ಶಾಸಕರಿಂದ ಶರಾವತಿ ಅಣೆಕಟ್ಟು ಪ್ರದೇಶ ಪರಿಶೀಲನೆ


Team Udayavani, Aug 18, 2018, 4:31 PM IST

18-agust-17.jpg

ಹೊನ್ನಾವರ: ತಾಲೂಕಿನ ಶರಾವತಿ ಎಡಬಲ ದಂಡೆಯಲ್ಲಿ ನೆರೆ ಕಂಟಕ ಸಮಸ್ಯೆ ತಲೆದೋರಿದ ಹಿನ್ನೆಲೆಯಲ್ಲಿ ಶಾಸಕ ಸುನೀಲ್‌ ನಾಯ್ಕ ಶರಾವತಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆಯನ್ನು ಪರಿಶೀಲಿಸಿದರು. ಈಗ ಮಳೆಯ ಪ್ರಮಾಣ ಅಧಿ ಕವಾಗಿದ್ದು ಅಲ್ಲದೇ ಜಲಾಶಯದಲ್ಲಿ ಹೆಚ್ಚುವರಿ ನೀರು ಭರ್ತಿಯಾಗಿ ಹೊರಬಿಡುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭೇಟಿ ನೀಡಿದ ಶಾಸಕ ಸುನಿಲ್‌ ನಾಯ್ಕ ಕೆಪಿಸಿ ಅಧಿಕಾರಿಗಳೊಂದಿಗೆ ಪರಿಸ್ಥಿತಿಯ ಸೂಕ್ಷ್ಮತೆ ಬಗ್ಗೆ ಚರ್ಚಿಸಿದರು. 

ಕಾರ್ಯನಿರ್ವಾಹಕ ಅಭಿಯಂತರ ಶ್ರಿಲಕ್ಷ್ಮಿ ಹಾಗೂ ಕೆಪಿಸಿ ಅಧೀಕ್ಷಕ ಅಭಿಯಂತರ ಚೈತನ್ಯ ಪ್ರಭು, ಶಾಸಕರಿಗೆ ಅಣೆಕಟ್ಟಿನಲ್ಲಿ ಸಂಗ್ರಹವಾದ ನೀರಿನ ಮಟ್ಟ ಹಾಗೂ ನೀರು ಹೊರ ಬಿಡುವ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಕೆಪಿಸಿ ಅಧೀಕ್ಷಕ ಅಭಿಯಂತರ ಚೈತನ್ಯ ಪ್ರಭು ಮಾತನಾಡಿ, ವಿದ್ಯುತ್‌ ಉತ್ಪಾದನೆಗಿಂತ ಸಾವಿರಾರು ಕುಟುಂಬಗಳು ನದಿ ತಟದಲ್ಲಿ ವಾಸಿಸುತ್ತಿರುವುದರಿಂದ ಜಲಾಶಯದ ಗರಿಷ್ಠ ಮಟ್ಟ ತಲುಪುವ ಹಿನ್ನೆಲೆಯಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಡ್ಯಾಮ್‌ನಿಂದ ಹೆಚ್ಚುವರಿ ನಿರನ್ನು ಬಿಡಲಾಗಿದೆ. ರಾತ್ರಿ ಮಳೆಯಾಗುವ ಮುನ್ಸೂಚನೆ ಪಡೆದು ವಿದ್ಯುತ್‌ ಉತ್ಪಾದನೆ ಜೊತೆ ಜೊತೆಗೆ ನೀರಿನ ಪ್ರಮಾಣ 50ಸಾವಿರ ಕ್ಯೂಸೆಕ್‌ ಮೀರದ ರೀತಿಯಲ್ಲಿ ಜಾಗೃತಿ ವಹಿಸಿ ಹಗಲು ಸಮಯದಲ್ಲೇ ಹೆಚ್ಚುವರಿ ನೀರನ್ನು ಹೊರಬಿಡುತ್ತಿದ್ದೇವೆ.

