ಞರಾಗಿದ್ದರು. ನಿಜವಾಗಿಯುವ ಅವರು ಭಾರತ ಮಾತೆಯ ಸುಪುತ್ರ. ಅವರನ್ನು ಕಳೆದುಕೊಂಡು ಇಂದು ಭಾರತೀಯ ಜನತಾ ಪಾರ್ಟಿ ಬಡವಾಗಿದೆ.
ಮಲ್ಲಿಕಾರ್ಜುನ ಬನ್ನಿ, ಮಾಜಿ ಶಾಸಕ, ಗುಳೇದಗುಡ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರಿಗೆ 1982ರಲ್ಲಿ ಪಟ್ಟಣದಲ್ಲಿ ಬಿಜೆಪಿಯಿಂದ ತುಲಾಭಾರ ಮಾಡಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ ಅವರು ನಮ್ಮ ಮನೆಯಲ್ಲಿಯೇ ಮುಖಂಡರೊಂದಿಗೆ ಸೇರಿ ಊಟ ಮಾಡಿ, ಹೋಗಿದ್ದು ಇಂದಿಗೂ ಮರೆಯಲಾಗದಂತಹ ಕ್ಷಣ. ಆದರೆ ಇಂದು ಅಂತಹ  ಧೀಮಂತ ನಾಯಕ ನಮ್ಮನ್ನು ಬಿಟ್ಟು ಅಗಲಿದ್ದು ಬಹಳ ದುಃಖ ತರಿಸಿದೆ.
 ಸಂಪತ್‌ ರಾಠಿ, ಘನಶ್ಯಾಮದಾಸ್‌ ರಾಠಿಯವರ ಪುತ್ರ, ಗುಳೇದಗುಡ್ಡ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.