ಹೊಸನಗರ, ತಿರ್ಥಹಳ್ಳಿ ಕಡೆಗೆ ಹೆಚ್ಚು ಮಳೆಯಾದರೆ ಜಲಾಶಯದ ಹಿತದೃಷ್ಟಿಯಿಂದ ಮಾತ್ರ ಅಧಿಕ ನೀರು ಬೀಡಲಾಗುತ್ತದೆ ಎಂದರು. ನದಿ ತಟದ ಜನರು ಸಹ ಆದಷ್ಟು ಜಾಗೃತಿ ವಹಿಸಿ ಮುನ್ನೆಚರಿಕೆಯಿಂದಿರಿ ಎಂದು ವಿನಂತಿಸಿದರು. ಜಲಾಶಯದ ಗರಿಷ್ಠ ಮಟ್ಟ ತಲಪುವವರೆಗು ಕಾದು ನೀರನ್ನು ಹೊರ ಬೀಡುತ್ತಾರೆ ಎಂದು ಜನರಿಂದ ದೂರು ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಜಲಾಶಯಗಳಲ್ಲಿ ಈ ತಪ್ಪು ಆಗಿರಬಹುದು. ಆದರೆ ಅದರಿಂದ ನಾವು ಪಾಠ ಕಲಿಯುತ್ತಿದ್ದೇವೆ. ನಮ್ಮಿಂದ ಅಂತಹ ತಪ್ಪು ನಡೆಯದಂತೆ ಗರಿಷ್ಠ ಪ್ರಯತ್ನ ನಡೆಸುತ್ತೇವೆ ಎಂದರು.

ಭಟ್ಕಳ ಶಾಸಕ ಸುನಿಲ್‌ ನಾಯ್ಕ ಮಾತನಾಡಿ ತಾನು ಕಳೆದೊಂದು ವಾರದಿಂದ ಜಲಾಶಯದ ಅಧಿಕಾರಿಗಳಿಂದ ಸಂಪರ್ಕದಲ್ಲಿದ್ದು ಮಾಹಿತಿ ಪಡೆದಿದ್ದೇನೆ. ನೆರೆಹಾವಳಿಯಿಂದ ಅನೇಕ ಗ್ರಾಮಗಳು ಮುಳುಗಡೆ ಹಂತದಲ್ಲಿದೆ. ಈ ಹಿನ್ನಲೆ ಗೆರುಸೊಪ್ಪಾ ವಿದ್ಯುತ್‌ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ್ದೇನೆ. ನದಿ ತಟದ ಜನರ ಹಿತದೃಷ್ಟಿಯಿಂದ ನೀರು ಬೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಈಗಾಗಲೇ ನೆರೆಹಾವಳಿಯಿಂದ ನದಿಪಾತ್ರದ ಅನೇಕ ಮನೆಗಳಿಗೆ, ತೂಗು ಸೇತುವೆಗಳಿಗೆ ಹಾನಿ ಸಂಭವಿಸಿದೆ, ಕೆಲವೆಡೆ ಗುಡ್ಡ ಕುಸಿತದ ವರದಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯವರಿಗೆ ಪ್ಯಾಕ್ಸ್‌ ಮೂಲಕ ಪತ್ರ ಕಳುಹಿಸಿದ್ದೇನೆ. ಹಾನಿ ಸಂಭವಿಸಿದ ಮನೆಗಳಿಗೆ ಸರ್ಕಾರ ಮಟ್ಟದಲ್ಲಿ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದರು.ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ್‌ ನಾಯ್ಕ, ಕೆಶವ ನಾಯ್ಕ ಬಳ್ಕೂರು, ಉಲ್ಲಾಸ ಶಾನಭಾಗ್‌, ಹರಿಶ್ಚಂದ್ರ ನಾಯ್ಕ, ಕೆಪಿಸಿ ಘಟಕದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.